AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಗುಲದ ಪಕ್ಕದಲ್ಲಿನ ಚಪ್ಪಲಿ ಅಂಗಡಿ ತೆರವಿಗೆ ಆಗ್ರಹ; ಬೆಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ

ಎಂಟು ಚಪ್ಪಲಿ ಅಂಗಡಿಗಳಲ್ಲಿ ಮುಸ್ಲಿಂ ವ್ಯಕ್ತಿಗಳು ಬಾಡಿಗೆಗೆ ಇದ್ರು. ಶೇಷಾದ್ರಿ ಎಂಬ ವ್ಯಕ್ತಿ ಮುಜರಾಯಿ ಇಲಾಖೆಯಿಂದ ಟೆಂಡರ್ ಪಡೆದು, ಎಂಟು ಮುಸ್ಲಿಂ ವ್ಯಕ್ತಿಗಳಿಗೆ ಚಪ್ಪಲಿ ಅಂಗಡಿಗಳನ್ನು ಬಾಡಿಗೆ ನೀಡಿದ್ದಾರೆ. ಹೀಗಾಗಿ ಈ ಚಪ್ಪಲಿ ಅಂಗಡಿಗಳನ್ನು ಇಂದು ಬಂದ್​ ಮಾಡಲಾಗಿದೆ.

ದೇಗುಲದ ಪಕ್ಕದಲ್ಲಿನ ಚಪ್ಪಲಿ ಅಂಗಡಿ ತೆರವಿಗೆ ಆಗ್ರಹ; ಬೆಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ
ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ
TV9 Web
| Edited By: |

Updated on:Mar 23, 2022 | 5:30 PM

Share

ಬೆಂಗಳೂರು: ದೇಗುಲದ ಪಕ್ಕದಲ್ಲಿನ ಚಪ್ಪಲಿ ಅಂಗಡಿ ತೆರವಿಗೆ ಆಗ್ರಹಿಸಿ ಬೆಂಗಳೂರಿನಲ್ಲಿರುವ ಹಿಂದೂ ಕಾರ್ಯಕರ್ತರು ಆಂಜನೇಯ ದೇವಸ್ಥಾನದ (Temple) ಮುಂಭಾಗದ ಫುಟ್ ಪಾತ್ ಮೇಲೆ ಕೂತು ಪ್ರತಿಭಟನೆ ನಡೆಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಬರೋ ತನಕ ಇಲ್ಲಿಂದ ಕದಲೊದಿಲ್ಲ ಎಂದು ಬಿಗಿಪಟ್ಟು ಹಿಡಿದಿದ್ದಾರೆ. ಮುಸ್ಲಿಂ ಸಮುದಾಯದವ್ರಿಗೆ, ದೇವಸ್ಥಾನದ ಮುಂದೆ ಚಪ್ಪಲಿ ಅಂಗಡಿ ಇಡಲು ಅವಕಾಶ ಕೊಟ್ಟಿದೆ. ಇದನ್ನ ನಾವು ಸಹಿಸೋದಿಲ್ಲ ಎಂದು ಪ್ರತಿಭಟನೆ (Protest) ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಸಾರ್ವಜನಿಕರು ಭಾಗಿಯಾಗುತ್ತಿದ್ದು, ನಿಧಾನಕ್ಕೆ ಹಿಂದೂ ಕಾರ್ಯಕರ್ತರ ಪ್ರತಿಭಟನೆ ಕಾವೇರುತ್ತಿದೆ. ಸದ್ಯ ಸ್ಥಳಕ್ಕೆ ಮುಜರಾಯಿ ಇಲಾಖೆಯ ತಹಸಿಲ್ದಾರ್, ಅರವಿಂದ್ ಬಾಬು, ದೇವಸ್ಥಾನದ ಆಡಳಿತ ಮಂಡಳಿಯ ಮ್ಯಾನೇಜರ್ ಭೇಟಿ ನೀಡಿದ್ದಾರೆ. ಅಷ್ಟೇ ಅಲ್ಲದೇ ಸ್ಥಳಕ್ಕೆ ಉಪ್ಪಾರಪೇಟೆಯ ಇನ್ಸ್ಪೆಕ್ಟರ್ ವಸಂತ್ ಕೂಡ ಆಗಮಿಸಿದ್ದಾರೆ. ಪ್ರತಿಭಟನೆ ಹಿನ್ನಲೆಯಲ್ಲಿ ಇಂದು (ಮಾರ್ಚ್​ 23) ಒಟ್ಟು ಎಂಟು ಚಪ್ಪಲಿ ಅಗಂಡಿಗಳನ್ನು(Shopes) ಬಂದ್​ ಮಾಡಲಾಗಿದೆ.

ರಾಷ್ಟ್ರ ರಕ್ಷಣಾ ಪಡೆಯ ಪ್ರತಿಭಟನೆಯಿಂದ ಎಂಟು ಚಪ್ಪಲಿ ಅಂಗಡಿಗಳನ್ನು ಬಂದ್​ ಮಾಡಿಸಲಾಗಿದೆ. ಎಂಟು ಚಪ್ಪಲಿ ಅಂಗಡಿಗಳಲ್ಲಿ ಮುಸ್ಲಿಂ ವ್ಯಕ್ತಿಗಳು ಬಾಡಿಗೆಗೆ ಇದ್ರು. ಶೇಷಾದ್ರಿ ಎಂಬ ವ್ಯಕ್ತಿ ಮುಜರಾಯಿ ಇಲಾಖೆಯಿಂದ ಟೆಂಡರ್ ಪಡೆದು, ಎಂಟು ಮುಸ್ಲಿಂ ವ್ಯಕ್ತಿಗಳಿಗೆ ಚಪ್ಪಲಿ ಅಂಗಡಿಗಳನ್ನು ಬಾಡಿಗೆ ನೀಡಿದ್ದಾರೆ. ಹೀಗಾಗಿ ಈ ಚಪ್ಪಲಿ ಅಂಗಡಿಗಳನ್ನು ಇಂದು ಬಂದ್​ ಮಾಡಲಾಗಿದೆ.

ಉತ್ತರ ಕನ್ನಡ: ಪ್ರತಿಭಟನೆ ವೇಳೆ ವಿಷ ಕುಡಿಯಲು ಯತ್ನಿಸಿದ ವ್ಯಕ್ತಿ

ಪ್ರವರ್ಗ 1ರ ಬದಲಿಗೆ ಮೊದಲಿನಂತೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ವಿತರಿಸುವಂತೆ ಬೇಡಿಕೆ ಇಟ್ಟು, ಭಟ್ಕಳ ಪಟ್ಟಣದ ಶಂಶುದ್ದೀನ್ ವೃತ್ತದ ಬಳಿ ಮೊಗೇರ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ಬೃಹತ್ ಪ್ರತಿಭಟನಾ ಮೆರವಣಿಗೆ, ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಂಡಿರುವ ಮೊಗೇರ ಸಮುದಾಯ, ವೆಂಕಟಾಪುರದಿಂದ ಪಟ್ಟಣದ ಮಿನಿವಿಧಾನಸೌಧವರೆಗೆ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಉಮೇಶ ಮೊಗೇರ ಎಂಬ ವ್ಯಕ್ತಿ ವಿಷ ಕುಡಿಯಲು ಯತ್ನಿಸಿದ್ದಾರೆ. ಸಮುದಾಯದ ಮುಖಂಡರು, ಪೊಲೀಸರ ಮನವೊಲಿಕೆ ಬಳಿಕ ಆತ್ಮಹತ್ಯೆ ಯತ್ನವನ್ನು ಉಮೇಶ್ ಕೈಬಿಟ್ಟಿದ್ದಾರೆ.

ಕೊಲ್ಲೂರು ದೇವಸ್ಥಾನದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ನಿಷೇಧ ಹೇರುವಂತೆ ಮನವಿ

ಕೊಲ್ಲೂರು ದೇವಸ್ಥಾನದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ನಿಷೇಧ ಹೇರುವಂತೆ ಹಿಂದು ಸಂಘಟನೆಗಳು ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಹಿಂದೂಯೇತರರಿಗೆ ಅಂಗಡಿ ಮುಂಗಟ್ಟು ಬಾಡಿಗೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ಹಿಂದು ಸಂಘಟನೆಗಳಿಗೆ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯೆ ಸಂಧ್ಯಾ ರಮೇಶ್ ಸಾಥ್ ನೀಡಿದ್ದಾರೆ. ಕಾಪು ಮಾರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಷ್ಟವಾಗಿತ್ತು. ಈಗ ಕೊಲ್ಲೂರಿನಲ್ಲಿ ಈ ಅಭಿಯಾನ ಆರಂಭವಾಗಿದೆ.

ಚಿಕ್ಕಮಗಳೂರಿನಲ್ಲೂ ಮುಸ್ಲಿಂ ವ್ಯಾಪಾರಿಗಳ ನಿಷೇಧಕ್ಕೆ ಒತ್ತಾಯ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ ಜಾತ್ರೆಗೆ ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ದೇಗುಲ, ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡದಂತೆ ಆಗ್ರಹಿಸಿದ್ದಾರೆ. ಚಿತ್ರವಳ್ಳಿ, ಕಿಗ್ಗಾ ಜಾತ್ರೆಯಲ್ಲಿ ನಿರ್ಬಂಧ ವಿಧಿಸಲು ಮನವಿ ಮಾಡಿದ್ದಾರೆ. ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡದಂತೆ‌ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Hijab: ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಬಂದ್​ ಕರೆಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ

ಬಿಜೆಪಿ, ಆದಿತ್ಯನಾಥರನ್ನು ಅಧಿಕಾರದಿಂದ ಕೆಳಗಿಳಿಸಲು ರೈತರ ಪ್ರತಿಭಟನೆ ನಡೆಸಿದ್ದು ಎಂದು ಒಪ್ಪಿಕೊಂಡ ಯೋಗೇಂದ್ರ ಯಾದವ್ ​​; ವಿಡಿಯೊ ವೈರಲ್

Published On - 5:02 pm, Wed, 23 March 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು