AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಸಿಐಡಿ ಪೊಲೀಸರಿಂದ ಕುಶಾಲ್​ ಬಂಧನ

ಒಎಂಆರ್ ​ಶೀಟ್ ತಿದ್ದಿದ್ದ ಆರೋಪದಡಿ ಕುಶಾಲ್​ ಅರೆಸ್ಟ್ ಮಾಡಿದ್ದು, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಸಿಐಡಿ ಪೊಲೀಸರಿಂದ ಕುಶಾಲ್​ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 09, 2022 | 1:36 PM

Share

ಬೆಂಗಳೂರು: 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧ ಮೊದಲ ಯಾಂರ್ಕ ಪಡೆದಿದ್ದ  ಕುಶಾಲ್​ನನ್ನ ಸಿಐಡಿ ಪೊಲೀಸರು ಬಂಧನ ಮಾಡಿದ್ದಾರೆ. ಒಎಂಆರ್ ​ಶೀಟ್ ತಿದ್ದಿದ್ದ ಆರೋಪದಡಿ ಕುಶಾಲ್​ ಅರೆಸ್ಟ್ ಮಾಡಿದ್ದು, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೇಮಕಾತಿಯಲ್ಲಿ ದರ್ಶನ್ ಗೌಡ ಅಕ್ರಮವೆಸಗಿರುವುದು ದೃಢ

545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧ ದರ್ಶನ್ ಗೌಡ ಅಕ್ರಮವೆಸಗಿರುವುದು ದೃಢವಾಗಿದೆ. ಎಫ್​ಎಸ್​​ಎಲ್​ ವರದಿಯಲ್ಲಿ ಅಭ್ಯರ್ಥಿ ದರ್ಶನ್ ಅಕ್ರಮದ ಸತ್ಯ ಬಹಿರಂಗವಾಗಿದ್ದು, ಪರೀಕ್ಷೆಯಲ್ಲಿ ಉತ್ತರ ಬರೆಯದೆ ದರ್ಶನ್ ಗೌಡ ಯಾಂರ್ಕ​ ಬಂದಿದ್ದ. ಪರೀಕ್ಷೆ ದಿನ ಸಂಪೂರ್ಣ ಗೊತ್ತಿದ್ದ ಕೆಲವು ಉತ್ತರ ಮಾತ್ರ ಬರೆದಿದ್ದ. ಉಳಿದ ಜಾಗದಲ್ಲಿ ಹಾಗೆ ಬಿಟ್ಟು ಉತ್ತರ ಪತ್ರಿಕೆ ಕೊಟ್ಟು ಹೋಗಿದ್ದ. ನೇಮಕಾತಿ ವಿಭಾಗದಲ್ಲೇ ಆರೋಪಿಯ ಉತ್ತರ ಪತ್ರಿಕೆ ತಿದ್ದಿದ್ದಾರೆ. ಖಾಲಿ ಉತ್ತರ ಪತ್ರಿಕೆಯನ್ನು ದರ್ಶನ್ ಗೌಡ ಕೊಟ್ಟು ಹೋಗಿದ್ದು, ಬಳಿಕ ಒಎಂಆರ್​ ಶೀಟ್ ನಂಬರ್ ತಿಳಿಸಿದ್ದ.

ಇದನ್ನೂ ಓದಿ: EC on President Election 2022 ಇಂದು ಮಧ್ಯಾಹ್ನ 3 ಗಂಟೆಗೆ ರಾಷ್ಟ್ರಪತಿ ಚುನಾವಣೆ ದಿನಾಂಕ ಪ್ರಕಟ

ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡುವವರ ಜೊತೆಗೆ ಡೀಲ್ ಮಾಡಿಕೊಂಡಿದ್ದು, ಡೀಲ್​ನಲ್ಲಿ ಓರ್ವ ಮಧ್ಯವರ್ತಿ ಸಹ ಭಾಗಿಯಾಗಿದ್ದ. ಸುಮಾರು 80 ಲಕ್ಷ ಹಣ ನೀಡಿ ದರ್ಶನ್ ಗೌಡ ಆಯ್ಕೆಯಾಗಿದ್ದು, ನೇಮಕಾತಿ ವಿಭಾಗದಲ್ಲಿ ಉತ್ತರ ಪತ್ರಿಕೆ ತಿದ್ದಲಾಗಿತ್ತು. ಬಳಿಕ ಕೀ ಆನ್ಸರ್ ನೋಡಿ ಮತ್ತೆ ಕಾರ್ಬನ್ ಕಾಪಿ ತಿದ್ದಿದ್ದ. ಸದ್ಯ ಎಫ್​ಎಸ್​ಎಲ್ ವರದಿಯಲ್ಲಿ ಅಕ್ರಮವೆಸಗಿರುವುದು ಬಯಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ದರ್ಶನ್ ಗೌಡನನ್ನ ಸಿಐಡಿ ಬಂಧಿಸಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ