AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಜನರಿಗೆ ಮೊತ್ತೊಂದು ಬೆಲೆ ಏರಿಕೆ ಬಿಸಿ; ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳಕ್ಕೆ ಚಿಂತನೆ

ಜನರಿಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ.

ರಾಜ್ಯದ ಜನರಿಗೆ ಮೊತ್ತೊಂದು ಬೆಲೆ ಏರಿಕೆ ಬಿಸಿ; ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳಕ್ಕೆ ಚಿಂತನೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Apr 05, 2022 | 12:39 PM

ಬೆಂಗಳೂರು: ಏಪ್ರಿಲ್ 04ರಂದು ರಾಜ್ಯದಲ್ಲಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಿ ಕೆಇಆರ್ಸಿ ಆದೇಶ ಹೊರಡಿಸಿದೆ. ಮತ್ತೊಂದೆಡೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಹೋಟೆಲ್‌, ಉಪಾಹಾರ ಮಂದಿರ ಮಾಲೀಕರು ತಿಂಡಿ, ಊಟ, ಟೀ, ಕಾಫಿ ಬೆಲೆಗಳಲ್ಲಿ ಶೇಕಡಾ 10ರಷ್ಟು ಹೆಚ್ಚಳ ಮಾಡಿವೆ. ಇದರ ನಡುವೆ ಈಗ ಜನರಿಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ.

ದರ ಏರಿಕೆಗೆ ಖಾಸಗಿ ವಾಹನ ಸಂಘಟನೆಗಳ ಚಿಂತನೆ ದಿನೇದಿನೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಶೇಕಡಾ 10ರಷ್ಟು ಖಾಸಗಿ ಬಸ್ ಪ್ರಯಾಣ ದರ ಏರಿಕೆ ಮಾಡಲು ಖಾಸಗಿ ವಾಹನ ಸಂಘಟನೆಗಳು ಚಿಂತನೆ ನಡೆಸಿವೆ. ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. ಬಾಡಿಗೆ ಜಾಸ್ತಿ ಮಾಡದೇ ಹೋದ್ರೆ ಬದುಕೋದು ಕಷ್ಟ ಎಂದು ಕರ್ನಾಟಕ ರಾಜ್ಯ ಖಾಸಗಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ರಾಮಕೃಷ್ಣ ಹೊಳ್ಳ ತಿಳಿಸಿದ್ದಾರೆ.

ಉಕ್ರೇನ್ ರಷ್ಯಾದ ಯುದ್ಧದ ಪರಿಣಾಮ. ಪೆಟ್ರೋಲಿಯಂ ಬೆಲೆ ಏರಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಡಿಸೇಲ್ ಬೆಲೆ 10 ರೂ ಜಾಸ್ತಿ ಆಗಿದೆ. ಜೊತೆಗೆ ಬೇರೆ ಬೇರೆ ವಲಯದಲ್ಲೂ ಬೆಲೆ ಏರಿಕೆಯಾಗ್ತಿದೆ. ಟೋಲ್ ದರವೂ ಸಹ ಹೆಚ್ಚಾಗಿದೆ. ಹೀಗಾಗಿ ನಾವೂ ಸಹ ದರ ಏರಿಕೆ ಮಾಡಬೇಕಾಗಿದೆ. ಶೇಕಡಾ 10ರಷ್ಟು ಏರಿಕೆ ಆಗಲೇಬೇಕಾಗಿದೆ. ಡಿಸೇಲ್ ಬೆಲೆ ಏರಿಕೆಯಾಗ್ತಿರೋದನ್ನ ನೋಡಿದ್ರೇ ಮುಂದಿನ ದಿನಗಳಲ್ಲಿ ಟ್ಯಾಕ್ಸಿ ಬಾಡಿಗೆ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಟ್ರಾನ್ಸ್ ಪೋರ್ಟ್ ಬೆಲೆ ಜಾಸ್ತಿಯಾಗೋದು ಅನಿವಾರ್ಯವಾಗಿದೆ. ನಾವೂ ಬೆಲೆ ಏರಿಕೆ ಮಾಡದೇ ಹೋದ್ರೆ ನಮ್ಮ ಉದ್ಯಮ ನಷ್ಟ ಅನುಭವಿಸಬೇಕಾಗುತ್ತೆ ಎಂದಿದ್ದಾರೆ. ಸದ್ಯ ದರ ಏರಿಕೆ ಬಗ್ಗೆ ಈ ವಾರ ಅಥವಾ ಮುಂದಿನ ವಾರ ಸಭೆ ಮಾಡಲು ಅಸೋಸಿಯೇಷನ್ ನಿರ್ಧರಿಸಿದೆ.

ಇದನ್ನೂ ಓದಿ: ಗೃಹ ಬಳಕೆ ವಿದ್ಯುತ್​ ದರ ಏರಿಕೆಯಾಯ್ತು! ಏಪ್ರಿಲ್​ 1ರಿಂದಲೇ ಯೂನಿಟ್​​ಗೆ 35 ಪೈಸೆ ಹೆಚ್ಚಳ, ಲೆಕ್ಕಾಚಾರ ಇಲ್ಲಿದೆ

ಬೆಲೆ ಏರಿಕೆ ನಮಗೆ ನುಂಗಲಾರದ ತುತ್ತಾಗಿದೆ, ತಿಂಡಿ ಬೆಲೆ ಶೇ. 10 ಜಾಸ್ತಿ ಮಾಡ್ತಿದ್ದೇವೆ -ಸಹಿಸಿಕೊಳೀ ಎಂದ ಹೋಟೆಲು ಮಾಲೀಕರು

ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್