AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸರ್ಕಾರದ ಶುಲ್ಕ ಆದೇಶಕ್ಕೆ ಖಾಸಗಿ ಶಾಲೆಗಳು ಗರಂ; ಕೋರ್ಟ್ ಮೆಟ್ಟಿಲೇರಲು ನಿರ್ಧಾರ

ಹೆಚ್ಚುವರಿ ಶುಲ್ಕ ಪಡೆದಿದ್ದರೆ ವಾಪಸ್ ಪೋಷಕರಿಗೆ ನೀಡಬೇಕು. ಬೋಧನಾ ಶುಲ್ಕ ಹೊರತುಪಡಿಸಿ ಬೇರೆ ಯಾವುದೇ ಶುಲ್ಕ ಪಡೆಯುವಂತಿಲ್ಲ. ಶಾಲಾ ಅಭಿವೃದ್ಧಿ ಶುಲ್ಕ, ಐಚ್ಛಿಕ ಶುಲ್ಕ, ಟ್ರಸ್ಟ್ ಹಾಗೂ ಸೊಸೈಟಿಗಳಿಗೆ ಯಾವುದೇ ಶುಲ್ಕ ಸ್ವೀಕರಿಸದಂತೆ ಸರ್ಕಾರ ನಿರ್ಬಂಧ ಹೇರಿದೆ.

ಕರ್ನಾಟಕ ಸರ್ಕಾರದ ಶುಲ್ಕ ಆದೇಶಕ್ಕೆ ಖಾಸಗಿ ಶಾಲೆಗಳು ಗರಂ; ಕೋರ್ಟ್ ಮೆಟ್ಟಿಲೇರಲು ನಿರ್ಧಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 14, 2021 | 10:17 AM

Share

ಬೆಂಗಳೂರು: ರಾಜ್ಯ ಸರ್ಕಾರದ ಆದೇಶದಿಂದ ಖಾಸಗಿ ಶಾಲೆಗಳು ಗರಂ ಆಗಿವೆ. ಕೋರ್ಟ್ ಹೇಳಿದ್ದೊಂದು, ಸರ್ಕಾರ ಮಾಡಿದ್ದೊಂದು ಅಂತ ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ಸಿಡಿದೆದ್ದಿದೆ. ಅಲ್ಲದೇ ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ. 2020-21ನೇ ಸಾಲಿನ ಶೈಕ್ಷಣಿಕ ವರ್ಷದ ಶುಲ್ಕ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್ ವಾರ್ಷಿಕ ಶುಲ್ಕದಲ್ಲಿ ಶೇ.15ರಷ್ಟು ವಿನಾಯತಿ ನೀಡಿ ಆದೇಶ ನೀಡಿದೆ. ಆದರೆ ರಾಜ್ಯ ಸರ್ಕಾರ ಭೋದನಾ ಶುಲ್ಕದಲ್ಲಿ ಮಾತ್ರ ಶೇ.85ರಷ್ಟು ಪಡೆಯಬೇಕು. ಬೇರೆ ಯಾವುದೇ ಶುಲ್ಕ ಪಡಿಯುವಂತಿಲ್ಲ ಅಂತಾ ಆದೇಶ ಮಾಡಿದೆ. ಈ ಆದೇಶಕ್ಕೆ ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ಗರಂ ಆಗಿದೆ.

ಹೆಚ್ಚುವರಿ ಶುಲ್ಕ ಪಡೆದಿದ್ದರೆ ವಾಪಸ್ ಪೋಷಕರಿಗೆ ನೀಡಬೇಕು. ಬೋಧನಾ ಶುಲ್ಕ ಹೊರತುಪಡಿಸಿ ಬೇರೆ ಯಾವುದೇ ಶುಲ್ಕ ಪಡೆಯುವಂತಿಲ್ಲ. ಶಾಲಾ ಅಭಿವೃದ್ಧಿ ಶುಲ್ಕ, ಐಚ್ಛಿಕ ಶುಲ್ಕ, ಟ್ರಸ್ಟ್ ಹಾಗೂ ಸೊಸೈಟಿಗಳಿಗೆ ಯಾವುದೇ ಶುಲ್ಕ ಸ್ವೀಕರಿಸದಂತೆ ಸರ್ಕಾರ ನಿರ್ಬಂಧ ಹೇರಿದೆ. ಈ ಆದೇಶ ಖಾಸಗಿ ಶಾಲೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಉಲ್ಲೇಖಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ ರಾಜ್ಯ ಸರ್ಕಾರ ಬೋಧನಾ ಶುಲ್ಕದಲ್ಲಿ ಶೇ.85 ಮಾತ್ರ ಪಡೆಯವಂತೆ ಆದೇಶ ಮಾಡಿದೆ. ಈ ಆದೇಶ ಮತ್ತೆ ಪೋಷಕರು ಮತ್ತು ಶಾಲೆಗಳ ನಡುವೆ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರದ ಈ ಆದೇಶದಿಂದ ಪೋಷಕರಿಗೆ ಒಟ್ಟಾರೆ 30-40 ರಷ್ಟು ವಿನಾಯತಿ ಸಿಗಲಿದೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದು, ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ

ರಶ್ಮಿಕಾ ಕೈ ಚರ್ಮದ ಬಣ್ಣ ಚೇಂಜ್​ ಆಗಿದ್ದೇಕೆ? ಪರದೆ ಹಿಂದಿನ ಕಹಾನಿ ಬಿಚ್ಚಿಟ್ಟ ಒಂದು ಫೋಟೋ

Children’s Day 2021: ಮಕ್ಕಳ ದಿನಾಚರಣೆಯ ಇತಿಹಾಸ ಮತ್ತು ಶುಭಕೋರಲು ಕೆಲವು ಸಂದೇಶಗಳು ಇಲ್ಲಿವೆ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ