AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಅಧಿಕೃತ ಭಾಷೆಯಾಗಿ ತುಳು ಘೋಷಣೆಗೆ ಅಧಿವೇಶನದಲ್ಲಿ ಪ್ರಸ್ತಾಪ; ಪರಿಶೀಲಿಸುವುದಾಗಿ ಹೇಳಿದ ಸಚಿವ ತಂಗಡಗಿ

ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುವಂತೆ ಒತ್ತಾಯ ಮಾಡಲಾಗುತ್ತಿದೆ. ಇದೀಗ, ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಂತೆ ಕರ್ನಾಟಕ ಸರ್ಕಾರವನ್ನು ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಒತ್ತಾಯಿಸಿದ್ದಾರೆ.

ಎರಡನೇ ಅಧಿಕೃತ ಭಾಷೆಯಾಗಿ ತುಳು ಘೋಷಣೆಗೆ ಅಧಿವೇಶನದಲ್ಲಿ ಪ್ರಸ್ತಾಪ; ಪರಿಶೀಲಿಸುವುದಾಗಿ ಹೇಳಿದ ಸಚಿವ ತಂಗಡಗಿ
ತುಳು ಭಾಷಣೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವಂತೆ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿದ ಶಾಸಕ ಅಶೋಕ್ ರೈ
ಕಿರಣ್​ ಹನಿಯಡ್ಕ
| Edited By: |

Updated on: Jul 18, 2023 | 8:55 PM

Share

ವಿಧಾನಸಭೆ: ತುಳು ಭಾಷೆಯನ್ನು (Tulu Language) ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಂತೆ ಅಧಿವೇಶನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ರೈ (Ashok Rai) ಮನವಿ ಮಾಡಿದರು. ಇದನ್ನು ತುಳು ಭಾಷೆಯಲ್ಲೇ ಪ್ರಸ್ತಾಪಿಸುತ್ತಲೇ ಸರ್ಕಾರದ ಗಮನ ಸೆಳೆದರು. ಇದಕ್ಕೆ ಸ್ಪೀಕರ್ ಯುಟಿ ಖಾದರ್ (UT Khader) ಅವರು ತುಳು ಭಾಷೆಯಲ್ಲೇ ಪ್ರತಿಕ್ರಿಯೆ ನೀಡಿದರು.

ಈ ವೇಳೆ ಜಿಲ್ಲೆಯ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು, ತುಳುವಿನಲ್ಲೇ ಮಾತಾಡಲು ಮುಂದಾದಾಗ ಕನ್ನಡದಲ್ಲೇ ಮಾತನಾಡಿ ಎಂದು ಸ್ಪೀಕರ್ ಸೂಚಿಸಿದರು. ಬಳಿಕ ಅವರು ಕನ್ನಡ ಮತ್ತು ತುಳುವಿನಲ್ಲಿ ಮಾತನಾಡಿದರು. ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಸದಸ್ಯ ಬಸವರಾಜ ರಾಯರೆಡ್ಡಿ, ತುಳು ಭಾಷೆ ಮಾತನಾಡುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಬರೆದುಕೊಳ್ಳುವವರಿಗೆ ಸಮಸ್ಯೆ ಆಗುತ್ತದೆ ಎಂದರು.

ಇದನ್ನೂ ಓದಿ: ಸರ್ಕಾರಕ್ಕೆ ಖುಷಿಯಾಗುವ ವಿಷಯ ಮಾತಾಡಿ ಮಾರಾಯಾ: ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್​ಗೆ ಸ್ಪೀಕರ್ ಖಾದರ್ ಸೂಚನೆ

ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಅರ್ಥ ಆಗದೇ ಉತ್ತರ ಕೊಡುವುದು ಹೇಗೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್, ತುಳು ಮಾತನಾಡಿದಾಗ ಎಲ್ಲರೂ ಖುಷಿ ಖುಷಿಯಿಂದ ಇದ್ದರು. ತುಳು ಮಾತಾಡುವವರು ಎಲ್ಲರನ್ನೂ ಖುಷಿಯಾಗಿರಿಸುತ್ತಾರೆ. ನೀವು ಕೂಡ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ಎಂದು ಸಲಹೆ ನೀಡಿದರು.

ನೀವು ಕಾನೂನು ಇಲಾಖೆ, ಎಲ್ಲಾ ಇಲಾಖೆಗಳ ವರದಿಗಳನ್ನು ತರಿಸಿಕೊಂಡು ತುಳು ಭಾಷೆಯನ್ನು ಎರಡನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಮಾಡಿ‌ ಎಂದು ಸ್ಪೀಕರ್ ಸೂಚಿಸಿದರು. ಸ್ಪೀಕರ್ ಸಲಹೆಯನ್ನು ಪರಿಗಣಿಸಿದ ಸಚಿವ ತಂಗಡಗಿ, ವರದಿ ಪಡೆದು ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!