AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

President Droupadi Murmu: ಎಚ್​ಎಎಲ್​ನಲ್ಲಿ 208 ಕೋಟಿ ಮೊತ್ತದ ರಾಕೆಟ್ ಎಂಜಿನ್ ಉತ್ಪಾದನಾ ಘಟಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ

ಮುಂದಿನ ದಿನಗಳಲ್ಲಿ ಇಸ್ರೋಗೆ ಈ ಘಟಕವು ಪೂರ್ಣ ಪ್ರಮಾಣದಲ್ಲಿ ಸಿದ್ಧಗೊಂಡಿರುವ ರಾಕೆಟ್ ಎಂಜಿನ್​ಗಳನ್ನು ಪೂರೈಸಲಿದೆ.

President Droupadi Murmu: ಎಚ್​ಎಎಲ್​ನಲ್ಲಿ 208 ಕೋಟಿ ಮೊತ್ತದ ರಾಕೆಟ್ ಎಂಜಿನ್ ಉತ್ಪಾದನಾ ಘಟಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ
ರಾಷ್ಟ್ರಪತಿ ದ್ರೌಪದಿ ಮುರ್ಮು (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 27, 2022 | 8:07 AM

Share

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಇದೀಗ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ದಸರಾ ಉತ್ಸವಕ್ಕೆ (Dasara Festival) ನಿನ್ನೆಯಷ್ಟೇ ಚಾಲನೆ ನೀಡಿದ್ದ ಅವರು, ಇಂದು ಬೆಂಗಳೂರಿನಲ್ಲಿ ₹ 208 ಕೋಟಿ ಮೊತ್ತದಲ್ಲಿ ಸಿದ್ಧಗೊಂಡಿರುವ ರಾಕೆಟ್ ಇಂಜಿನ್ ಉತ್ಪಾದನಾ ಘಟಕವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಎಚ್​ಎಎಲ್ (Hindustan Aeronautics Limited – HAL) ಈ ಘಟಕವನ್ನು ಇಸ್ರೋ (Indian Space Research Organisation – ISRO) ಸಂಸ್ಥೆಗಾಗಿ ಸ್ಥಾಪಿಸಿದೆ. ಈ ಘಟಕವನ್ನು ‘ಇಂಟಿಗ್ರೇಟೆಡ್ ಕ್ರಯೋಜೆನಿಕ್ ಇಂಜಿನ್ ಮ್ಯಾನುಫ್ಯಾಕ್ಚರಿಂಗ್ ಫೆಸಿಲಿಟಿ’ಗೆ (Integrated Cryogenic Engine Manufacturing Facility – ICMF) ಎಂದು ಕರೆಯಲಾಗುತ್ತದೆ.

ಮುಂದಿನ ದಿನಗಳಲ್ಲಿ ಇಸ್ರೋಗೆ ಈ ಘಟಕವು ಪೂರ್ಣ ಪ್ರಮಾಣದಲ್ಲಿ ಸಿದ್ಧಗೊಂಡಿರುವ ರಾಕೆಟ್ ಎಂಜಿನ್​ಗಳನ್ನು ಪೂರೈಸಲಿದೆ. ಎಚ್‌ಎಎಲ್‌ನ ಏರೋಸ್ಪೇಸ್ ವಿಭಾಗದಲ್ಲಿ ಕ್ರಯೋಜೆನಿಕ್ ಎಂಜಿನ್ ಮಾಡ್ಯೂಲ್‌ಗಳನ್ನು ಉತ್ಪಾದಿಸುವ ಸೌಲಭ್ಯವನ್ನು ಸ್ಥಾಪಿಸಲು 2013ರಲ್ಲಿ ಇಸ್ರೋದೊಂದಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ನಂತರ ₹ 208 ಕೋಟಿ ಹೂಡಿಕೆಯೊಂದಿಗೆ ICMF ಸ್ಥಾಪನೆಗೆ ಅವಕಾಶ ಕಲ್ಪಿಸಲು 2016ರಲ್ಲಿ ಒಪ್ಪಂದವನ್ನು ನವೀಕರಿಸಲಾಯಿತು.

ಕ್ರಯೋಜೆನಿಕ್ ಇಂಜಿನ್‌ಗಳು ವಿಶ್ವಾದ್ಯಂತ ಉಡಾವಣಾ ವಾಹನಗಳಲ್ಲಿ ಹೆಚ್ಚಾಗಿ ಬಳಸುವ ಎಂಜಿನ್‌ಗಳಾಗಿವೆ. ಫ್ರಾನ್ಸ್, ಚೀನಾ, ಜಪಾನ್, ರಷ್ಯಾ ಮತ್ತು ಅಮೆರಿಕಾ ಈ ಕೆಲವೇ ರಾಷ್ಟ್ರಗಳು ಕ್ರಯೋಜೆನಿಕ್ ಎಂಜಿನ್‌ ತಯಾರಿಕೆ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡಿವೆ. ಅತ್ಯಂತ ಸಂಕೀರ್ಣವಾದ ಈ ಎಂಜಿನ್​ಗಳ ತಯಾರಿಗೆ ಇದೀಗ ಭಾರತವೂ ಮುಂದಾಗಿದೆ. 2014ರಲ್ಲಿ GSLV-D5 ಅನ್ನು ಕ್ರಯೋಜೆನಿಕ್ ಎಂಜಿನ್ ಬಳಸಿ ಯಶಸ್ವಿಯಾಗಿ ಹಾರಿಸುವ ಮೂಲಕ ಭಾರತವು ಕ್ರಯೋಜೆನಿಕ್ ಎಂಜಿನ್‌ಗಳನ್ನು ಅಭಿವೃದ್ಧಿಪಡಿಸಿದ 6ನೇ ರಾಷ್ಟ್ರವೆಂಬ ಖ್ಯಾತಿಗೆ ಪಾತ್ರವಾಯಿತು.

ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮ

ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ (ಸೆ 27) ಬೆಂಗಳೂರಿನಲ್ಲಿ ಇಂಟಿಗ್ರೆಟೆಡ್ ಕ್ರಯೊಜಿನಿಕ್ ಎಂಜಿನ್ಸ್ ತಯಾರಿಕಾ ಸೌಲಭ್ಯವನ್ನು ಉದ್ಘಾಟನಾ ಸಮಾರಂಭದೊಂದಿಗೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ದಕ್ಷಿಣ ವಲಯ ವೈರಾಣು ಸಂಸ್ಥೆಗೆ ವರ್ಚುಯಲ್ ಆಗಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಸಮಾರಂಭ ಹಾಗೂ ಕರ್ನಾಟಕ ಸರ್ಕಾರದಿಂದ ಆಯೋಜಿಸಿರುವ ನಾಗರಿಕ ಸನ್ಮಾನ ಸಮಾರಂಭದಲ್ಲಿಯೂ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

Published On - 8:07 am, Tue, 27 September 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?