AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಪಡೆದ್ರೂ ಕರವೇ ಅಧ್ಯಕ್ಷ ನಾರಾಯಣಗೌಡಗೆ ತಪ್ಪದ ಸಂಕಷ್ಟ: ಮತ್ತೆ ವಶಕ್ಕೆ ಪಡೆಯಲು ಪೊಲೀಸ್​ ಚಿಂತನೆ

ಜಾಮೀನು ಪಡೆದರು ಕೂಡ ಅಧ್ಯಕ್ಷ ನಾರಾಯಣಗೌಡಗೆ ಸಂಕಷ್ಟ ತಪ್ಪಿಲ್ಲ. ಏಕೆಂದರೆ ಹಳೇ ಪ್ರಕರಣಗಳ ಸಂಬಂಧ ವಾರಂಟ್ ಮೇಲೆ ಮತ್ತೆ ಕಸ್ಟಡಿಗೆ ಪಡೆಯಲು ಕುಮಾರಸ್ವಾಮಿಲೇಔಟ್‌, ಹಲಸೂರು ಗೇಟ್ ಠಾಣೆ ಪೊಲೀಸರಿಂದ ಸಿದ್ಧತೆ ಮಾಡಲಾಗುತ್ತಿದೆ. ಆ ಮೂಲಕ ನಾರಾಯಣಗೌಡನನ್ನು ವಶಕ್ಕೆ ಪಡೆಯಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ.

ಜಾಮೀನು ಪಡೆದ್ರೂ ಕರವೇ ಅಧ್ಯಕ್ಷ ನಾರಾಯಣಗೌಡಗೆ ತಪ್ಪದ ಸಂಕಷ್ಟ: ಮತ್ತೆ ವಶಕ್ಕೆ ಪಡೆಯಲು ಪೊಲೀಸ್​ ಚಿಂತನೆ
ಕರವೇ ಅಧ್ಯಕ್ಷ ನಾರಾಯಣಗೌಡ
ರಾಚಪ್ಪಾಜಿ ನಾಯ್ಕ್
| Edited By: |

Updated on:Jan 06, 2024 | 7:25 PM

Share

ಬೆಂಗಳೂರು, ಜನವರಿ 06: ಆಂಗ್ಲ ನಾಮಫಲಕ ವಿರುದ್ಧ ಹೋರಾಟ ಮಾಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ (Narayana Gowda) ಗೆ ಜಾಮೀನು ಮಂಜೂರು ಮಾಡಲಾಗಿದೆ. ಜಾಮೀನು ಪಡೆದರು ಕೂಡ ಅಧ್ಯಕ್ಷ ನಾರಾಯಣಗೌಡಗೆ ಸಂಕಷ್ಟ ತಪ್ಪಿಲ್ಲ. ಏಕೆಂದರೆ ಹಳೇ ಪ್ರಕರಣಗಳ ಸಂಬಂಧ ವಾರಂಟ್ ಮೇಲೆ ಮತ್ತೆ ಕಸ್ಟಡಿಗೆ ಪಡೆಯಲು ಕುಮಾರಸ್ವಾಮಿಲೇಔಟ್‌, ಹಲಸೂರು ಗೇಟ್ ಠಾಣೆ ಪೊಲೀಸರಿಂದ ಸಿದ್ಧತೆ ಮಾಡಲಾಗುತ್ತಿದೆ.

ಹಿರಿಯ ಅಧಿಕಾರಿಗಳ ಸೂಚನೆಯಂತೆ ನಾರಾಯಣಗೌಡ ವಿರುದ್ಧದ ಹಳೇ ಕೇಸ್​ಗಳನ್ನು ಪೊಲೀಸರು ಕೆದಕುತ್ತಿದ್ದಾರೆ. ಬೆಂಗಳೂರಿನ ಎಲ್ಲಾ ಠಾಣೆಗಳ ಕೇಸ್ ರೀಓಪನ್ ಮಾಡಿ ನಾರಾಯಣಗೌಡನನ್ನು ವಶಕ್ಕೆ ಪಡೆಯಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಿದ ದೇವನಹಳ್ಳಿ ಕೋರ್ಟ್

2017ರಲ್ಲಿ ಎನ್​ಡಿಎಂಎ ಆ್ಯಕ್ಟ್​ನಡಿ ಹಲಸೂರು ಗೇಟ್ ಠಾಣೆಯಲ್ಲಿ ಒಂದು ಪ್ರಕರಣ, ಕುಮಾರಸ್ವಾಮಿ ಲೇಔಟ್‌ ಠಾಣೆಯಲ್ಲಿ ಮತ್ತೊಂದು ಕೇಸ್‌ ದಾಖಲಾಗಿದ್ದವು. ಈ ಕೇಸ್ ಸಂಬಂಧ ನಾರಾಯಣಗೌಡ ವಿರುದ್ಧ  NBW ಜಾರಿ ಮಾಡಲಾಗಿತ್ತು. ಇವೆರಡು ಕೇಸ್‌ಗಳ ಸಂಬಂಧ ವಾರಂಟ್ ಮೇಲೆ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ನಾರಾಯಣಗೌಡ ಸೇರಿದಂತೆ 33 ಕರವೇ ಕಾರ್ಯಕರ್ತರಿಗೂ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ ನ್ಯಾಯಾಧೀಶ ಬಿರಾದಾರ್ ದೇವೇಂದ್ರಪ್ಪ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಜಲಶಕ್ತಿ ಮಂತ್ರಿಗಳ ಜೊತೆ ಕರವೇ ನಾರಾಯಣ ಗೌಡ ಭೇಟಿಗೆ ಅವಕಾಶ; ಪ್ರಹ್ಲಾದ್ ಜೋಶಿ

ಕನ್ನಡದಲ್ಲಿ ನಾಮಫಲಕ ಅಳವಡಿಸುವಂತೆ ಪ್ರತಿಭಟನೆ ನಡೆಸಿದ್ದರು. ನಾರಾಯಣಗೌಡ ವಿರುದ್ಧ ಚಿಕ್ಕಜಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು, ಡಿ.27ರಂದು ಬಂಧಿಸಲಾಗಿತ್ತು.

ನಾರಾಯಣಗೌಡ ಬಂಧನಕ್ಕೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಕೋಲಾರ ಜಿಲ್ಲೆಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಾಲೂರು ಪಟ್ಟಣದ ಮಾರಿಕಾಂಬ ವೃತ್ತದಲ್ಲಿ ಬೆಂಗಳೂರು-ಮಾಲೂರು-ಹೊಸೂರು ಮಾರ್ಗದ ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದರು. ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:21 pm, Sat, 6 January 24

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು