AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುತ್ವಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ಒತ್ತಾಯ: ಇಂದು ಹಿಂದೂ ಜನಜಾಗೃತಿ ಸಮಿತಿ ಸಭೆ

ಹಿಂದುತ್ವ ಪರ ಹೋರಾಟಗಳಲ್ಲಿ ಭಾಗಿಯಾದವರ ಮೇಲೆ ಹೂಡಿರುವ ಎಲ್ಲ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.

ಹಿಂದುತ್ವಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ಒತ್ತಾಯ: ಇಂದು ಹಿಂದೂ ಜನಜಾಗೃತಿ ಸಮಿತಿ ಸಭೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 08, 2022 | 10:08 AM

Share

ಬೆಂಗಳೂರು: ಮಸೀದಿಗಳಲ್ಲಿ ಆಜಾನ್ ಕೂಗಲು ಧ್ವನಿವರ್ಧಕ ಬಳಸುವ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಹಿಂದುತ್ವ ಪರ ಸಂಘಟನೆಗಳು ನಿರ್ಧರಿಸಿವೆ. ಮುಂಜಾನೆ 10.30ಕ್ಕೆ ರಾಜಾಜಿನಗರದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಈ ಸಂಬಂಧ ಮಹತ್ವದ ಸಭೆ ನಡೆಯಲಿದೆ. ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ನೀಡಿದ್ದ ಗಡುವು ನಾಳೆಗೆ (ಮೇ 9) ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ರೂಪರೇಷೆಯನ್ನು ಸಭೆಯಲ್ಲಿ ನಿರ್ಧರಿಸಲು ಪ್ರಮುಖರು ನಿರ್ಧರಿಸಿದ್ದಾರೆ. ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಹಿಂದೂ ಮಹಾಸಭಾ, ರಾಷ್ಟ್ರ ರಕ್ಷಣಾ ಪಡೆ ಮತ್ತು ಕೆಲ ಮಠಾಧೀಶರು ಭಾಗಿಯಾಗುವ ಸಾಧ್ಯತೆಯಿದೆ.

ಈ ಹಿಂದೆ ನಡೆದ ಹಿಜಾಬ್ ವಿರೋಧಿ ಹೋರಾಟ, ಹಲಾಲ್ ಬಾಯ್ಕಾಟ್ ಅಭಿಯಾನ ಮತ್ತು ಶಾಲೆಗಳಲ್ಲಿ ಭಗವದ್ಗೀತೆ ಭೋದನೆಗೆ ಆಗ್ರಹಿಸಿ ನಡೆದ ಹೋರಾಟಗಳಲ್ಲಿ ಭಾಗಿಯಾದವರ ಮೇಲೆ ಹೂಡಿರುವ ಎಲ್ಲ ಮೊಕದ್ದಮೆಗಳನ್ನು ಹಿಂಪಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರವನ್ನು ಒತ್ತಾಯಿಸಲು ನಾಳೆಯಿಂದ ಮನೆಮನೆ ರಾಮ ಭಜನೆ ಅಭಿಯಾನ ಆರಂಭಿಸಲಾಗುವುದು. ದೇವಾಲಯಗಳ ಮೇಲೆ ಲೌಡ್ ಸ್ಪೀಕರ್ ಅಳವಡಿಸಿ ಆಜಾನ್​​ ಕೂಗುವುದಕ್ಕೆ ಸೆಡ್ಡು ಹೊಡೆಯುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

ಮಸೀದಿಗಳ ಬಳಿಯ ದೇಗುಲಗಳಲ್ಲಿ ಹನುಮಾನ್ ಚಾಲೀಸಾ

ಕಲಬುರಗಿ: ಮಸೀದಿಗಳಲ್ಲಿ ಸೌಡ್​ ಸ್ಪೀಕರ್ ಬಳಸಿ ಆಜಾನ್ ಕೂಗುವ ಪದ್ಧತಿಯನ್ನು ವಿರೋಧಿಸುತ್ತಿರುವ ಶ್ರೀರಾಮಸೇನೆಯು ಮೇ 9ರಿಂದ ಮಸೀದಿಗಳ ಸಮೀಪದ ದೇಗುಲಗಳಲ್ಲಿ ಹನುಮಾನ್ ಚಾಲೀಸ ಮತ್ತು ಭಜನೆಗಳನ್ನು ಲೌಡ್​ಸ್ಪೀಕರ್​ಗಳಲ್ಲಿ ಮೊಳಗಿಸುವುದಾಗಿ ಹೇಳಿದೆ. ಈ ಕುರಿತು ಮಾಹಿತಿ ನೀಡಿರುವ ಶ್ರೀರಾಮಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಆಟೊ ನಿಲ್ದಾಣ ಬಳಿಯ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಹಾಕಲಾಗುವುದು. ಮಧ್ಯಾಹ್ನ 12ರಿಂದ 2 ಗಂಟೆಯವರಗೆ ಭಜನೆ, ಹನುಮಾನ ಚಾಲಿಸಾ ಪಠಿಸಲಾಗುವುದು. ಮಸೀದಿ ಮೇಲಿನ ಧ್ವನಿವರ್ಧಕ ತೆರವುಗೊಳಿಸದೇ ಇರುವುದರಿಂದ ಜನರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಏನಾದರೂ ಅನಾಹುತವಾದರೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಸಿದ್ದಲಿಂಗ ಸ್ವಾಮಿಜಿ ಎಚ್ಚರಿಕೆ ನೀಡಿದರು.

ಮಸೀದಿಗಳಲ್ಲಿ ಆಜಾನ್ ಮೊಳಗಿಸಲು ಲೌಡ್​ಸ್ಪೀಕರ್ ಬಳಸುವುದನ್ನು ವಿರೋಧಿಸುತ್ತಿರುವ ಶ್ರೀರಾಮಸೇನೆ, ಸುಪ್ರೀಂಕೋರ್ಟ್ ತೀರ್ಪು ಜಾರಿ ಮಾಡಲು ನೀಡಿದ್ದ ಗಡುವಿಗೆ ಇನ್ನೊಂದು ದಿನ ಮಾತ್ರ ಬಾಕಿಯಿದೆ. ನಾಳೆಯಿಂದ ರಾಜ್ಯದ ಬಹುತೇಕ ದೇವಸ್ಥಾನಗಳಲ್ಲಿ ರಾಮಮಂತ್ರ, ಹನುಮಾನ್ ಚಾಲೀಸದ ಜೊತೆಗೆ ವೇದಮಂತ್ರಗಳನ್ನು ಮೊಳಗಿಸಲು ಶ್ರೀರಾಮಸೇನೆ ಮತ್ತು ಇತರ ಹಿಂದುತ್ವಪರ ಸಂಘಟನೆಗಳು ಮುಂದಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಪೂರ್ವನಿಗದಿಯಂತೆ 9ರಿಂದ ದೇವಸ್ಥಾನಗಳಲ್ಲೂ ಲೌಡ್ ಸ್ಪೀಕರ್ ಅಳವಡಿಸಲು ಕಾರ್ಯಕರ್ತರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: Loud Speakers: ಮಸೀದಿಗಳ ಬಳಿಯ ದೇಗುಲಗಳಲ್ಲಿ ಹನುಮಾನ್ ಚಾಲೀಸಾ: ಮತ್ತೊಂದು ಮಜಲಿಗೆ ಆಜಾನ್ ವಿವಾದ

ಇದನ್ನೂ ಓದಿ: Raj Thackeray ನಾಳೆ ಧ್ವನಿವರ್ಧಕಗಳಲ್ಲಿ ಆಜಾನ್ ಕೂಗಿದರೆ ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾ ನುಡಿಸಿ: ರಾಜ್ ಠಾಕ್ರೆ ಕರೆ

Published On - 10:06 am, Sun, 8 May 22

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ