AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಸಾರಿಗೆ ಸೇವೆ ಬಂದ್​ಗೆ ಶಾಲೆಗಳ ಒಕ್ಕೂಟದ ಬೆಂಬಲವಿಲ್ಲ, ಎಂದಿನಂತೆ ಖಾಸಗಿ ಶಾಲೆಗಳು ಓಪನ್

ಖಾಸಗಿ ಸಾರಿಗೆ ಒಕ್ಕೂಟ ಬಂದ್​ಗೆ ಕರೆ ನೀಡಿದ್ದು, ಇದಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿಲ್ಲ. ಪೋಷಕರೇ ಮಕ್ಕಳನ್ನು ಶಾಲೆಗೆ ತಂದು ಬೀಡಬೇಕು ಎಂದು ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿ ಮಾಡಿದರು.

ಖಾಸಗಿ ಸಾರಿಗೆ ಸೇವೆ ಬಂದ್​ಗೆ ಶಾಲೆಗಳ ಒಕ್ಕೂಟದ ಬೆಂಬಲವಿಲ್ಲ, ಎಂದಿನಂತೆ ಖಾಸಗಿ ಶಾಲೆಗಳು ಓಪನ್
ಸಾಂದರ್ಭಿಕ ಚಿತ್ರ
Vinay Kashappanavar
| Updated By: ವಿವೇಕ ಬಿರಾದಾರ|

Updated on: Sep 10, 2023 | 9:55 AM

Share

ಬೆಂಗಳೂರು ಸೆ.10: ಇಂದು (ಸೆ.10) ಮಧ್ಯರಾತ್ರಿಯಿಂದ ನಾಳೆ (ಸೆ.11) ಮಧ್ಯರಾತ್ರಿವರೆಗೆ ಖಾಸಗಿ ಸಾರಿಗೆ ಒಕ್ಕೂಟ ಬಂದ್​ಗೆ (Private Vehicle Bandh) ಕರೆ ನೀಡಿದ್ದು, ಇದಕ್ಕೆ ಖಾಸಗಿ ಶಾಲೆಗಳ ಒಕ್ಕೂಟ (Private School Association) ಬೆಂಬಲ ವ್ಯಕ್ತಪಡಿಸಿಲ್ಲ. ಸೋಮವಾರ ಎಂದಿನಂತೆ ಖಾಸಗಿ ಶಾಲೆಗಳು (Private School) ತೆರೆಯಲಿವೆ. ಮಕ್ಕಳನ್ನು ಶಾಲೆಗೆ ತಂದು ಬೀಡುವುದು ಪೋಷಕರ ಜವಾಬ್ದಾರಿ. ಖಾಸಗಿ ಶಾಲೆಗಳ ವಾಹನಗಳ ಸಂಘ ಹಾಗೂ ಶಾಲಾ ವಾಹನಗಳ ಮಾಲೀಕರ ಸಂಘಟನೆ ಬಂದ್​​ಗೆ ಬೆಂಬಲ ಸೂಚಿಸಿವೆ. ಹೀಗಾಗಿ ನಾಳೆ ಶಾಲಾ ವಾಹನಗಳನ್ನು ರಸ್ತೆಗೆ ಇಳಿಸಲ್ಲ. ಮಕ್ಕಳನ್ನು ಕರೆದುಕೊಂಡು ಬರುವುದಿಲ್ಲ ಅಂತಿವೆ. ಹೀಗಾಗಿ ಪೋಷಕರೇ ಮಕ್ಕಳನ್ನು ಶಾಲೆಗೆ ತಂದು ಬೀಡಬೇಕು ಎಂದು ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿ ಮಾಡಿದರು.

ಆದರೆ ಆರ್ಕಿಡ್ ಶಾಲೆ ಸೇರಿದಂತೆ ಕೆಲವು ಖಾಸಗಿ ಶಾಲೆಗಳು ರಜೆ ಘೋಷಣೆ ಮಾಡಿವೆ. ಮಕ್ಕಳಿಗೆ ಶಾಲೆಗೆ ಬರಲು ಕಷ್ಟ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲೆಗಳು ರಜೆ ನೀಡಿವೆ.

ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದ ಬೆಂಗಳೂರಲ್ಲಿ ಖಾಸಗಿ ಸಾರಿಗೆ ಸೇವೆ ಬಂದ್​: 36 ಸಂಘಟನೆಗಳು ಬೆಂಬಲ

16 ಸಾವಿರ ವಾಹನಗಳು ನಾಳೆ ಬಂದ್‌ನಲ್ಲಿ ಭಾಗವಹಿಸುತ್ತೇವೆ

ಸುಮಾರು 16 ಸಾವಿರ ವಾಹನಗಳು ನಾಳೆ ಬಂದ್‌ನಲ್ಲಿ ಭಾಗವಹಿಸುತ್ತೇವೆ. ಸರ್ಕಾರಕ್ಕೆ ನಾವು ಹಲವು ಮನವಿಗಳನ್ನು ಸಲ್ಲಿಸಿದ್ದೇವೆ. 2013ರಲ್ಲಿ ರಾಮಲಿಂಗಾರೆಡ್ಡಿ ಇದ್ದಾಗಲೇ ಬೃಹತ್‌ ಹೋರಾಟ ಮಾಡಿದ್ದೇವೆ. ಆಗ ಅವರೇ ನಮ್ಮ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದ್ದರು. ಈಗಾಗಲೇ ನಾವು ಖಾಸಗಿ ಶಾಲಾಗಳಿಗೆ ನಾವು ಮನವಿ ಮಾಡಿದ್ದೇವೆ ಎಂದು ಕರ್ನಾಟಕ ಸಂಯುಕ್ತ ಶಾಲಾ ಹಾಗೂ ಲಘು ಚಾಲಕರ ಸಂಘ ಅಧ್ಯಕ್ಷ ಷಣ್ಮುಮುಗಂ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ