AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆ ಪರೀಕ್ಷಾ ರದ್ದು ವಿಚಾರ: ಗೃಹ ಸಚಿವ ಆರಗ ಜ್ಞಾನೇಂದ್ರಗೆ ಪತ್ರ ಬರೆದ 8 ಶಾಸಕರು

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಕಾರ್ಯಾಚರಣೆ ಮಂದುವರೆದಿದೆ. ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆ ಪರೀಕ್ಷಾ ರದ್ದು ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರಗೆ 8 ಶಾಸಕರು ಪತ್ರ ಬರೆದಿದ್ದಾರೆ.

PSI ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆ ಪರೀಕ್ಷಾ ರದ್ದು ವಿಚಾರ: ಗೃಹ ಸಚಿವ ಆರಗ ಜ್ಞಾನೇಂದ್ರಗೆ ಪತ್ರ ಬರೆದ 8 ಶಾಸಕರು
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on: Jun 04, 2022 | 3:50 PM

Share

ಬೆಂಗಳೂರು: PSI ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆ ಪರೀಕ್ಷಾ ರದ್ದು ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರಗೆ 8 ಶಾಸಕರು ಪತ್ರ ಬರೆದಿದ್ದಾರೆ. ಶಾಸಕರಾದ ಕೆ.ಎಸ್.ಲಿಂಗೇಶ್, ಪಿ.ರಾಜೀವ್, ಸುನಿಲ್ ನಾಯ್ಕ್, ರಘುಪತಿ ಭಟ್, ರಾಜಕುಮಾರ್ ತೇಲ್ಕೂರ್, ಹರೀಶ್ ಪೂಂಜಾ, ಲಾಲಾಜಿ ಮೆಂಡನ್, J.N.ಗಣೇಶ್, ರಾಘವೇಂದ್ರ ಹಿಟ್ನಾಳ್ ಪತ್ರ ಬರೆದಿದ್ದು, ಕೆಲವರು ಮಾಡಿದ ತಪ್ಪಿಗೆ ಸಂಪೂರ್ಣ ಪರೀಕ್ಷೆ ರದ್ದುಪಡಿಸಲಾಗಿದೆ. ಸರ್ಕಾರದ ಈ ನಿರ್ಧಾರದಿಂದ ಬಡ ಮಕ್ಕಳಿಗೆ ಅನ್ಯಾಯವಾಗಿದೆ. ಪಿಎಸ್​ಐ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರಿಗೆ ಶಿಕ್ಷೆ ಆಗಬೇಕು. ಜೊತಗೆ ಬಡಮಕ್ಕಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ತನಿಖೆ ಪೂರ್ಣವಾಗುವ ಮೊದಲೇ PSI ಪರೀಕ್ಷೆ ರದ್ದು ಸರಿಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ಪ್ರಾಮಾಣಿಕರಿಗೆ ನ್ಯಾಯ ಸಿಗಬೇಕು ಎಂದು ಗೃಹ ಸಚಿವರಿಗೆ 8 ಶಾಸಕರು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಮನವಿ ಮಾಡಿರುವವರ ಪೈಕಿ ಬಿಜೆಪಿ ಶಾಸಕರೆ ಹೆಚ್ಚು ಎನ್ನಲಾಗುತ್ತಿದೆ.

ಇದನ್ನೂ ಓದಿ: ಡೇಂಜರ್ ಕಾಲೇಜು, ಪರ್ಯಾಯ ಕಟ್ಟಡದ ವ್ಯವಸ್ಥೆಗೆ ಕ್ರಮ: ಗದಗ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೇಳಿಕೆ

PSI ಹಗರಣದ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪಿಸಲು ಚಿಂತನೆ; ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಹಗರಣದ ವಿಚಾರಣೆ ನಡೆಸಲು ವಿಶೇಷ ಕೋರ್ಟ್ (Special Court) ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸುತ್ತದೆ ಎಂದು ಶಿವಮೊಗ್ಗದಲ್ಲಿ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ (Araga Jnanendra) ಮಾಹಿತಿ ನೀಡಿದ್ದಾರೆ. ತ್ವರಿತಗತಿ ನ್ಯಾಯಾಲಯದಲ್ಲಿ ವಿಚಾರಣೆ ಆಗಲೆಂಬುದು ನನ್ನ ಅಪೇಕ್ಷೆ. ತನಿಖೆ ಮುಗಿದ ಬಳಿಕ ಈ ಬಗ್ಗೆ ಯೋಚಿಸುತ್ತೇವೆ. ಸ್ಪೆಷಲ್ ಕೋರ್ಟ್ ಬಗ್ಗೆ ವಿನಂತಿ ಮಾಡುತ್ತೇನೆ, ಏನಾಗುತ್ತೆ ನೋಡೋಣ ಎಂದರು. ಹೊಸದಾಗಿ ನಡೆಯುವ ಪಿಎಸ್ಐ ಪರೀಕ್ಷೆ ಬಗ್ಗೆ ದಿನಾಂಕ ನಿಗದಿ ಆಗಿಲ್ಲ. ಕೋರ್ಟ್ನಲ್ಲಿ ಪ್ರಕರಣ ಇರುವುದರಿಂದ ಸ್ವಲ್ಪ ದಿನ ಕಾಯಬೇಕಿದೆ ಅಂತ ಸಚಿವರು ತಿಳಿಸಿದರು.

ಮಗನ ಪರ ಡೀಲ್ ಮಾಡಿದ್ದ ತಂದೆಯನ್ನ ಬಂಧಿಸಿದ ಸಿಐಡಿ ಪೊಲೀಸ್

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಕಾರ್ಯಾಚರಣೆ ಮಂದುವರಿದಿದ್ದು, ಮಗನ ಪರವಾಗಿ ಡೀಲ್ ಮಾಡಿದ್ದ ತಂದೆಯನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ವಂಸತ್ ನರಿಬೋಳ್ ಅನ್ನೋ ವ್ಯಕ್ತಿಯನ್ನ ಸಿಐಡಿ ಪೊಲೀಸರು ಬಂಧಿಸಿದ್ದು, ತನ್ನ ಮಗ ಸುನಿಲ್ ಪರವಾಗಿ ರುದ್ರಗೌಡ ಪಾಟೀಲ್ ಜೊತೆ ವಸಂತ್ ನರಿಬೋಳ್ ಡೀಲ್ ಮಾಡಿದ್ದ. ವಸಂತ್, ಕಲಬುರಗಿ ಜಿಲ್ಲೆಯ ಜೇವರ್ಗಿ ನಿವಾಸಿ. ತಿಂಗಳ ಹಿಂದೆಯೇ ಅಭ್ಯರ್ಥಿ ಸುನಿಲ್ ನರಿಬೋಳ್​ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಮಗನ ಬಂದನ ನಂತರ ತಲೆಮರೆಸಿಕೊಂಡಿದ್ದ ತಂದೆ ವಂಸತ್ ನರಿಬೋಳ್​ ನನ್ನ ಕಳೆದ ರಾತ್ರಿ ಬಂಧಿಸಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ