AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಾಜಾಧಿರಾಜ ಗೋವಿಂದ ದೇವಸ್ಥಾನ ಲೋಕಾರ್ಪಣೆ ಮಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್

ಇಸ್ಕಾನ್ ಪ್ರಕಾರ, ಕನಕಪುರ ರಸ್ತೆಯಲ್ಲಿರುವ ವೈಕುಂಠ ಬೆಟ್ಟದಲ್ಲಿರುವ ಶ್ರೀ ರಾಜಾಧಿರಾಜ ಗೋವಿಂದ ದೇವಸ್ಥಾನವು ಸಾಂಪ್ರದಾಯಿಕ, ಕಲ್ಲಿನ ಕೆತ್ತಿದ ರಚನೆಯಾಗಿದೆ. ಇದು ಆಂಧ್ರಪ್ರದೇಶದ ತಿರುಮಲದಲ್ಲಿರುವ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದ ಪ್ರತಿರೂಪವಾಗಿದೆ

ಬೆಂಗಳೂರು: ರಾಜಾಧಿರಾಜ ಗೋವಿಂದ ದೇವಸ್ಥಾನ ಲೋಕಾರ್ಪಣೆ ಮಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್
ರಾಷ್ಟ್ರಪತಿ ರಾಮನಾಥ ಕೋವಿಂದ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 14, 2022 | 2:21 PM

ಬೆಂಗಳೂರು: ಇಸ್ಕಾನ್ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಮಂಗಳವಾರ ಲೋಕಾರ್ಪಣೆ ಮಾಡಿದ್ದಾರೆ. ಕನಕಪುರ ರಸ್ತೆಯ ವಸಂತಪುರದಲ್ಲಿ ನಿರ್ಮಿಸಲಾಗಿರುವ ದೇವಾಲಯಕ್ಕೆ ಕೋವಿಂದ್ ಪತ್ನಿ ಸವಿತಾ ಜತೆ ಆಗಮಿಸಿದ್ದು ದೇವರ ದರ್ಶನ ಪಡೆದಿದ್ದಾರೆ. ದೇವರ ದರ್ಶನ ನಂತರ ಉದ್ಘಾಟನಾ ಕಾರ್ಯಕ್ರಮ ನಡೆದಿದೆ. ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇಸ್ಕಾನ್ (International Society for Krishna Consciousness) ಪ್ರಕಾರ, ಕನಕಪುರ ರಸ್ತೆಯಲ್ಲಿರುವ ವೈಕುಂಠ ಬೆಟ್ಟದಲ್ಲಿರುವ ಶ್ರೀ ರಾಜಾಧಿರಾಜ ಗೋವಿಂದ ದೇವಸ್ಥಾನವು ಸಾಂಪ್ರದಾಯಿಕ, ಕಲ್ಲಿನ ಕೆತ್ತಿದ ರಚನೆಯಾಗಿದೆ. ಇದು ಆಂಧ್ರಪ್ರದೇಶದ ತಿರುಮಲದಲ್ಲಿರುವ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದ ಪ್ರತಿರೂಪವಾಗಿದೆ. ಇಲ್ಲಿರುವಶ್ರೀನಿವಾಸ ದೇವರು ಕೂಡಾ ಸರಿಸುಮಾರು ಅದೇ ಎತ್ತರವಿದ್ದು ಶ್ರೀ ರಾಜಾಧಿರಾಜ ಗೋವಿಂದ ಎಂದು ಹೆಸರಿಸಲಾಗಿದೆ, ಅಂದರೆ ಅವನು ರಾಜರ ರಾಜ ಎಂದು ಇಸ್ಕಾನ್ ಹೇಳಿದೆ.

ಈ ದೇವಾಲಯವು ಮಕ್ಕಳು, ಯುವಕರು ಮತ್ತು ಕುಟುಂಬಗಳ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಶಿಕ್ಷಣಕ್ಕಾಗಿ ಸೌಲಭ್ಯಗಳನ್ನು ಹೊಂದಿರುತ್ತದೆ. ರಾಜಾಧಿರಾಜ ಶ್ರೀ ಗೋವಿಂದ ಮತ್ತು ಇತರ ದೇವತೆಗಳ ದರ್ಶನಕ್ಕಾಗಿ ಭಕ್ತರು ಆರಾಮವಾಗಿ ಕಾಯಲು ದೊಡ್ಡ ಸರತಿ ಸಭಾಂಗಣ ಲಭ್ಯವಿರುತ್ತದೆ. ಉಚಿತ ಅನ್ನದಾನ ಹಾಲ್  ಇಲ್ಲಿರಲಿದ್ದು. ದಾನಿಗಳು ಮತ್ತು ಪೋಷಕರ ಉದಾರ ಕೊಡುಗೆಯೊಂದಿಗೆ ಈ ಸಂಕೀರ್ಣವನ್ನು ನಿರ್ಮಿಸಲಾಗಿದೆ. ದೇವಾಲಯದಿಂದ ಲಭ್ಯವಿರುವ ಮಾಹಿತಿಯ ಪ್ರಕಾರ ಈ ಕ್ಯಾಂಪಸ್ ಆಗಸ್ಟ್ 1, 2022 ರಿಂದ ಸಾರ್ವಜನಿಕರಿಗೆ ಸಂಪೂರ್ಣವಾಗಿ ತೆರೆದಿರುತ್ತದೆ.

ಗೋವಾ ಪ್ರವಾಸ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಗೋವಾ ಪ್ರವಾಸವನ್ನು ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ಅವರು ಹೊಸ ರಾಜಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಾಷ್ಟ್ರಪತಿಗಳು ಬುಧವಾರ ರಾಜ್ಯ ರಾಜಧಾನಿಯ ಡೋನಾ ಪೌಲಾ ಪ್ರದೇಶದಲ್ಲಿ ಹೊಸ ರಾಜಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೇ 30 ರಂದು ಗೋವಾ ರಾಜ್ಯೋತ್ಸವ ದಿನದಂದು ಅವರು ಶಂಕುಸ್ಥಾಪನೆ ಮಾಡಬೇಕಿತ್ತು, ಆದರೆ ಅದನ್ನು ರದ್ದುಗೊಳಿಸಿ ಮರು ನಿಗದಿಪಡಿಸಲಾಯಿತು. ಗೋವಾ ರಾಜ್ಯಪಾಲ ಪಿ.ಎಸ್. ಶ್ರೀಧರನ್‌ ಪಿಳ್ಳೈ, ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಮತ್ತು ಸಚಿವ ಸಂಪುಟ ಬುಧವಾರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ.

ರಾಜ್ಯದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:42 pm, Tue, 14 June 22

ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ