AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಗೆ ತಲೆನೋವಾದ ಬೆಂಗಳೂರು ಪಂಕ್ಚರ್ ಮಾಫಿಯ; 6 ತಿಂಗಳಲ್ಲಿ 482 ಬಿಎಂಟಿಸಿ ಬಸ್​ಗಳ ಟೈರ್ ಪಂಕ್ಚರ್

ಬೆಂಗಳೂರಿನಲ್ಲಿ ಸೈಲೆಂಟ್ ಆಗಿದ್ದ ಪಂಕ್ಚರ್ ಮಾಫಿಯಾ, ಮತ್ತೆ ಜೋರಾಗಿ ಸದ್ದು ಮಾಡುತ್ತಿದೆ. ಯಾವ ಅಂಡರ್ ಪಾಸ್, ಫ್ಲೈ ಓವರ್, ರೋಡ್​ಗಳಲ್ಲಿ ನೋಡಿದರೂ ಸಾವಿರಾರು ಕಬ್ಬಿಣದ ಮೊಳೆಗಳು ಸಿಗುತ್ತಿವೆ. ಈ ಪಂಕ್ಚರ್ ಮಾಫಿಯಾ ಬಿಎಂಟಿಸಿಗೆ ದೊಡ್ಡ ತಲೆ ನೋವಾಗಿದ್ದರೆ, ಅತ್ತ ವಾಹನ ಸವಾರರು ಹಿಡಿ ಶಾಪ ಹಾಕುತ್ತಿದ್ದಾರೆ.

ಬಿಎಂಟಿಸಿಗೆ ತಲೆನೋವಾದ ಬೆಂಗಳೂರು ಪಂಕ್ಚರ್ ಮಾಫಿಯ; 6 ತಿಂಗಳಲ್ಲಿ 482 ಬಿಎಂಟಿಸಿ ಬಸ್​ಗಳ ಟೈರ್ ಪಂಕ್ಚರ್
ಬಿಎಂಟಿಸಿ ಬಸ್ (ಸಂಗ್ರಹ ಚಿತ್ರ)
Kiran Surya
| Edited By: |

Updated on: Aug 28, 2024 | 7:14 AM

Share

ಬೆಂಗಳೂರು, ಆಗಸ್ಟ್ 28: ಇತ್ತೀಚೆಗೆ ಬೆಂಗಳೂರು ನಗರದಲ್ಲಿ ಎಲ್ಲಂದರಲ್ಲಿ ಬಿಎಂಟಿಸಿ ಬಸ್​​ಗಳು ಕೆಟ್ಟು ನಿಲ್ಲುತ್ತಿವೆ. ಇದರಿಂದ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಟ್ರಾಫಿಕ್ ಜಾಮ್ ತಪ್ಪಿಸಲು ಟ್ರಾಫಿಕ್ ಪೊಲೀಸರು ಪೀಕ್ ಅವರ್​​​ನಲ್ಲಿ ಪ್ರತಿದಿನ ಹರಸಾಹಸ ಪಡುತ್ತಾರೆ. ಇದಕ್ಕೆ ಕಾರಣ ಅಂದರೆ, ಇಷ್ಟು ದಿನ ನಗರದಲ್ಲಿ ಸುಮ್ಮನಿದ್ದ ಪಂಕ್ಚರ್ ಮಾಫಿಯಾ ಮತ್ತೆ ತಲೆ ಎತ್ತಿರುವುದು, ಇದರಿಂದ ಕಳೆದ ಆರು ತಿಂಗಳಲ್ಲಿ 482 ಬಿಎಂಟಿಸಿ ಬಸ್​​ಗಳು ಪಂಕ್ಚರ್ ಆಗಿವೆಯಂತೆ. ಇದರಿಂದ ನಡು ರೋಡಲ್ಲಿ ಬಿಎಂಟಿಸಿ ಬಸ್​​ಗಳು ಕೈ ಕೊಡುತ್ತಿದ್ದು ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ. ಈ ಬಗ್ಗೆ ಪೋಲಿಸ್ ಕಮೀಷನರ್​ಗೆ ದೂರು ಕೊಡಲು ಮುಂದಾಗುತ್ತೇವೆ ಎಂದು ಬಿಎಂಟಿಸಿ ಅಧಿಕಾರಿ ಗಜೇಂದ್ರ ಕುಮಾರ್ ತಿಳಿಸಿದ್ದಾರೆ.

ಬಿಎಂಟಿಸಿ ಬಸ್​​​ಗಳ ಪಂಕ್ಚರ್ ಲೆಕ್ಕಾಚಾರ

  • ಜನವರಿ- 92 ಬಸ್ಸುಗಳು
  • ಫೆಬ್ರವರಿ- 86 ಬಸ್ಸುಗಳು
  • ಮಾರ್ಚ್- 74 ಬಸ್ಸುಗಳು
  • ಏಪ್ರಿಲ್- 72 ಬಸ್ಸುಗಳು
  • ಮೇ- 82 ಬಸ್ಸುಗಳು
  • ಜೂನ್- 76 ಬಸ್ಸುಗಳು
  • ಒಟ್ಟು- 482 ಬಸ್ಸುಗಳ ಟೈರ್​ಗಳು ಪಂಕ್ಚರ್ ಆಗಿವೆ

ನಗರದ ಯಾವುದೇ ರೋಡ್, ಫ್ಲೈ ಓವರ್, ಅಂಡರ್ ಪಾಸ್​ಗಳಲ್ಲೂ ಕಬ್ಬಿಣದ ಮೊಳೆಗಳನ್ನು ಸುರಿಯಲಾಗುತ್ತಿದೆ. ಈ ಸಮಸ್ಯೆ ಬಿಎಂಟಿಸಿಗೆ ಮಾತ್ರವಲ್ಲದೆ ಬೈಕ್, ಕಾರುಗಳಿಗೂ ಇವೆ. ಎಲ್ಲೆಂದರಲ್ಲಿ ಕಬ್ಬಿಣದ ಮೊಳೆಗಳನ್ನು ಕಿರಾತಕರು ರಾತ್ರಿ ವೇಳೆಯಲ್ಲಿ ಬಿಸಾಡಿ ಹೋಗುತ್ತಾರೆ. ಇದರಿಂದ ವಾಹನಗಳ ಚಕ್ರಗಳು ಪಂಕ್ಚರ್ ಆಗುತ್ತವೆ. ‌ನಂತರ ಅಕ್ಕಪಕ್ಕದಲ್ಲಿರುವ ಪಂಕ್ಚರ್ ಅಂಗಡಿಗಳಿಗೆ ವಾಹನ ಮಾಲೀಕರು ಹೋಗುತ್ತಾರೆ, ಆಗ ದುಪ್ಪಟ್ಟು ಹಣ ಪೀಕಿ ಪಂಕ್ಚರ್ ಹಾಕಿ ಕಳುಹಿಸುತ್ತಾರೆ. ಈ ಬಗ್ಗೆ ಬಿಎಂಟಿಸಿ ಪ್ರಯಾಣಿಕರು ಮತ್ತು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮನೆ ಬೆಲೆ ಹೆಚ್ಚಳ: ಭಾರತದ ಟಾಪ್ 3 ಪ್ರದೇಶಗಳಲ್ಲಿ ಬೆಂಗಳೂರಿನ ಬಾಗಲೂರು, ವೈಟ್​ಫೀಲ್ಡ್; ಯಾಕಿಷ್ಟು ಏರಿಕೆ ಆಗ್ತಿದೆ ಗೊತ್ತಾ?

ಒಟ್ಟಿನಲ್ಲಿ ಕೆಲ ವರ್ಷಗಳ ಹಿಂದೆ ಈ ಪಂಕ್ಚರ್ ಮಾಫಿಯಾ ದೊಡ್ಡ ಮಟ್ಟದಲ್ಲಿ ರಾಜಧಾನಿ ಜನರನ್ನು ಕಾಡಿತ್ತು. ನಂತರ ಪೋಲಿಸ್ ಇಲಾಖೆ ಕಠಿಣ ಕ್ರಮಗಳನ್ನು ತೆಗೆದುಕೊಂಡ ಬಳಿಕ ಚೂರು ಸೈಲೆಂಟ್ ಆಗಿದ್ದ ಈ ಕಿರಾತಕರು ಈಗ ಮತ್ತೆ ತಮ್ಮ ಕೈಚಳಕ ತೋರಿಸಲು ಮುಂದಾಗಿದ್ದಾರೆ. ಕೂಡಲೇ ಪೋಲಿಸ್ ಇಲಾಖೆ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್