AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್ ಕದ್ದಾಲಿಕೆ ಪ್ರಕರಣ: ಐಪಿಎಸ್ ಭಾಸ್ಕರ್ ರಾವ್ ಪ್ರೊಟೆಸ್ಟ್ ಪಿಟಿಷನ್, ಕೋರ್ಟ್​ಗೆ ಬಿ ರಿಪೋರ್ಟ್ ಸಲ್ಲಿಸದೆ ವಾಪಸಾದ ಸಿಬಿಐ

ಇಬ್ಬರ ವಿರುದ್ಧ ಸಾಕ್ಷ್ಯವಿದ್ದರೂ ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಅಂತ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಹಾಗೂ ಪತ್ರಕರ್ತೆ ಕುಶಾಲ ವಿರುದ್ಧ ಭಾಸ್ಕರ್ ರಾವ್ ನೇರ ಆರೋಪ ಮಾಡಿದ್ದಾರೆ.

ಫೋನ್ ಕದ್ದಾಲಿಕೆ ಪ್ರಕರಣ: ಐಪಿಎಸ್ ಭಾಸ್ಕರ್ ರಾವ್ ಪ್ರೊಟೆಸ್ಟ್ ಪಿಟಿಷನ್, ಕೋರ್ಟ್​ಗೆ ಬಿ ರಿಪೋರ್ಟ್ ಸಲ್ಲಿಸದೆ ವಾಪಸಾದ ಸಿಬಿಐ
ಭಾಸ್ಕರ್ ರಾವ್
TV9 Web
| Edited By: sandhya thejappa|

Updated on:Aug 31, 2021 | 1:55 PM

Share

ಬೆಂಗಳೂರು: ರಾಜಕಾರಣಿಗಳು, ಅಧಿಕಾರಿಗಳ ಫೋನ್ ಕದ್ದಾಲಿಕೆ (Phone Tapping) ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಇಂದು ಬಿ ರಿಪೋರ್ಟ್ ಸಲ್ಲಿಕೆಗೆ ಮುಂದಾಗಿದ್ದರು. ಸಿಟಿ ಸಿವಿಲ್ ಕೋರ್ಟ್​ನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಲು ಸಿಬಿಐ ಅಧಿಕಾರಿಗಳು ಮುಂದಾಗಿದ್ದರು. ಆದರೆ ಈ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao), ಕೋರ್ಟ್​ಗೆ ಪ್ರೊಟೆಸ್ಟ್ ಪಿಟಿಷನ್ ಸಲ್ಲಿಸಿದ್ದಾರೆ. ಹೀಗಾಗಿ ಬಿ ರಿಪೋರ್ಟ್ ಸಲ್ಲಿಸದೆ ಸಿಬಿಐ ಅಧಿಕಾರಿಗಳು ವಾಪಸ್ ಆಗಿದ್ದಾರೆ.

ಫೋನ್ ಕದ್ದಾಲಿಕೆ ಸಂಬಂಧ ಮತ್ತೊಮ್ಮೆ ತನಿಖೆ ಮಾಡಬೇಕು. ಇಬ್ಬರ ವಿರುದ್ಧ ಸಾಕ್ಷ್ಯವಿದ್ದರೂ ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಅಂತ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಹಾಗೂ ಪತ್ರಕರ್ತೆ ಕುಶಾಲ ವಿರುದ್ಧ ಭಾಸ್ಕರ್ ರಾವ್ ನೇರ ಆರೋಪ ಮಾಡಿದ್ದಾರೆ.

ಸಿಬಿಐ ತನಿಖೆ ಸರಿಯಾಗಿಲ್ಲ ಎಂದು ಪ್ರೊಟೆಸ್ಟ್ ಅಪ್ಲಿಕೇಶನ್ ಹಾಕಿದ್ದೇವೆ. ಅಲೋಕ್ ಕುಮಾರ್ ಹಾಗು ಕುಶಾಲ ವಿರುದ್ಧ ಸಾಕ್ಷಿ ಇದೆ. ಅದರೂ ಕೇಸ್​ಗೆ ಬಿ ರಿಪೋರ್ಟ್ ಸಲ್ಲಿಕೆ ಮುಂದಾಗಿದ್ದು ಸರಿಯಲ್ಲ. ಲಾಭಿ ಮಾಡಿದ್ದೀನಿ ಎಂದು ಅರೋಪಿಸಲಾದ ಆಡಿಯೋ ಹೊರಗೆ ಬಂದಿತ್ತು. ಸರ್ಕಾರ ಕೇಸ್​ನ ಸಿಬಿಐಗೆ ವರ್ಗಾವಣೆ ಮಾಡಿತ್ತು. ಕುಲ್ದೀಪ್ ಕುಮಾರ್ ಜೈನ್ ದೂರುದಾರಾಗಿದ್ರು.  ಈಗ ಕುಲ್ದೀಪ್ ಜೈನ್ ಕೇಸ್ ಬಿ ರಿಪೋರ್ಟ್ ಸಲ್ಲಿಕೆಗೆ ಯಾವುದೇ  ಅಭ್ಯಂತರ ಇಲ್ಲಾ ಎಂದು ಹೇಳಿಕೆ ನೀಡಿದ್ದಾರೆ. ಅದ್ರೆ ಇದು ಕಲ್ದೀಪ್ ಕುಮಾರ್ ಜೈನ್ ಕೇಸ್ ಅಲ್ಲ. ಸರ್ಕಾರದ ಕೇಸ್. ನ್ಯಾಯ ಸಿಗಬೇಕು. ಸಿಬಿಐ ಹಾಗು ಕಾನೂನು ನ್ಯಾಯಾಲಯದ ಮೇಲೆ ನಂಬಿಕೆ ಇದೆ ಅಂತ ಕುಲ್ದೀಪ್ ಕುಮಾರ್ ಜೈನ್ ಅಭಿಪ್ರಾಯಟಪಟ್ಟರು.

ಪ್ರಕರಣವೇನು? 2019ರ ಹೊತ್ತಿಗೆ ರಾಜಕೀಯ ವಲಯದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ತೀವ್ರ ಸಂಚಲಕ್ಕೆ ಕಾರಣವಾಗಿತ್ತು. ಈ ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು. ಹೆಚ್.ಡಿ.ಕುಮಾರಸ್ವಾಮಿ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಫೋನ್ ಕದ್ದಾಲಿಕೆ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಮೈತ್ರಿ ಸರ್ಕಾರದ ವೇಳೆ ಪಕ್ಷಗಳ ಮುಖಂಡರು, ಮಾಧ್ಯಮ ಪ್ರತಿನಿಧಿಗಳು, ಐಪಿಎಸ್ ಅಧಿಕಾರಿಗಳು ಸೇರಿದಂತೆ 300ಕ್ಕೂ ಹೆಚ್ಚು ಜನರ ಫೋನ್​ಗಳನ್ನ ಟ್ಯಾಪ್ ಮಾಡಲಾಗಿದೆ. ಎಲ್ಲರ ಮಾತುಗಳನ್ನು ಕದ್ದಾಲಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಆರೋಪ 2018ರ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿತ್ತು. ಬಿಜೆಪಿ 104, ಕಾಂಗ್ರೆಸ್ 86, ಜೆಡಿಎಸ್​ಗೆ 36 ಸ್ಥಾನ ಬಂದಿತ್ತು. ರಾಜ್ಯಪಾಲರು ಸರ್ಕಾರ ರಚಿಸಲು ಯಡಿಯೂರಪ್ಪಗೆ ಆಹ್ವಾನ ನೀಡಲಾಗಿತ್ತು. ಆದರೆ ಯಡಿಯೂರಪ್ಪ ಬಹುಮತ ಸಾಬೀತುಪಡಿಸಲಾಗಲಿಲ್ಲ. ಬಳಿಕ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದರು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್​ಗೆ ಬೆಂಬಲ ನೀಡಿದ್ದೆವು. ಇದಕ್ಕೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕೈಜೋಡಿಸಿತು. 2019ರ ಜುಲೈನಲ್ಲಿ 17 ಶಾಸಕರು ರಾಜೀನಾಮೆ ನೀಡಿದರು. ಯಾರೂ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿರಲಿಲ್ಲ. ಆ ಶಾಸಕರು ಕುಮಾರಸ್ವಾಮಿ ಸರ್ಕಾರ ಪತನಗೊಳಿಸಿ ಬಿಜೆಪಿ ಸೇರಿದರು. ಇದಕ್ಕೆ ಬಿಜೆಪಿಯೇ ಕಾರಣ ಎಂಬ ಆರೋಪಗಳು ಕೇಳಿಬಂದಿತ್ತು.

ಇದನ್ನೂ ಓದಿ

ಮೈತ್ರಿ ಸರ್ಕಾರದ ಪತನಕ್ಕೆ ಫೋನ್ ಕದ್ದಾಲಿಕೆ ಕಾರಣ: ಮಾಜಿ ಡಿಸಿಎಂ ಪರಮೇಶ್ವರ ಸಿದ್ದರಾಮಯ್ಯ, ಕುಮಾರಸ್ವಾಮಿ ಆಪ್ತ ಸಹಾಯಕರು ಮತ್ತು ದೇವೇಗೌಡರ ಗನ್ ಮ್ಯಾನ್ ಫೋನ್ ಕದ್ದಾಲಿಕೆ ಮಾಡಲಾಗಿದೆ: ಕಾಂಗ್ರೆಸ್ ಗಂಭೀರ ಆರೋಪ

(Protest petition filed by IPS officer Bhaskar Rao about Phone Tapping)

Published On - 1:08 pm, Tue, 31 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು