ರಾಜ್ಯದ ಜನರಿಗೆ ಮೊತ್ತೊಂದು ಬೆಲೆ ಏರಿಕೆ ಬಿಸಿ; ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳಕ್ಕೆ ಚಿಂತನೆ

ಜನರಿಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ.

ರಾಜ್ಯದ ಜನರಿಗೆ ಮೊತ್ತೊಂದು ಬೆಲೆ ಏರಿಕೆ ಬಿಸಿ; ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳಕ್ಕೆ ಚಿಂತನೆ
ಪ್ರಾತಿನಿಧಿಕ ಚಿತ್ರ
Follow us
| Edited By: Ayesha Banu

Updated on: Apr 05, 2022 | 12:39 PM

ಬೆಂಗಳೂರು: ಏಪ್ರಿಲ್ 04ರಂದು ರಾಜ್ಯದಲ್ಲಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಿ ಕೆಇಆರ್ಸಿ ಆದೇಶ ಹೊರಡಿಸಿದೆ. ಮತ್ತೊಂದೆಡೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಹೋಟೆಲ್‌, ಉಪಾಹಾರ ಮಂದಿರ ಮಾಲೀಕರು ತಿಂಡಿ, ಊಟ, ಟೀ, ಕಾಫಿ ಬೆಲೆಗಳಲ್ಲಿ ಶೇಕಡಾ 10ರಷ್ಟು ಹೆಚ್ಚಳ ಮಾಡಿವೆ. ಇದರ ನಡುವೆ ಈಗ ಜನರಿಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ.

ದರ ಏರಿಕೆಗೆ ಖಾಸಗಿ ವಾಹನ ಸಂಘಟನೆಗಳ ಚಿಂತನೆ ದಿನೇದಿನೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಶೇಕಡಾ 10ರಷ್ಟು ಖಾಸಗಿ ಬಸ್ ಪ್ರಯಾಣ ದರ ಏರಿಕೆ ಮಾಡಲು ಖಾಸಗಿ ವಾಹನ ಸಂಘಟನೆಗಳು ಚಿಂತನೆ ನಡೆಸಿವೆ. ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. ಬಾಡಿಗೆ ಜಾಸ್ತಿ ಮಾಡದೇ ಹೋದ್ರೆ ಬದುಕೋದು ಕಷ್ಟ ಎಂದು ಕರ್ನಾಟಕ ರಾಜ್ಯ ಖಾಸಗಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ರಾಮಕೃಷ್ಣ ಹೊಳ್ಳ ತಿಳಿಸಿದ್ದಾರೆ.

ಉಕ್ರೇನ್ ರಷ್ಯಾದ ಯುದ್ಧದ ಪರಿಣಾಮ. ಪೆಟ್ರೋಲಿಯಂ ಬೆಲೆ ಏರಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಡಿಸೇಲ್ ಬೆಲೆ 10 ರೂ ಜಾಸ್ತಿ ಆಗಿದೆ. ಜೊತೆಗೆ ಬೇರೆ ಬೇರೆ ವಲಯದಲ್ಲೂ ಬೆಲೆ ಏರಿಕೆಯಾಗ್ತಿದೆ. ಟೋಲ್ ದರವೂ ಸಹ ಹೆಚ್ಚಾಗಿದೆ. ಹೀಗಾಗಿ ನಾವೂ ಸಹ ದರ ಏರಿಕೆ ಮಾಡಬೇಕಾಗಿದೆ. ಶೇಕಡಾ 10ರಷ್ಟು ಏರಿಕೆ ಆಗಲೇಬೇಕಾಗಿದೆ. ಡಿಸೇಲ್ ಬೆಲೆ ಏರಿಕೆಯಾಗ್ತಿರೋದನ್ನ ನೋಡಿದ್ರೇ ಮುಂದಿನ ದಿನಗಳಲ್ಲಿ ಟ್ಯಾಕ್ಸಿ ಬಾಡಿಗೆ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಟ್ರಾನ್ಸ್ ಪೋರ್ಟ್ ಬೆಲೆ ಜಾಸ್ತಿಯಾಗೋದು ಅನಿವಾರ್ಯವಾಗಿದೆ. ನಾವೂ ಬೆಲೆ ಏರಿಕೆ ಮಾಡದೇ ಹೋದ್ರೆ ನಮ್ಮ ಉದ್ಯಮ ನಷ್ಟ ಅನುಭವಿಸಬೇಕಾಗುತ್ತೆ ಎಂದಿದ್ದಾರೆ. ಸದ್ಯ ದರ ಏರಿಕೆ ಬಗ್ಗೆ ಈ ವಾರ ಅಥವಾ ಮುಂದಿನ ವಾರ ಸಭೆ ಮಾಡಲು ಅಸೋಸಿಯೇಷನ್ ನಿರ್ಧರಿಸಿದೆ.

ಇದನ್ನೂ ಓದಿ: ಗೃಹ ಬಳಕೆ ವಿದ್ಯುತ್​ ದರ ಏರಿಕೆಯಾಯ್ತು! ಏಪ್ರಿಲ್​ 1ರಿಂದಲೇ ಯೂನಿಟ್​​ಗೆ 35 ಪೈಸೆ ಹೆಚ್ಚಳ, ಲೆಕ್ಕಾಚಾರ ಇಲ್ಲಿದೆ

ಬೆಲೆ ಏರಿಕೆ ನಮಗೆ ನುಂಗಲಾರದ ತುತ್ತಾಗಿದೆ, ತಿಂಡಿ ಬೆಲೆ ಶೇ. 10 ಜಾಸ್ತಿ ಮಾಡ್ತಿದ್ದೇವೆ -ಸಹಿಸಿಕೊಳೀ ಎಂದ ಹೋಟೆಲು ಮಾಲೀಕರು

ತಾಜಾ ಸುದ್ದಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!