AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಹೋಟೆಲ್ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್; ಯಾವ ತಿಂಡಿಗೆ ಎಷ್ಟು ದರ? ಇಲ್ಲಿದೆ ಪರಿಷ್ಕೃತ ಪಟ್ಟಿ

ಬೆಂಗಳೂರಿನ ದರ್ಶಿನಿ, ಸರ್ವೀಸ್ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಎಸಿ ಸರ್ವೀಸ್ ಹೋಟೆಲ್‌ಗಳಲ್ಲಿನ ತಿಂಡಿ ತಿನಿಸು, ಪಾನೀಯಗಳ ಪರಿಷ್ಕೃತ ದರ ಪಟ್ಟಿ ಇಲ್ಲಿದೆ.

ಬೆಂಗಳೂರು ಹೋಟೆಲ್ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್; ಯಾವ ತಿಂಡಿಗೆ ಎಷ್ಟು ದರ? ಇಲ್ಲಿದೆ ಪರಿಷ್ಕೃತ ಪಟ್ಟಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Aug 01, 2023 | 5:01 PM

ಬೆಂಗಳೂರು, ಆಗಸ್ಟ್ 1: ಕರ್ನಾಟಕದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ಹೋಟೆಲ್ (Hotel Food) ಗ್ರಾಹಕರ ಮೇಲೂ ತಟ್ಟಿದೆ. ಬೆಂಗಳೂರಿನ ಹೋಟೆಲ್, ದರ್ಶಿನಿ ಹಾಗೂ ಉಪಾಹಾರ ಮಂದಿರಗಳಲ್ಲಿ ಮಂಗಳವಾರದಿಂದ (August 1) ತಿಂಡಿ ತಿನಿಸುಗಳ ಬೆಲೆಯನ್ನು ಹೆಚ್ಚಿಸಲಾಗಿದೆ. ಬೆಂಗಳೂರಿನ ಹೋಟೆಲ್ ಮಾಲೀಕರ ಸಂಘವು (Hotel Owners Association in Bengaluru) ಆಹಾರ ಪದಾರ್ಥಗಳ ಬೆಲೆಯನ್ನು ಶೇ 10 ವರೆಗೆ ಹೆಚ್ಚಿಸುವಂತೆ ಹೋಟೆಲ್‌ಗಳಿಗೆ ಸೂಚಿಸಿದೆ. ಆಗಸ್ಟ್ 1 ರಿಂದ ತರಕಾರಿ, ಪದಾರ್ಥಗಳು ಮತ್ತು ಡೈರಿ ಉತ್ಪನ್ನಗಳ ಬೆಲೆ ಹೆಚ್ಚಾಗಿದೆ. ಪ್ರತಿ ಲೀಟರ್ ಹಾಲಿನ ಬೆಲೆ 3 ರೂ. ಹೆಚ್ಚಳವಾಗಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಹೊರೆಯಾಗದ ರೀತಿಯಲ್ಲಿ ಆಹಾರ ಪದಾರ್ಥಗಳ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ನಗರದ ಹೋಟೆಲ್ ಮಾಲೀಕರೊಬ್ಬರು ತಿಳಿಸಿದ್ದಾರೆ.

ಹೋಟೆಲ್ ತಿಂಡಿಯ ಬೆಲೆ ಏರಿಕೆಯ ಬಗ್ಗೆ ಗ್ರಾಹಕರು ಆಶ್ಚರ್ಯಪಡುವುದಿಲ್ಲ. ತರಕಾರಿ ಮತ್ತು ಪದಾರ್ಥಗಳ ಬೆಲೆ ಏರಿಕೆಯ ಬಗ್ಗೆ ಅವರಿಗೆ ತಿಳಿದಿದೆ. ಏಕೆಂದರೆ ಅವರು ಅವುಗಳನ್ನು ನಿಯಮಿತವಾಗಿ ಮನೆಯಲ್ಲಿ ಬಳಸುತ್ತಾರೆ. ಶೇ 10ರಷ್ಟು ದರ ಹೆಚ್ಚಿಸುವಂತೆ ಹೋಟೆಲ್ ಮಾಲೀಕರ ಸಂಘ ಸಲಹೆ ನೀಡಿದ್ದು, ಅದನ್ನು ಪಾಲಿಸುತ್ತಿದ್ದೇವೆ ಎಂದು ಬೆಂಗಳೂರಿನ ದರ್ಶಿನಿ ಹೋಟೆಲ್​ಗಳ ಮಾಲೀಕರು ಹೇಳಿದ್ದಾರೆ.

ಇದನ್ನೂ ಓದಿ: ಗೃಹ ಜ್ಯೋತಿ ಯೋಜನೆಯಡಿ ಶೂನ್ಯ ವಿದ್ಯುತ್ ಬಿಲ್ ಪಡೆಯಲು ನೀವೂ ಅರ್ಹರೇ? ತಿಳಿಯುವ ವಿಧಾನ ಇಲ್ಲಿದೆ

ಬೆಂಗಳೂರಿನ ದರ್ಶಿನಿ, ಸರ್ವೀಸ್ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಎಸಿ ಸರ್ವೀಸ್ ಹೋಟೆಲ್‌ಗಳಲ್ಲಿನ ತಿಂಡಿ ತಿನಿಸು, ಪಾನೀಯಗಳ ಪರಿಷ್ಕೃತ ದರ ಪಟ್ಟಿ ಇಲ್ಲಿದೆ (ಕೃಪೆ; ನ್ಯೂಸ್ 9 ವರದಿ) (ದರ ರೂಪಾಯಿಗಳಲ್ಲಿ).

ಅಗತ್ಯ ವಸ್ತುಗಳ ದರ ಹೆಚ್ಚಳದ ಕಾರಣ ತಿಂಡಿ, ತಿನಿಸುಗಳ ಬೆಲೆ ಹೆಚ್ಚಿಸಲು ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಈ ಹಿಂದೆಯೇ ಚಿಂತನೆ ನಡೆಸಿತ್ತು. ಅದರ ಬೆನ್ನಲ್ಲೇ ಸರ್ಕಾರವು ಹಾಲಿನ ದರ ಹೆಚ್ಚಳಕ್ಕೆ ನಿರ್ಧಾರ ಕೈಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸಭೆ ನಡೆಸಿದ ಹೋಟೆಲ್ ಮಾಲೀಕರ ಸಂಘ ಅಂತಿಮವಾಗಿ ಶೇ 10ರ ದರ ಹೆಚ್ಚಳಕ್ಕೆ ತೀರ್ಮಾನ ಕೈಗೊಂಡಿತು. ಪರಿಷ್ಕೃತ ದರ ಈಗ ಅಸ್ತಿತ್ವಕ್ಕೆ ಬಂದಿದ್ದು, ಗ್ರಾಹಕರ ಜೇಬು ಸುಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ