AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಸಾರಿಗೆ ಸೇವೆ ಬಂದ್​ಗೆ ಶಾಲೆಗಳ ಒಕ್ಕೂಟದ ಬೆಂಬಲವಿಲ್ಲ, ಎಂದಿನಂತೆ ಖಾಸಗಿ ಶಾಲೆಗಳು ಓಪನ್

ಖಾಸಗಿ ಸಾರಿಗೆ ಒಕ್ಕೂಟ ಬಂದ್​ಗೆ ಕರೆ ನೀಡಿದ್ದು, ಇದಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿಲ್ಲ. ಪೋಷಕರೇ ಮಕ್ಕಳನ್ನು ಶಾಲೆಗೆ ತಂದು ಬೀಡಬೇಕು ಎಂದು ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿ ಮಾಡಿದರು.

ಖಾಸಗಿ ಸಾರಿಗೆ ಸೇವೆ ಬಂದ್​ಗೆ ಶಾಲೆಗಳ ಒಕ್ಕೂಟದ ಬೆಂಬಲವಿಲ್ಲ, ಎಂದಿನಂತೆ ಖಾಸಗಿ ಶಾಲೆಗಳು ಓಪನ್
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on: Sep 10, 2023 | 9:55 AM

ಬೆಂಗಳೂರು ಸೆ.10: ಇಂದು (ಸೆ.10) ಮಧ್ಯರಾತ್ರಿಯಿಂದ ನಾಳೆ (ಸೆ.11) ಮಧ್ಯರಾತ್ರಿವರೆಗೆ ಖಾಸಗಿ ಸಾರಿಗೆ ಒಕ್ಕೂಟ ಬಂದ್​ಗೆ (Private Vehicle Bandh) ಕರೆ ನೀಡಿದ್ದು, ಇದಕ್ಕೆ ಖಾಸಗಿ ಶಾಲೆಗಳ ಒಕ್ಕೂಟ (Private School Association) ಬೆಂಬಲ ವ್ಯಕ್ತಪಡಿಸಿಲ್ಲ. ಸೋಮವಾರ ಎಂದಿನಂತೆ ಖಾಸಗಿ ಶಾಲೆಗಳು (Private School) ತೆರೆಯಲಿವೆ. ಮಕ್ಕಳನ್ನು ಶಾಲೆಗೆ ತಂದು ಬೀಡುವುದು ಪೋಷಕರ ಜವಾಬ್ದಾರಿ. ಖಾಸಗಿ ಶಾಲೆಗಳ ವಾಹನಗಳ ಸಂಘ ಹಾಗೂ ಶಾಲಾ ವಾಹನಗಳ ಮಾಲೀಕರ ಸಂಘಟನೆ ಬಂದ್​​ಗೆ ಬೆಂಬಲ ಸೂಚಿಸಿವೆ. ಹೀಗಾಗಿ ನಾಳೆ ಶಾಲಾ ವಾಹನಗಳನ್ನು ರಸ್ತೆಗೆ ಇಳಿಸಲ್ಲ. ಮಕ್ಕಳನ್ನು ಕರೆದುಕೊಂಡು ಬರುವುದಿಲ್ಲ ಅಂತಿವೆ. ಹೀಗಾಗಿ ಪೋಷಕರೇ ಮಕ್ಕಳನ್ನು ಶಾಲೆಗೆ ತಂದು ಬೀಡಬೇಕು ಎಂದು ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿ ಮಾಡಿದರು.

ಆದರೆ ಆರ್ಕಿಡ್ ಶಾಲೆ ಸೇರಿದಂತೆ ಕೆಲವು ಖಾಸಗಿ ಶಾಲೆಗಳು ರಜೆ ಘೋಷಣೆ ಮಾಡಿವೆ. ಮಕ್ಕಳಿಗೆ ಶಾಲೆಗೆ ಬರಲು ಕಷ್ಟ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲೆಗಳು ರಜೆ ನೀಡಿವೆ.

ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದ ಬೆಂಗಳೂರಲ್ಲಿ ಖಾಸಗಿ ಸಾರಿಗೆ ಸೇವೆ ಬಂದ್​: 36 ಸಂಘಟನೆಗಳು ಬೆಂಬಲ

16 ಸಾವಿರ ವಾಹನಗಳು ನಾಳೆ ಬಂದ್‌ನಲ್ಲಿ ಭಾಗವಹಿಸುತ್ತೇವೆ

ಸುಮಾರು 16 ಸಾವಿರ ವಾಹನಗಳು ನಾಳೆ ಬಂದ್‌ನಲ್ಲಿ ಭಾಗವಹಿಸುತ್ತೇವೆ. ಸರ್ಕಾರಕ್ಕೆ ನಾವು ಹಲವು ಮನವಿಗಳನ್ನು ಸಲ್ಲಿಸಿದ್ದೇವೆ. 2013ರಲ್ಲಿ ರಾಮಲಿಂಗಾರೆಡ್ಡಿ ಇದ್ದಾಗಲೇ ಬೃಹತ್‌ ಹೋರಾಟ ಮಾಡಿದ್ದೇವೆ. ಆಗ ಅವರೇ ನಮ್ಮ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದ್ದರು. ಈಗಾಗಲೇ ನಾವು ಖಾಸಗಿ ಶಾಲಾಗಳಿಗೆ ನಾವು ಮನವಿ ಮಾಡಿದ್ದೇವೆ ಎಂದು ಕರ್ನಾಟಕ ಸಂಯುಕ್ತ ಶಾಲಾ ಹಾಗೂ ಲಘು ಚಾಲಕರ ಸಂಘ ಅಧ್ಯಕ್ಷ ಷಣ್ಮುಮುಗಂ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ