AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.1ರಿಂದ ಇರಲ್ಲ ವರ್ಕ್ ಫ್ರಮ್ ಹೋಮ್: ಬೆಂಗಳೂರಲ್ಲಿ ಟ್ರಾಫಿಕ್​ ಡಬಲ್​?

ಉದ್ಯೋಗಿಗಳಿಗೆ ನೀಡಲಾಗಿರುವ ವರ್ಕ್ ಫ್ರಮ್ ಹೋಮ್ ಸೌಲಭ್ಯವನ್ನ ಅಕ್ಟೋಬರ್ 1ರಿಂದ ಹಿಂಪಡೆಯಲು ಬಹುತೇಕ ಖಾಸಗಿ ಕಂಪನಿಗಳು ನಿರ್ಧರಿಸಿವೆ. ಇದರಿಂದಾಗಿ ಬೆಂಗಳೂರಲ್ಲಿ ಟ್ರಾಫಿಕ್​ ಸಮಸ್ಯೆ ಡಬಲ್​ ಆಗುವ ಸಾಧ್ಯತೆ ಇದ್ದು, ಅಂದಾಜಿನ ಪ್ರಕಾರ ಔಟರ್​ ರಿಂಗ್​ರೋಡ್​ ಒಂದರಲ್ಲಿಯೇ ಪ್ರತಿನಿತ್ಯ 10 ಲಕ್ಷ ಉದ್ಯೋಗಿಗಳು ಓಡಾಡುವ ನಿರೀಕ್ಷೆ ಇದೆ.

ಅ.1ರಿಂದ ಇರಲ್ಲ ವರ್ಕ್ ಫ್ರಮ್ ಹೋಮ್: ಬೆಂಗಳೂರಲ್ಲಿ ಟ್ರಾಫಿಕ್​ ಡಬಲ್​?
ಅ.1ರಿಂದ ಬೆಂಗಳೂರಲ್ಲಿ ಟ್ರಾಫಿಕ್​ ಡಬಲ್​?
ಕಿರಣ್​ ಸೂರ್ಯ
| Edited By: |

Updated on: Sep 29, 2025 | 4:25 PM

Share

ಬೆಂಗಳೂರು, ಸೆಪ್ಟೆಂಬರ್​ 29: ಅಕ್ಟೋಬರ್ 1ರಿಂದ ಬಹುತೇಕ ಖಾಸಗಿ ಕಂಪನಿಗಳ ವರ್ಕ್ ಫ್ರಮ್ ಹೋಮ್ (Work from Home) ಅಂತ್ಯವಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ (Bengaluru) ಟ್ರಾಫಿಕ್​ ಡಬಲ್​ ಆಗುವ ಸಾಧ್ಯತೆ ಹೆಚ್ಚಿದೆ. ಉದ್ಯೋಗಿಗಳು ಕಚೇರಿಗೇ ಹೋಗಿ ಕೆಲಸ ಮಾಡಬೇಕಿರುವ ಕಾರಣ ವಾಹನಗಳ ಓಡಾಟದ ಸಂಖ್ಯೆಯೂ ಸಹಜವಾಗಿ ಹೆಚ್ಚಲಿದೆ. ಅಂದಾಜಿನ ಪ್ರಕಾರ ಔಟರ್​ ರಿಂಗ್​ ರೋಡ್​ ಒಂದರಲ್ಲಿಯೇ ಪ್ರತಿನಿತ್ಯ 10 ಲಕ್ಷ ಉದ್ಯೋಗಿಗಳು ಓಡಾಡುವ ನಿರೀಕ್ಷೆ ಇದೆ.

ಬೆಂಗಳೂರಿನ ಬಹುತೇಕ ಖಾಸಗಿ ಕಂಪನಿಗಳು ವರ್ಕ್​ ಫ್ರಮ್​ ಹೋಮ್​ ಸೌಲಭ್ಯ ಹಿಂಪಡೆಯಲು ನಿರ್ಧರಿಸಿವೆ ಎನ್ನಲಾಗಿದ್ದು, ಶೇಕಡಾ 80ರಷ್ಟು ಐಟಿ ಕಂಪನಿಗಳು ಈ ತೀರ್ಮಾನಕ್ಕೆ ಮುಂದಾಗಿವೆಯಂತೆ. ಔಟರ್​ ರಿಂಗ್​ ರೋಡ್ ನಲ್ಲಿ ಸುಮಾರು 500ರಷ್ಟು ಪ್ರತಿಷ್ಟಿತ ಕಂಪನಿಗಳಿದ್ದು, ಎರಡು ಸಾವಿರ ಆಫೀಸ್ ಗಳಿವೆ. ಇವುಗಳಲ್ಲಿ ಬಹುತೇಕ ಕಂಪನಿಗಳು ತಮ್ಮ ನೌಕರರಿಗೆ ವರ್ಕ್​ ಫ್ರಮ್​ ಹೋಮ್​ ನೀಡಿದ್ದವು. ಆದರೆ ಈಗ ಉದ್ಯೋಗಿಗಳು ಮತ್ತೆ ಆಫೀಸ್​ ನತ್ತ ಮುಖ ಮಾಡಬೇಕಿರುವ ಕಾರಣ ಟ್ರಾಫಿಕ್​ ಸಹಜವಾಗಿಯೇ ಇನ್ನಷ್ಟು ಹೆಚ್ಚಾಗಲಿದೆ.

ಇದನ್ನೂ ಓದಿ: ಮೈಸೂರು ದಸರಾ ನೋಡಲು ಹೊರಟವರಿಗೆ ದರ ಏರಿಕೆಯ ಶಾಕ್

ಕಳೆದ ವರ್ಷದ ಅಂಕಿ-ಅಂಶದ ಆಧಾರದಲ್ಲಿ ಪ್ರತಿನಿತ್ಯ ಸುಮಾರು 82 ಸಾವಿರ ವಾಹನಗಳು ಔಟರ್​ ರಿಂಗ್​ ರೋಡ್ ಮೂಲಕ ಸಂಚರಿಸಿದ್ದವು. ಈ ವರ್ಷದಲ್ಲಿ ಅವುಗಳ ಸಂಖ್ಯೆ ಸುಮಾರು 1 ಲಕ್ಷದ 20 ಸಾವಿರಕ್ಕೆ ಹೆಚ್ಚಿತ್ತು. ಈಗ ವರ್ಕ್​ ಫ್ರಮ್​ ಹೋಮ್​ ಕ್ಯಾನ್ಸಲ್​ ಆಗುತ್ತಿರುವ ಕಾರಣ ಅಕ್ಟೋಬರ್ 1ರಿಂದ ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಈಗಾಗಲೇ ಸಂಚಾರ ದಟ್ಟಣೆ ಸಮಸ್ಯೆಯಿಂದ ಹೈರಾಣಾಗ್ತಿರೋ ವಾಹನ ಸವಾರರಿಗೆ ಖಾಸಗಿ ಕಂಪನಿಗಳ ಈ ನಿರ್ಧಾರ ಮತ್ತಷ್ಟು ತಲೆನೋವು ತಂದಿದೆ. ಒಂದೊಮ್ಮೆ ವರ್ಕ್​ ಫ್ರಮ್​ ಹೋಮ್​ ಕ್ಯಾನ್ಸಲ್​ ಆಗಿದ್ದೇ ಆದಲ್ಲಿ ಪ್ರತಿನಿತ್ಯ ಓಡಾಡುವ ಉದ್ಯೋಗಿಗಳ ಸಂಖ್ಯೆ ಬೆಂಗಳೂರಲ್ಲಿ ದ್ವಿಗುಣವಾಗುವ ನಿರೀಕ್ಷೆ ಇದೆ.

ಖಾಸಗಿ ಕಂಪನಿಗಳ ನಿರ್ಧಾರಕ್ಕೆ ವಿರೋಧ

ಖಾಸಗಿ ಕಂಪನಿಗಳ ಈ ನಿರ್ಧಾರಕ್ಕೆ ಗ್ರೇಟರ್ ಬೆಂಗಳೂರು ಐಟಿ ಕಂಪನೀಸ್ ಆ್ಯಂಡ್ ಇಂಡಸ್ಟ್ರೀಸ್ ಅಸೋಸಿಯೇಷನ್ ವಿರೋಧ ವ್ಯಕ್ತಪಡಿಸಿದೆ. ಉದ್ಯೋಗಿಗಳಿಗೆ ನೀಡಲಾಗಿರುವ ವರ್ಕ್ ಫ್ರಮ್ ಹೋಮ್ ಸೌಲಭ್ಯ ಹಿಂಪಡೆಯದಂತೆ ಆಗ್ರಹಿಸಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!