ಕಾರಾಗೃಹ ಇಲಾಖೆಯ ಕೋಟ್ಯಂತರ ರೂ ಮೌಲ್ಯದ ಕಟ್ಟಡವನ್ನೇ ಕಬ್ಜ ಮಾಡಿದ ಭಲೇ ಕಿಲಾಡಿಗಳು

ಬೆಂಗಳೂರು ಗಾಂಧಿನಗರದಲ್ಲಿರುವ ಸುಮಾರು 40-50 ಕೋಟಿ ರೂ ಮೌಲ್ಯದ ಕಾರಾಗೃಹ ಇಲಾಖೆಯ ಆಸ್ತಿಯನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿದ್ದಾರೆ. ಸದ್ಯ ಈ ಬಗ್ಗೆ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ಇಬ್ಬರು ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದ್ದು, ಇಬ್ಬರಿಗೂ ನೋಟಿಸ್ ಕೊಟ್ಟು ವಿಚಾರಣೆಗೆ ಕರೆದಿದ್ದಾರೆ.

ಕಾರಾಗೃಹ ಇಲಾಖೆಯ ಕೋಟ್ಯಂತರ ರೂ ಮೌಲ್ಯದ ಕಟ್ಟಡವನ್ನೇ ಕಬ್ಜ ಮಾಡಿದ ಭಲೇ ಕಿಲಾಡಿಗಳು
ಕಾರಾಗೃಹ ಇಲಾಖೆಯ ಕಟ್ಟಡ
Image Credit source: tv9 kannada
Edited By:

Updated on: May 29, 2026 | 3:31 PM

ಬೆಂಗಳೂರು, ಮೇ 29: ಸುಮಾರು 40ರಿಂದ 50 ಕೋಟಿ ರೂ ಮೌಲ್ಯದ ಕಾರಾಗೃಹ ಇಲಾಖೆಯ ಕಟ್ಟಡದ ಮೇಲೆ ಖದೀಮರು ಕಣ್ಣು ಹಾಕಿದ್ದಾರೆ. ಸ್ವತ್ತು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀನದಲ್ಲಿರುವ ಗಾಂಧಿನಗರದ 2ನೇ ಅಡ್ಡರಸ್ತೆಯಲ್ಲಿರುವ ಮೈಸೂರು ಡಿಸ್ಮಾರ್ಜ್ ಪ್ರಿಸನರ್ಸ್ ಏಡ್ ಸೊಸೈಟಿಯ ಆಸ್ತಿಯನ್ನು (Property) ಕಬ್ಜ ಮಾಡಲಾಗಿದೆ. ಈ ಬಗ್ಗೆ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಮುಖ್ಯಾಂಶಗಳು

  • ಮೈಸೂರು ಕಾರಾಗೃಹ ಆಸ್ತಿ ಕಬ್ಜ: ಕೋಟಿ ರೂ. ಮೌಲ್ಯದ ಜಾಗದ ಮೇಲೆ ಖದೀಮರ ಕಣ್ಣು
  • ಖಾಸಗಿ ವ್ಯಕ್ತಿಗಳ ಮೇಲೆ ದೂರು, ಪೊಲೀಸರಿಂದ ನೋಟಿಸ್​
  • ಕೆಲಸ ಮಾಡಿಸಲು ಮುಂದಾದ ಸಮಯದಲ್ಲಿ ಅತಿಕ್ರಮಣ ಬೆಳಕಿಗೆ

ಖಾಸಗಿ ವ್ಯಕ್ತಿಗಳ ವಿರುದ್ಧ ದೂರು

ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಗೆ ಸೇರಿದ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಾದ ಖಲಿಂ ಹಾಗೂ ಅನಿಲ್ ಎಂಬುವವರು ಕಳೆದ ಒಂದು ವರ್ಷದಿಂದಲೂ ಬಳಕೆ ಮಾಡುತ್ತಿದ್ದರು. ಶ್ರೀಶೈಲ್​​ ಎಸ್​ ಮೇಟಿ ಎಂಬುವವರು ಇಬ್ಬರ ವಿರುದ್ಧ ದೂರು ನೀಡಿದ್ದಾರೆ.

ಇದನ್ನೂ ಓದಿ: ಕೈದಿಗಳಿಗೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ

ಕಳೆದ ಒಂದು ವರ್ಷದಿಂದಲೂ ಕಾರಾಗೃಹ ಇಲಾಖೆಯ ಆಸ್ತಿಯನ್ನು ಅನುಮತಿ ಪಡೆಯದೇ ಕಟ್ಟಡದ ಒಂದನೇ ಮಹಡಿಯನ್ನು ಅನಿಲ್ ಅತಿಕ್ರಮಣ ಮಾಡಿದ್ದು, ಖಲಿಂ ಹಳೆಯ ಸಾಮಗ್ರಿಗಳನ್ನು ಕಾರಾಗೃಹ ಇಲಾಖೆಗೆ ಸೇರಿದ ಆಸ್ತಿಯಲ್ಲಿ ತಂದು ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಇಬ್ಬರಿಗೂ ನೋಟಿಸ್​​ ನೀಡಿರುವ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ.

ಜಾಗ ಅತಿಕ್ರಮಣವಾಗಿದ್ದು ಗೊತ್ತಾಗಿದ್ದು ಹೇಗೆ?

ಜೈಲಿನಲ್ಲಿ ತಯಾರಾಗುವ ಬೇಕರಿ ತಿನಿಸುಗಳು ಹಾಗೂ ಬಟ್ಟೆ ವ್ಯಾಪಾರ ಮಳಿಗೆ ತೆರೆಯಲು ಕಾರಾಗೃಹ ಇಲಾಖೆ ಸಜ್ಜಾಗಿತ್ತು. ಹೀಗಾಗಿ ಕಟ್ಟಡ ಹಳೆಯದಾದ ಹಿನ್ನೆಲೆ ಹೊಸದಾಗಿ ಕಟ್ಟಡ ನಿರ್ಮಾಣ ಮಾಡಿ ಜೈಲು ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲು ಮುಂದಾಗಿದೆ. ಈ ವೇಳೆ ಅತಿಕ್ರಮಣ ಆಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಜೈಲುಗಳಲ್ಲಿ ಅಕ್ರಮ ಚಟುವಟಿಕೆ ತಡೆಗೆ ಅಲೋಕ್ ಕುಮಾರ್ ದಿಟ್ಟ ಕ್ರಮ: ಕೈದಿಗಳ ಭೇಟಿಗೆ ಹೊಸ ರೂಲ್ಸ್

ಇನ್ನು ಮೈಸೂರು ಮಹಾರಾಜರು ಕಾರಾಗೃಹ ಇಲಾಖೆಗೆ ಹತ್ತು ಸಾವಿರ ಚದರ ಅಡಿ ಜಾಗವನ್ನು ದಾನವಾಗಿ ಕೊಟ್ಟಿದ್ದರು. ಇಂದಿನ ಮಾರುಕಟ್ಟೆಯ ಪ್ರಕಾರ ಜಾಗದ ಬೆಲೆ 40ರಿಂದ 50 ಕೋಟಿ ರೂ ಮೌಲ್ಯ ಎನ್ನಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:27 pm, Fri, 29 May 26

ಪ್ರಜ್ವಲ್​ ಕುಮಾರ್ ಎನ್​ ವೈ
Follow Us