AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರಿಕೆಯಾಗುತ್ತಲೇ ಇದೆ ಅಡುಗೆ ಎಣ್ಣೆ ದರ! ಪ್ರಮುಖ ಕಾರಣ ಇದೇ ನೋಡಿ

ಯುದ್ಧ ಶುರುವಾಗುತ್ತಿದ್ದಂತೆ ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ದುಬಾರಿಯಾಗಿತ್ತು. ಆದರೆ ಒಂದೂವರೆ ತಿಂಗಳಾದರೂ ದರ ಇನ್ನೂ ಇಳಿಕೆಯಾಗಿಲ್ಲ. ನಿರಂತರವಾಗಿ ಏರಿಕೆಯಾಗುತ್ತಿದೆ. ಸದ್ಯ ಮದುವೆ ಸೇರಿದಂತೆ ಸಮಾರಂಭಗಳು ಹೆಚ್ಚಾಗಿ ನಡೆಯುತ್ತಿವೆ.

ಏರಿಕೆಯಾಗುತ್ತಲೇ ಇದೆ ಅಡುಗೆ ಎಣ್ಣೆ ದರ! ಪ್ರಮುಖ ಕಾರಣ ಇದೇ ನೋಡಿ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:May 14, 2022 | 7:49 AM

Share

ಬೆಂಗಳೂರು: ಉಕ್ರೇನ್ – ರಷ್ಯಾ ನಡುವಿನ ಯುದ್ಧ ಭಾರತದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಅಡುಗೆ ಎಣ್ಣೆ ದರ (Cooking Oil Price) ಏರಿಕೆಯಾಗಿದೆ. ಯುದ್ಧ ಶುರುವಾಗುತ್ತಿದ್ದಂತೆ ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ದುಬಾರಿಯಾಗಿತ್ತು. ಆದರೆ ಒಂದೂವರೆ ತಿಂಗಳಾದರೂ ದರ ಇನ್ನೂ ಇಳಿಕೆಯಾಗಿಲ್ಲ. ನಿರಂತರವಾಗಿ ಏರಿಕೆಯಾಗುತ್ತಿದೆ. ಸದ್ಯ ಮದುವೆ ಸೇರಿದಂತೆ ಸಮಾರಂಭಗಳು ಹೆಚ್ಚಾಗಿ ನಡೆಯುತ್ತಿವೆ. ಹೀಗಾಗಿ ಅನಿವಾರ್ಯವಾಗಿ ದುಬಾರಿ ಬೆಲೆ ಕೊಟ್ಟೇ ಎಣ್ಣೆ ಖರೀದಿಸಬೇಕಾಗಿದೆ.

ಅಡುಗೆ ಎಣ್ಣೆಗಳ ದರ ಹೀಗಿದೆ: ಒಂದು ಕೆಜಿ ಪಾಮ್ ಎಣ್ಣೆಗೆ 168 ರೂ. ರಿಂದ 175 ರೂ. ಇದೆ. ಸನ್ ಫ್ಲವರ್ ಎಣ್ಣೆಗೆ 198 ರೂ. ರಿಂದ 210 ರೂ. ಇದ್ದರೆ, ಕಡಲೆ ಎಣ್ಣೆಗೆ 195 ರೂ. ರಿಂದ – 245 ರೂ. ಇದೆ. ರೈಸ್ ಬ್ರೌನ್ ಎಣ್ಣೆಗೆ 158 ರಿಂದ 165 ರೂ. ಇದೆ. ಜೊತೆಗೆ ಸೋಯಾ ರಿಫೈನ್ಡ್ ಆಯಿಲ್ಗೆ 165 ರಿಂದ 170 ರೂಪಾಯಿ ಇದೆ.

ಬೆಲೆ ಏರಿಕೆಗೆ ಮತ್ತೇನು ಕಾರಣ?: ಅಡುಗೆ ಎಣ್ಣೆ ಬೆಲೆ ಏರಿಕೆಗೆ ಕೇವಲ ಉಕ್ರೇನ್- ರಷ್ಯಾ ಯುದ್ಧ ಮಾತ್ರವಲ್ಲ. ಈ ದೇಶವೂ ಬೆಲೆ ಏರಿಕೆಗೆ ಕಾರಣವಾಗಿದೆ. ಇಂಡೋನೇಷ್ಯಾಗೆ ರಫ್ತು ಮಾಡದೇ ಇರುವುದು ಪ್ರಮುಖ ಕಾರಣ. ಉಕ್ರೇನ್ ರಷ್ಯಾ ಯುದ್ಧ ಜೊತೆಗೆ ಈ ದೇಶ ರಫ್ತು ಮಾಡದೇ ಇರುವುದೇ ಕಾರಣವಾಗಿದೆ. ಉಕ್ರೇನ್​ಗೆ ನಮ್ಮ ದೇಶ ಶೇ.45ರಷ್ಟು ಪಾಮ್‌ ಆಯಿಲ್ ರಫ್ತು ಮಾಡುತ್ತಿತ್ತು. ಇಂಡೋನೇಷ್ಯಾಗೆ ಶೇ.37ರಷ್ಟು ಎಣ್ಣೆ ರಫ್ತು ಮಾಡುತ್ತಿತ್ತು. ಆದ್ರೀಗ ಭಾರತ ದೇಶಕ್ಕೆ ರಫ್ತು ಸ್ಥಗಿತ ಮಾಡಿದ ಪರಿಣಾಮ ಇನ್ನಷ್ಟು ಬೆಲೆ ಏರಿಕೆಯಾಗಿದೆ. ಮಲೇಷ್ಯಾ ದೇಶವೂ ಕ್ರೂಡ್ ಅಯಿಲ್ ಬೆಲೆ ಏರಿಸಿ ಬೇಡಿಕೆಯಷ್ಟು ಎಣ್ಣೆ ರಫ್ತು ಮಾಡುತ್ತಿಲ್ಲ ಎಂದು ಅಡುಗೆ ಎಣ್ಣೆ ವರ್ತಕರ ಸಂಘದ ಅಧ್ಯಕ್ಷ ಸತ್ಯನಾರಾಯಣ ಬಾಬು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ
Image
Gold Price Today: ಒಂದೇ ದಿನದಲ್ಲಿ ದಾಖಲೆಯ 2,100 ಕುಸಿತ ಕಂಡ ಬೆಳ್ಳಿ ದರ; ಚಿನ್ನದ ಬೆಲೆಯೂ ಇಳಿಕೆ
Image
INR USD Exchange Rate Today: ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೇ 13ನೇ ತಾರೀಕಿನಂದು ಎಷ್ಟಿದೆ ಗೊತ್ತೆ?
Image
Price hike: ಮೇ ತಿಂಗಳ ಕೊನೆ ಅಥವಾ ಜೂನ್ ಮೊದಲಿಗೆ ಟಿವಿ, ಫ್ರಿಜ್ ಬೆಲೆ ಏರಿಕೆ? ಇನ್​ಪುಟ್ ವೆಚ್ಚ ಗ್ರಾಹಕರಿಗೆ ದಾಟಿಸಲು ಸಿದ್ಧತೆ
Image
Elon Musk: ಟ್ವಿಟ್ಟರ್ ಖರೀದಿಗೆ ತಾತ್ಕಾಲಿಕ ತಡೆ; ಬೇಡವೇ ಬೇಡ ಅಂದರೆ ಎಲಾನ್​ ಮಸ್ಕ್​ಗೆ 100 ಕೋಟಿ ಯುಎಸ್​ಡಿ ಬರೆ

ಶಾಲಾ ಮಕ್ಕಳಿಗೂ ತಟ್ಟಿದೆ ರಷ್ಯಾ ಉಕ್ರೇನ್ ಯುದ್ಧದ ಬಿಸಿ: ರಷ್ಯಾ-ಉಕ್ರೇನ್‌ ನಡುವಿನ ಯುದ್ಧದಿಂದಾಗಿ ಮುದ್ರಣ ಕಾಗದ ಸಿಗುತ್ತಿಲ್ಲ. ಕಚ್ಚಾ ಕಾಗದ ಇಲ್ಲದ ಕಾರಣ ಪಠ್ಯ ಮುದ್ರಣಕ್ಕೆ ಸಮಸ್ಯೆ ಎದುರಾಗಿದೆ. ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮುದ್ರಣ ಕಾಗದ ತಯಾರಿ ಕಾರ್ಖಾನೆಗಳು ಪ್ರತಿ ತಿಂಗಳು ಒಟ್ಟು ಬೇಡಿಕೆಯ ಕೇವಲ ಶೇ 10ರಷ್ಟು ಕಾಗದವನ್ನು ಮಾತ್ರ ಸರಬರಾಜು ಮಾಡುತ್ತಿವೆ. ಹೀಗಾಗಿ ಪಠ್ಯಪುಸ್ತಕ ಮುದ್ರಣ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಕೊವಿಡ್ ಆತಂಕ ಕಳಚಿಕೊಂಡ ನಂತರ ಶಾಲೆಗಳನ್ನು ಆರಂಭಿಸುವ ಉತ್ಸಾಹದಲ್ಲಿರುವ ಶಿಕ್ಷಣ ಇಲಾಖೆಯು ಈ ಬಾರಿ ವಾಡಿಕೆಗಿಂತಲೂ ಎರಡು ವಾರ ಮೊದಲು ಶಾಲೆಗಳ ಆರಂಭಕ್ಕೆ ಮುಂದಾಗಿದೆ. ಆದರೆ ಪಠ್ಯಪುಸ್ತಕ ಮುದ್ರಣ ಮತ್ತು ವಿತರಣೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

Published On - 7:28 am, Sat, 14 May 22

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?