AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಪೊಲೀಸ್ ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್​ಕಾನ್ಸ್​ಟೇಬಲ್ ಶ್ರೀಧರ್ ಮನೆಯಲ್ಲಿ 1.55 ಕೋಟಿ ಹಣ ಪತ್ತೆ

ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಐಡಿ ಪೊಲೀಸರು ಕಳೆದ ಶುಕ್ರವಾರ ಶ್ರೀಧರ್​ರನ್ನ ಬಂಧಿಸಿದ್ದರು. ಶ್ರೀಧರ್ ಡಿವೈಎಸ್​ಪಿ ಶಾಂತಕುಮಾರ್ ಆಣತಿಯಂತೆ ಕೆಲಸ ಮಾಡುತ್ತಿದ್ದರು.ಶಾಂತಕುಮಾರ್ ಕೂಡಾ ಸದ್ಯ ಅರೆಸ್ಟ್ ಆಗಿದ್ದಾರೆ.

PSI Recruitment Scam: ಪೊಲೀಸ್ ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್​ಕಾನ್ಸ್​ಟೇಬಲ್ ಶ್ರೀಧರ್ ಮನೆಯಲ್ಲಿ 1.55 ಕೋಟಿ ಹಣ ಪತ್ತೆ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:May 17, 2022 | 12:49 PM

Share

ಬೆಂಗಳೂರು: ಈಗಾಗಲೇ ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಬಯಲಾಗಿದೆ. ಸಿಐಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಅಕ್ರಮದ ಹಿಂದಿನ ದೊಡ್ಡ ರಹಸ್ಯವೇ ಬಯಲಾಗುತ್ತಿದೆ. ಇನ್ನು ಪೊಲೀಸ್ ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್​ಕಾನ್ಸ್​ಟೇಬಲ್ (Head Constable) ಶ್ರೀಧರ್ ಮನೆಯಲ್ಲಿ ಇಂದು ಬರೋಬ್ಬರಿ 1.55 ಕೋಟಿ ರೂ. ಹಣ ಪತ್ತೆಯಾಗಿದೆ. ಸಿಐಡಿ ಅಧಿಕಾರಿಗಳ ದಾಳಿ ವೇಳೆ ಸುಮಾರು 20 ಲಕ್ಷ ಹಣ ಪತ್ತೆಯಾಗಿತ್ತು. ಮತ್ತೊಂದು ಮನೆ ಮೇಲೆ ದಾಳಿ ವೇಳೆ 1.55 ಕೋಟಿ ಹಣ ಸಿಕ್ಕಿದೆ.

ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಐಡಿ ಪೊಲೀಸರು ಕಳೆದ ಶುಕ್ರವಾರ ಶ್ರೀಧರ್​ರನ್ನ ಬಂಧಿಸಿದ್ದರು. ಶ್ರೀಧರ್ ಡಿವೈಎಸ್​ಪಿ ಶಾಂತಕುಮಾರ್ ಆಣತಿಯಂತೆ ಕೆಲಸ ಮಾಡುತ್ತಿದ್ದರು.ಶಾಂತಕುಮಾರ್ ಕೂಡಾ ಸದ್ಯ ಅರೆಸ್ಟ್ ಆಗಿದ್ದಾರೆ.

32 ಜನರ ವಿಚಾರಣೆ ಮುಕ್ತಾಯ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಇಲ್ಲಿವರಗೆ 32 ಜನರನ್ನು ಸಿಐಡಿ ಅಧಿಕಾರಿಗಳು ಬಂಧಿಸಿತ್ತು. 32 ಜನರ ವಿಚಾರಣೆ ಮೇ 15ರಂದು ಮುಕ್ತಾಯವಾಗಿದೆ. ಆರೋಪಿಗಳ ಪೈಕಿ ಯಾರೊಬ್ಬರಿಗೂ ಜಾಮೀನು ಸಿಗದ ಹಿನ್ನೆಲೆ 32 ಜನರಿಗೂ ಇದೀಗ ಜೈಲು ಭಾಗ್ಯ ಫಿಕ್ಸ್​! ಆಗಿದೆ. ಎಲ್ಲರನ್ನು ಕಲಬುರಗಿ ಕೇಂದ್ರ ಕಾರಾಗೃಹಗೆ ಸಿಐಡಿ ಸಿಬ್ಬಂದಿ ಬಿಟ್ಟಿದ್ದು, ನಗರದ ಐವಾನ್ ಈ ಶಾಹಿ ಅತಿಥಿ ಗೃಹದಲ್ಲಿರೋ ಸಿಐಡಿ ಕಚೇರಿ, ಕಳೆದ ಒಂದು ತಿಂಗಳಿಂದ ಆರೋಪಿಗಳಿಂದ ತುಂಬಿ ಹೋಗಿತ್ತು. ತಿಂಗಳ ನಂತರ ಮೊದಲ ಬಾರಿಗೆ ಆರೋಪಿಗಳಿಲ್ಲದೆ ಸಿಐಡಿ ಕಚೇರಿ ಖಾಲಿಯಾಗಿದೆ. ಸದ್ಯ ಸಿಐಡಿ ಅಧಿಕಾರಿಗಳು ಎರಡನೇ ಹಂತದ ಕಾರ್ಯಾಚರಣೆಗೆ ಸಿದ್ದತೆ ನಡೆಸಿದ್ದಾರೆ.

ಪಿಎಸ್​ಐ ನೇಮಕಾತಿ ವಿಭಾಗದಲ್ಲಿ ಹಿಡಿತ ಸಾಧಿಸಿದ್ದ ಶಾಂತಕುಮಾರ್: ನೇಮಕಾತಿ ವಿಭಾಗದ ಡಿವೈಎಸ್​ ಆಗಿ ಶಾಂತಕುಮಾರ್ ಕಾರ್ಯನಿರ್ವಹಿಸುತ್ತಿದ್ದರು. ಈ ಬಂಧನದೊಂದಿಗೆ ಎಡಿಜಿಪಿ ಅಮ್ರಿತ್ ಪಾಲ್ ಅವರನ್ನೂ ಮುಂದಿನ ದಿನಗಳಲ್ಲಿ ವಿಚಾರಣೆಗೆ ಒಳಪಡಿಸಬಹುದು ಎಂದು ಹೇಳಲಾಗುತ್ತಿದೆ. ಸಿಬಿಐ ವಿಚಾರಣೆ ವೇಳೆ ಡಿವೈಎಸ್​ಪಿ ಶಾಂತಕುಮಾರ್ ಮತ್ತಷ್ಟು ಸ್ಫೋಟಕ ಸತ್ಯಗಳನ್ನು ಬಾಯಿಬಿಡಬಹುದು ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜನರನ್ನು ಸಿಐಡಿ ಬಂಧಿಸಿ ವಿಚಾರಣೆಗೆ ಒಳಪಡಿಸಬಹುದು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Tue, 17 May 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?