AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀವ್ ಗಾಂಧಿ ಆರೋಗ್ಯ ವಿವಿಯ 23ನೇ ಘಟಿಕೋತ್ಸವ | ವೈದ್ಯಕೀಯ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳ ಸಾಧನೆ ಅಪಾರ: ರಾಮನಾಥ​ ಕೋವಿಂದ್

ರಾಜೀವ್ ಗಾಂಧಿ ಆರೋಗ್ಯ ವಿವಿಯ 23ನೇ ಘಟಿಕೋತ್ಸವದ ಅಂಗವಾಗಿ ನಿಮ್ಹಾನ್ಸ್ ಸಮಾವೇಶ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ​ ಕೋವಿಂದ್​ ಭಾಗವಹಿಸಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿವಿಯ 23ನೇ ಘಟಿಕೋತ್ಸವ | ವೈದ್ಯಕೀಯ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳ ಸಾಧನೆ ಅಪಾರ: ರಾಮನಾಥ​ ಕೋವಿಂದ್
ರಾಷ್ಟ್ರಪತಿ ರಾಮ​ನಾಥ ಕೋವಿಂದ್
shruti hegde
| Edited By: |

Updated on: Feb 07, 2021 | 11:15 AM

Share

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿವಿಯ 23ನೇ ಘಟಿಕೋತ್ಸವದ ಅಂಗವಾಗಿ ನಿಮ್ಹಾನ್ಸ್ ಸಮಾವೇಶ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ​ ಕೋವಿಂದ್​ ಭಾಗವಹಿಸಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ ಹೆಣ್ಣುಮಕ್ಕಳಿಗೆ ಪದಕ ನೀಡಿ ಗೌರವಿಸಿದ್ದಾರೆ.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, ಘಟಿಕೋತ್ಸವದಲ್ಲಿ ಭಾಗಿಯಾಗಿರುವುದು ಸಂತೋಷ ತಂದಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಂದ ಸಾಧನೆ ಅಪಾರ. ಹೆಣ್ಣುಮಕ್ಕಳೇ ಹೆಚ್ಚು ಪದಕ ಪಡೆದಿರುವುದು ಹೆಮ್ಮೆಯ ವಿಷಯ. ಪದಕ ಪಡೆದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾತನಾಡಿದರು.

ಕೊರೊನಾದಿಂದ ಎಲ್ಲ ಕಡೆ ಸಾಕಷ್ಟು ಸಂಕಷ್ಟ ಎದುರಾಯಿತು. ಈ ನಿಟ್ಟಿನಲ್ಲಿ ವೈದ್ಯರು, ವೈದ್ಯ ವಿದ್ಯಾರ್ಥಿಗಳು ತಮ್ಮ ಜೀವ ಪಣಕ್ಕಿಟ್ಟು ಕೆಲಸ ಮಾಡಿದ್ದಾರೆ. ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಯುನಿವರ್ಸಿಟಿ ತರಬೇತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ ಕಡಿಮೆ ಸಮಯದಲ್ಲಿ ಹಲವು ವ್ಯಾಕ್ಸಿನ್​ಗಳ ಸಂಶೋಧನೆ ನಡೆಸಿದ್ದಾರೆ. ‘ಆತ್ಮನಿರ್ಭರ ಭಾರತ’ದಡಿ ವಿದೇಶಗಳಿಗೂ ಲಸಿಕೆ ನೀಡಲಾಗಿದೆ. ಈ ಕೊರೊನಾ ಸಂಕಷ್ಟ ಭವಿಷ್ಯದಲ್ಲಿ ಹೇಗೆ ಎಚ್ಚರವಾಗಿರಬೇಕು ಎಂಬುದರ ಕುರಿತಾಗಿ ಪಾಠ ಕಲಿಸಿಕೊಟ್ಟಿದೆ ಎಂದು ಅಭಿಪ್ರಾಯ ಹಂಚಿಕೊಂಡರು.

ನಿಮ್ಮ ಶಿಕ್ಷಣ ಇಲ್ಲಿಗೆ ಮುಗಿಯಲ್ಲ, ಒಂದು ಹಂತ ಮುಕ್ತಾಯವಾಗಿದೆ ಅಷ್ಟೆ. ಆರೋಗ್ಯ ಕ್ಷೇತ್ರದಲ್ಲಿ ಪ್ರತಿಕ್ಷಣ ಹೊಸ ಹೊಸ ಬೆಳವಣಿಗೆ ಆಗುತ್ತಿರಬೇಕು. ಕೊವಿಡ್ ಲಸಿಕೆ ಸಂಶೋಧನೆಗೆ ವಿಜ್ಞಾನಿಗಳೇ ಉದಾಹರಣೆ. ವೈರಸ್​ಅನ್ನು ತಕ್ಷಣಕ್ಕೆ ಹೇಗೆ ಅರ್ಥ ಮಾಡಿಕೊಂಡು ಅಧ್ಯಯನ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

President Ram Nath Kovind ಮಡಿಕೇರಿಗೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್; ತೂಗುದೀಪ ಬೆಳಗಿ ಯುದ್ಧ ಸ್ಮಾರಕ ಲೋಕಾರ್ಪಣೆ

Follow Us
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ