AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳಾದ್ರೂ ತರಳುಬಾಳು ಮಠದ ಬಿಡಿಎ ಕಾಂಪ್ಲೆಕ್ಸ್ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ, ಸರ್ಕಾರದ ವಿರುದ್ಧ ಜನರ ಆಕ್ರೋಶ

ಬಿಜೆಪಿ ಸರ್ಕಾರ ಇದ್ದಾಗ ಆರಂಭಗೊಂಡ ಬಿಬಿಎಂಪಿ ವ್ಯಾಪ್ತಿಯ ಆರ್‌ಟಿ ನಗರದ ತರಳುಬಾಳು ಮಠದ ಬಿಡಿಎ ಕಾಂಪ್ಲೆಕ್ಸ್ ರಸ್ತೆ ಕಾಮಗಾರಿ ಆರು ತಿಂಗಳುಗಳೆ ಕಳೆಯುತ್ತ ಬಂದಿವೆ. ಆದರೆ ಈವರೆಗೆ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ.

6 ತಿಂಗಳಾದ್ರೂ ತರಳುಬಾಳು ಮಠದ ಬಿಡಿಎ ಕಾಂಪ್ಲೆಕ್ಸ್ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ, ಸರ್ಕಾರದ ವಿರುದ್ಧ ಜನರ ಆಕ್ರೋಶ
ಆರ್‌ಟಿ ನಗರದ ತರಳುಬಾಳು ಮಠದ ಬಿಡಿಎ ಕಾಂಪ್ಲೆಕ್ಸ್ ರಸ್ತೆ ಕಾಮಗಾರಿ
Vinayak Hanamant Gurav
| Updated By: ಆಯೇಷಾ ಬಾನು|

Updated on: Jul 10, 2023 | 12:04 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನು ಸರ್ಕಾರ ಬ್ರ್ಯಾಂಡ್ ಬೆಂಗಳೂರು(Brand Bengaluru) ಮಾಡುವ ಕನಸು ಕಾಣುತ್ತಿದೆ. ಆದ್ರೆ ನಗರದಲ್ಲಿ ಮೂಲಸೌಕರ್ಯಗಳದ್ದೇ ಮೂಟೆಯಷ್ಟು ಸಮಸ್ಯೆಗಳು ಕಾದು ಕೂತಿವೆ. ತರಳುಬಾಳು ಮಠದ ಬಿಡಿಎ ಕಾಂಪ್ಲೆಕ್ಸ್ ರಸ್ತೆ ಕಾಮಗಾರಿ(Taralabalu Mutt BDA Complex Road Construction) ಆರಂಭವಾಗಿ ಆರು ತಿಂಗಳುಗಳೆ‌ ಕಳೆಯುತ್ತ ಬಂದಿದೆ. ಆದ್ರೆ ಈ ವರೆಗೆ ರಸ್ತೆ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಹೀಗಾಗಿ ಅಲ್ಲಿನ ನಿವಾಸಿಗಳು ಹಾಗೂ ವ್ಯಾಪಾರಸ್ಥರು ಪರದಾಡುವಂತಾಗಿದೆ.

ಬಿಜೆಪಿ ಸರ್ಕಾರ ಇದ್ದಾಗ ಆರಂಭಗೊಂಡ ಬಿಬಿಎಂಪಿ ವ್ಯಾಪ್ತಿಯ ಆರ್‌ಟಿ ನಗರದ ತರಳುಬಾಳು ಮಠದ ಬಿಡಿಎ ಕಾಂಪ್ಲೆಕ್ಸ್ ರಸ್ತೆ ಕಾಮಗಾರಿ ಆರು ತಿಂಗಳುಗಳೆ ಕಳೆಯುತ್ತ ಬಂದಿವೆ. ಆದರೆ ಈವರೆಗೆ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಪ್ರತಿನಿತ್ಯ ನೂರಾರು ವಾಹನಗಳು ಇಲ್ಲಿ ಓಡಾಡುತ್ತವೆ. ಬೆಳಿಗ್ಗೆ ವಾಕಿಂಗ್‌ಗೆ ಎಂದು ಸಾರ್ವಜನಿಕರು ರಸ್ತೆಗೆ ಇಳಿಯುತ್ತಾರೆ. ಈ ರಸ್ತೆ ಕಾಮಗಾರಿ ಆರಂಭವಾದಾಗಿನಿಂದ ಮಕ್ಕಳಿಗೆ, ವಯಸ್ಸಾದವರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಅಂಗಡಿಗಳಿಗೆ ಹೋಗಬೇಕು ಎಂದರೂ ಓಡಾಡೊಕೆ ಆಗದಂತಹ ಪರಿಸ್ಥಿತಿ ಇದೆ. ಮಳೆ ಬಂದ್ರಂತೋ ಹೊರಗೆ ಬರಕ್ಕಾಗಲ್ಲ ಆದಷ್ಟು ಬೇಗ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: Bengaluru News: ಮಸೀದಿ ಸಿಬ್ಬಂದಿಗಳ ಮೇಲಿನ ಕೋಪಕ್ಕೆ ಕುಚೇಷ್ಟೇ; ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿಯ ಬಂಧನ

ಇನ್ನೂ‌ ಸಾರ್ವಜನಿಕರಿಗೆ ಇಲ್ಲಿ ಓಡಾಡೊಕೆ ತೊಂದರೆಯಾದರೆ ಅತ್ತ ರಸ್ತೆ ಬದಿಯ ವ್ಯಾಪಾರಸ್ಥರಿಗೆ ವ್ಯಾಪಾರ ಆಗದೆ ಕಷ್ಟ ಅನುಭವಿಸುವಂತಾಗಿದೆ. ಈ ಹಿಂದೆ ಆಗುತ್ತಿದ್ದ ವ್ಯಾಪಾರದಲ್ಲಿ ಶೇಕಡಾ 80 ರಷ್ಟು ಇಳಿಕೆ ಕಂಡಿದೆ. ರಸ್ತೆ ಕಾಮಗಾರಿ ಬೇಗ ಮುಗಿಸುವಂತೆ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಆದರೆ ಅವರು ಒಂದು ತಿಂಗಳಲ್ಲಿ ಕಾಮಗಾರಿ ಮುಗಿಸುತ್ತೇವೆ ಅಂತ ಹೇಳುತ್ತಿದ್ದಾರೆ ಅಂತ ಹೋಟಲ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಒಟ್ಟಿನಲ್ಲಿ ಈ ರಸ್ತೆ ಕಾಮಗಾರಿ ಪೂರ್ಣಗೊಳ್ಳದ ಹಿನ್ನಲೆ ಸಾರ್ವಜನಿಕರು‌ ಹಾಗೂ ಅಂಗಡಿ ವ್ಯಾಪಾರಸ್ಥರು ಪರದಾಡುವಂತಾಗಿದ್ದು, ಇನ್ನಾದರೂ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಕಾಮಗಾರಿ ಆದಷ್ಟು ಬೇಗನೆ ಮುಗಿಸ್ತಾರಾ ಇಲ್ವಾ ಅನ್ನೋದನ್ನ ಕಾದು ನೋಡಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ