AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಗೆ ತಲೆನೋವಾದ ಬೆಂಗಳೂರು ಪಂಕ್ಚರ್ ಮಾಫಿಯ; 6 ತಿಂಗಳಲ್ಲಿ 482 ಬಿಎಂಟಿಸಿ ಬಸ್​ಗಳ ಟೈರ್ ಪಂಕ್ಚರ್

ಬೆಂಗಳೂರಿನಲ್ಲಿ ಸೈಲೆಂಟ್ ಆಗಿದ್ದ ಪಂಕ್ಚರ್ ಮಾಫಿಯಾ, ಮತ್ತೆ ಜೋರಾಗಿ ಸದ್ದು ಮಾಡುತ್ತಿದೆ. ಯಾವ ಅಂಡರ್ ಪಾಸ್, ಫ್ಲೈ ಓವರ್, ರೋಡ್​ಗಳಲ್ಲಿ ನೋಡಿದರೂ ಸಾವಿರಾರು ಕಬ್ಬಿಣದ ಮೊಳೆಗಳು ಸಿಗುತ್ತಿವೆ. ಈ ಪಂಕ್ಚರ್ ಮಾಫಿಯಾ ಬಿಎಂಟಿಸಿಗೆ ದೊಡ್ಡ ತಲೆ ನೋವಾಗಿದ್ದರೆ, ಅತ್ತ ವಾಹನ ಸವಾರರು ಹಿಡಿ ಶಾಪ ಹಾಕುತ್ತಿದ್ದಾರೆ.

ಬಿಎಂಟಿಸಿಗೆ ತಲೆನೋವಾದ ಬೆಂಗಳೂರು ಪಂಕ್ಚರ್ ಮಾಫಿಯ; 6 ತಿಂಗಳಲ್ಲಿ 482 ಬಿಎಂಟಿಸಿ ಬಸ್​ಗಳ ಟೈರ್ ಪಂಕ್ಚರ್
ಬಿಎಂಟಿಸಿ ಬಸ್ (ಸಂಗ್ರಹ ಚಿತ್ರ)
Kiran Surya
| Edited By: |

Updated on: Aug 28, 2024 | 7:14 AM

Share

ಬೆಂಗಳೂರು, ಆಗಸ್ಟ್ 28: ಇತ್ತೀಚೆಗೆ ಬೆಂಗಳೂರು ನಗರದಲ್ಲಿ ಎಲ್ಲಂದರಲ್ಲಿ ಬಿಎಂಟಿಸಿ ಬಸ್​​ಗಳು ಕೆಟ್ಟು ನಿಲ್ಲುತ್ತಿವೆ. ಇದರಿಂದ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಟ್ರಾಫಿಕ್ ಜಾಮ್ ತಪ್ಪಿಸಲು ಟ್ರಾಫಿಕ್ ಪೊಲೀಸರು ಪೀಕ್ ಅವರ್​​​ನಲ್ಲಿ ಪ್ರತಿದಿನ ಹರಸಾಹಸ ಪಡುತ್ತಾರೆ. ಇದಕ್ಕೆ ಕಾರಣ ಅಂದರೆ, ಇಷ್ಟು ದಿನ ನಗರದಲ್ಲಿ ಸುಮ್ಮನಿದ್ದ ಪಂಕ್ಚರ್ ಮಾಫಿಯಾ ಮತ್ತೆ ತಲೆ ಎತ್ತಿರುವುದು, ಇದರಿಂದ ಕಳೆದ ಆರು ತಿಂಗಳಲ್ಲಿ 482 ಬಿಎಂಟಿಸಿ ಬಸ್​​ಗಳು ಪಂಕ್ಚರ್ ಆಗಿವೆಯಂತೆ. ಇದರಿಂದ ನಡು ರೋಡಲ್ಲಿ ಬಿಎಂಟಿಸಿ ಬಸ್​​ಗಳು ಕೈ ಕೊಡುತ್ತಿದ್ದು ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ. ಈ ಬಗ್ಗೆ ಪೋಲಿಸ್ ಕಮೀಷನರ್​ಗೆ ದೂರು ಕೊಡಲು ಮುಂದಾಗುತ್ತೇವೆ ಎಂದು ಬಿಎಂಟಿಸಿ ಅಧಿಕಾರಿ ಗಜೇಂದ್ರ ಕುಮಾರ್ ತಿಳಿಸಿದ್ದಾರೆ.

ಬಿಎಂಟಿಸಿ ಬಸ್​​​ಗಳ ಪಂಕ್ಚರ್ ಲೆಕ್ಕಾಚಾರ

  • ಜನವರಿ- 92 ಬಸ್ಸುಗಳು
  • ಫೆಬ್ರವರಿ- 86 ಬಸ್ಸುಗಳು
  • ಮಾರ್ಚ್- 74 ಬಸ್ಸುಗಳು
  • ಏಪ್ರಿಲ್- 72 ಬಸ್ಸುಗಳು
  • ಮೇ- 82 ಬಸ್ಸುಗಳು
  • ಜೂನ್- 76 ಬಸ್ಸುಗಳು
  • ಒಟ್ಟು- 482 ಬಸ್ಸುಗಳ ಟೈರ್​ಗಳು ಪಂಕ್ಚರ್ ಆಗಿವೆ

ನಗರದ ಯಾವುದೇ ರೋಡ್, ಫ್ಲೈ ಓವರ್, ಅಂಡರ್ ಪಾಸ್​ಗಳಲ್ಲೂ ಕಬ್ಬಿಣದ ಮೊಳೆಗಳನ್ನು ಸುರಿಯಲಾಗುತ್ತಿದೆ. ಈ ಸಮಸ್ಯೆ ಬಿಎಂಟಿಸಿಗೆ ಮಾತ್ರವಲ್ಲದೆ ಬೈಕ್, ಕಾರುಗಳಿಗೂ ಇವೆ. ಎಲ್ಲೆಂದರಲ್ಲಿ ಕಬ್ಬಿಣದ ಮೊಳೆಗಳನ್ನು ಕಿರಾತಕರು ರಾತ್ರಿ ವೇಳೆಯಲ್ಲಿ ಬಿಸಾಡಿ ಹೋಗುತ್ತಾರೆ. ಇದರಿಂದ ವಾಹನಗಳ ಚಕ್ರಗಳು ಪಂಕ್ಚರ್ ಆಗುತ್ತವೆ. ‌ನಂತರ ಅಕ್ಕಪಕ್ಕದಲ್ಲಿರುವ ಪಂಕ್ಚರ್ ಅಂಗಡಿಗಳಿಗೆ ವಾಹನ ಮಾಲೀಕರು ಹೋಗುತ್ತಾರೆ, ಆಗ ದುಪ್ಪಟ್ಟು ಹಣ ಪೀಕಿ ಪಂಕ್ಚರ್ ಹಾಕಿ ಕಳುಹಿಸುತ್ತಾರೆ. ಈ ಬಗ್ಗೆ ಬಿಎಂಟಿಸಿ ಪ್ರಯಾಣಿಕರು ಮತ್ತು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮನೆ ಬೆಲೆ ಹೆಚ್ಚಳ: ಭಾರತದ ಟಾಪ್ 3 ಪ್ರದೇಶಗಳಲ್ಲಿ ಬೆಂಗಳೂರಿನ ಬಾಗಲೂರು, ವೈಟ್​ಫೀಲ್ಡ್; ಯಾಕಿಷ್ಟು ಏರಿಕೆ ಆಗ್ತಿದೆ ಗೊತ್ತಾ?

ಒಟ್ಟಿನಲ್ಲಿ ಕೆಲ ವರ್ಷಗಳ ಹಿಂದೆ ಈ ಪಂಕ್ಚರ್ ಮಾಫಿಯಾ ದೊಡ್ಡ ಮಟ್ಟದಲ್ಲಿ ರಾಜಧಾನಿ ಜನರನ್ನು ಕಾಡಿತ್ತು. ನಂತರ ಪೋಲಿಸ್ ಇಲಾಖೆ ಕಠಿಣ ಕ್ರಮಗಳನ್ನು ತೆಗೆದುಕೊಂಡ ಬಳಿಕ ಚೂರು ಸೈಲೆಂಟ್ ಆಗಿದ್ದ ಈ ಕಿರಾತಕರು ಈಗ ಮತ್ತೆ ತಮ್ಮ ಕೈಚಳಕ ತೋರಿಸಲು ಮುಂದಾಗಿದ್ದಾರೆ. ಕೂಡಲೇ ಪೋಲಿಸ್ ಇಲಾಖೆ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು