AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಮುಗಿಸಲು ಮಚ್ಚು ಹಿಡಿದು ಅಟ್ಟಾಡಿಸಿದ ಪಿಎಸ್ಐ ಭೈರಪ್ಪ ಅರೆಸ್ಟ್

ಬೆಂಗಳೂರು: ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪಿಎಸ್‌ಐ ಭೈರಪ್ಪ, ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆಗಾಗಿ ಕಿರುಕುಳ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ. ಕೆಂಗೇರಿ ಪೊಲೀಸರು ಮಚ್ಚಿನಿಂದ ಹಲ್ಲೆ ಯತ್ನ ಪ್ರಕರಣದಲ್ಲಿ ಇವರನ್ನು ಬಂಧಿಸಿದ್ದು, ಕೊಲೆ ಯತ್ನ, ವರದಕ್ಷಿಣೆ ಕಿರುಕುಳ ಹಾಗೂ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕಠಿಣ ಮೊಕದ್ದಮೆ ದಾಖಲಿಸಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಗೆ ಮುಜುಗರ ತಂದಿದೆ.

ಪತ್ನಿಯ ಮುಗಿಸಲು ಮಚ್ಚು ಹಿಡಿದು ಅಟ್ಟಾಡಿಸಿದ ಪಿಎಸ್ಐ ಭೈರಪ್ಪ ಅರೆಸ್ಟ್
ಪಿಎಸ್‌ಐ ಭೈರಪ್ಪ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 14, 2026 | 3:00 PM

Share

ಬೆಂಗಳೂರು, ಜು.14: ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೊಬ್ಬರೇ ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆ ಕಿರುಕುಳ ನೀಡಿರುವ ಗಂಭೀರ ಆರೋಪದಡಿ ಬಂಧನ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ (Commissioner of Police) ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೈರಪ್ಪ ಅವರನ್ನು ಪತ್ನಿಯ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ ನಡೆಸಲು ಮುಂದಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಪಿಎಸ್ಐ ಭೈರಪ್ಪ ಕಳೆದ ಕೆಲವು ಸಮಯದಿಂದ ತಮ್ಮ ಪತ್ನಿಗೆ ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕವಾಗಿ ತೀವ್ರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರ ಕೌಟುಂಬಿಕ ಕಲಹ ತಾರಕಕ್ಕೇರಿದಾಗ, ಪಿಎಸ್ಐ ಭೈರಪ್ಪ ಅವರು ಮನೆಯಲ್ಲಿದ್ದ ಮಚ್ಚನ್ನು ಹಿಡಿದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ.

ಹಲ್ಲೆಯ ಬೆನ್ನಲ್ಲೇ ಸಂತ್ರಸ್ತೆ ಕೆಂಗೇರಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಆರಂಭದಲ್ಲಿ ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಆದರೆ ಪ್ರಾಥಮಿಕ ತನಿಖೆಯಲ್ಲಿ ಸತ್ಯಾಂಶ ಬೆಳಕಿಗೆ ಬರುತ್ತಿದ್ದಂತೆಯೇ ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿನಿಮಾವನ್ನೂ ಮೀರಿಸುವ ವಂಚನೆ: ಸತ್ತವರ ಹೆಸರು ಬಳಸಿ ಆದಿಚುಂಚನಗಿರಿ ಮಠದ 120 ಕೋಟಿ ರೂ. ಆಸ್ತಿ ಎಗರಿಸಿದ ಖದೀಮರು!

ಪೊಲೀಸ್ ಅಧಿಕಾರಿಯಾಗಿದ್ದರೂ ಕಾನೂನು ಉಲ್ಲಂಘಿಸಿ ಕ್ರೌರ್ಯ ಮೆರೆದ ಭೈರಪ್ಪ ವಿರುದ್ಧ ಕೆಂಗೇರಿ ಪೊಲೀಸರು ಅತ್ಯಂತ ಕಠಿಣ ಕಾಯ್ದೆಗಳ ಅಡಿಯಲ್ಲಿ ಮೊಕದ್ದಮೆ ಹೂಡಿದ್ದಾರೆ. ಇವರ ಮೇಲೆ ಕೊಲೆ ಯತ್ನ ಹಾಗೂ ತೀವ್ರ ಸ್ವರೂಪದ ದೈಹಿಕ ಹಲ್ಲೆ ನಡೆಸಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಪತ್ನಿಗೆ ಹಣ ಮತ್ತು ಆಸ್ತಿಗಾಗಿ ಕಿರುಕುಳ ನೀಡಿದ್ದಕ್ಕೆ ವರದಕ್ಷಿಣೆ ಕಿರುಕುಳ ಕಾಯ್ದೆಯಡಿಯೂ ಕೇಸ್ ಹಾಕಲಾಗಿದೆ. ಹಲ್ಲೆಗೆ ಮಚ್ಚು ಬಳಸಿದ ಹಿನ್ನೆಲೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ಗಳನ್ನೂ ದೂರಿನಲ್ಲಿ ಸೇರಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Tue, 14 July 26

Follow Us