AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆಯಲ್ಲಿ ಮತ್ತೊಂದು ಗಲಾಟೆ: ಪಾದಚಾರಿ ರಸ್ತೆಯಲ್ಲಿ ಪುನೀತ್ ಪ್ರತಿಮೆ ನಿರ್ಮಿಸಿದ್ರೆ ಅನುಮತಿ ಇಲ್ಲ ಎಂದ ಬಿಬಿಎಂಪಿ ಆಯುಕ್ತ

ಸದ್ಯ ನಾನು ಕೆಲಸ ನಿಲ್ಲಿಸೋದಿಲ್ಲ ಅಂತ ಸ್ಥಳೀಯರ ಜೊತೆಗೆ ಮಾಜಿ ಪಾಲಿಕೆ ಸದಸ್ಯ ಚಂದ್ರಶೇಖರ್ ಹೇಳಿದ್ದಾರೆ. ಇನ್ನು ಮತ್ತೊಂದು ಕಡೆ ಬಿಬಿಎಂಪಿ ಆಯುಕ್ತರಿಗೆ 7 ತಿಂಗಳ ಹಿಂದೆಯೇ ಮನವಿ ನೀಡಿದ್ದೇವೆ. ಅನುಮತಿ ಮೇರೆಗೆ ಪುನೀತ್ ಪುತ್ಥಳಿ ನಿರ್ಮಿಸುತ್ತಿದ್ದೇವೆ ಅಂತ ಆಗ್ರಹಿಸಿದ್ದಾರೆ.

ಚಾಮರಾಜಪೇಟೆಯಲ್ಲಿ ಮತ್ತೊಂದು ಗಲಾಟೆ: ಪಾದಚಾರಿ ರಸ್ತೆಯಲ್ಲಿ ಪುನೀತ್ ಪ್ರತಿಮೆ ನಿರ್ಮಿಸಿದ್ರೆ ಅನುಮತಿ ಇಲ್ಲ ಎಂದ ಬಿಬಿಎಂಪಿ ಆಯುಕ್ತ
TV9 Web
| Edited By: |

Updated on:Jul 06, 2022 | 5:16 PM

Share

ಚಾಮರಾಜಪೇಟೆ: ಪುತ್ಥಳಿ ವಿಚಾರವಾಗಿ ಚಾಮರಾಜಪೇಟೆಯಲ್ಲಿ(chamrajpet) ಫೈಟ್ ಶುರುವಾಗಿದೆ. ಸ್ಥಳೀಯರು ಮತ್ತು ಪಾಲಿಕೆ ನಡುವೆ ಪುತ್ಥಳಿಗಾಗಿ ಕಿತ್ತಾಟ ನಡೆಯುತ್ತಿದೆ. ಪುನೀತ್ ರಾಜ್‍ಕುಮಾರ್ ಪುತ್ಥಳಿ(Puneeth Rajkumar statue) ನಿರ್ಮಾಣಕ್ಕೆ ಮನವಿ ನೀಡಿ 7 ತಿಂಗಳಾಯ್ತು ಆದ್ರೆ ಬಿಬಿಎಂಪಿ(BBMP) ಯಾವುದೇ ಅನುಮತಿ ನೀಡಿಲ್ಲ. ಹೀಗಾಗಿ ಸ್ವತಃ ತಾವೇ ಪುನೀತ್ ರಾಜ್‍ ಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಸ್ಥಳೀಯರು ಮುಂದಾಗಿದ್ದಾರೆ.

ಸುಮಾರು 15 ಅಡಿ ಎತ್ತರದ ಅಪ್ಪು ಪುತ್ಥಳಿಗೆ ಭರದ ಸಿದ್ದತೆ ನಡೀತಿದ್ದು ಇದರ ನಡುವೆಯೇ ಮತ್ತೊಂದು ಗುಂಪಿನಿಂದ ಚಾಮರಾಜೇಂದ್ರ ಒಡೆಯರ್ ಪುತ್ಥಳಿ ನಿರ್ಮಾಣಕ್ಕೆ ಪಟ್ಟು ಹಿಡಿಯಲಾಗಿದೆ. ಚಾಮರಾಜಪೇಟೆಯಲ್ಲಿ ಒಂದೇ ಒಂದು ಚಾಮರಾಜೇಂದ್ರ ಒಡೆಯರ್ ಪುತ್ಥಳಿಯೂ ಇಲ್ಲ. ಮೊದಲು ಇವರ ಪುತ್ಥಳಿ ನಿರ್ಮಿಸಿ, ನಂತರ ಪುನೀತ್ ಪ್ರತಿಮೆ ಅನಾವರಣಗೊಳಿಸುವಂತೆ ಒತ್ತಾಯ ಮಾಡಲಾಗುತ್ತಿದೆ. ಆದ್ರೆ ಇದಕ್ಕೆ ತಲೆ ಕೆಡಿಸಿಕೊಳ್ಳದೆ 30 ಲಕ್ಷ ರೂ. ವೆಚ್ಚದಲ್ಲಿ ಪುನೀತ್ ಪುತ್ಥಳಿ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ. ಸದ್ಯ ನಾನು ಕೆಲಸ ನಿಲ್ಲಿಸೋದಿಲ್ಲ ಅಂತ ಸ್ಥಳೀಯರ ಜೊತೆಗೆ ಮಾಜಿ ಪಾಲಿಕೆ ಸದಸ್ಯ ಚಂದ್ರಶೇಖರ್ ಹೇಳಿದ್ದಾರೆ. ಇನ್ನು ಮತ್ತೊಂದು ಕಡೆ ಬಿಬಿಎಂಪಿ ಆಯುಕ್ತರಿಗೆ 7 ತಿಂಗಳ ಹಿಂದೆಯೇ ಮನವಿ ನೀಡಿದ್ದೇವೆ. ಅನುಮತಿ ಮೇರೆಗೆ ಪುನೀತ್ ಪುತ್ಥಳಿ ನಿರ್ಮಿಸುತ್ತಿದ್ದೇವೆ ಅಂತ ಆಗ್ರಹಿಸಿದ್ದಾರೆ. ಇದನ್ನೂ ಓದಿ: Lakshmi Hebbalkar: ಬೆಳಗಾವಿಯ ನಿವಾಸದಲ್ಲಿ ಕೇದಾರ ಪೀಠದ ಜಗದ್ಗುರುಗಳ ಪಾದಪೂಜೆ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಇನ್ನು ಈ ವಿಚಾರವಾಗಿ ಮಾತನಾಡಿರುವ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್, ಈ ಹಿಂದೆ ಕೇವಲ ಮನವಿ ಮಾತ್ರ ಬಂದಿತ್ತು. ಆದ್ರೆ ಬಿಬಿಎಂಪಿಯಿಂದ ಯಾವುದೇ ಅನುಮತಿ ಕೊಟ್ಟಿಲ್ಲ. ಪಾದಚಾರಿ ರಸ್ತೆಯಲ್ಲಿ ಪುನೀತ್ ಪ್ರತಿಮೆ ನಿರ್ಮಿಸಲಾಗ್ತಿತ್ತು. ಈ ಬಗ್ಗೆ ಮೌಕಿಕವಾಗಿ ದೂರು ಬಂದ ಮೇಲೆ ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಬೇರೆ ಎಲ್ಲಿ ನಿರ್ಮಿಸೋಕೆ ಸಾಧ್ಯ ಅಂತ ಅವರು ಮನವಿ ನೀಡಬೇಕು. ಕಾನೂನಿನಲ್ಲಿ ಆ ಸ್ಥಳದಲ್ಲಿ ಅವಕಾಶ ಇದ್ರೆ ಅನುಮತಿ ನೀಡ್ತೀವಿ. ಯಾವುದೇ ಪಾದಚಾರಿ ರಸ್ತೆಯಲ್ಲಿ ಪುತ್ಥಳಿ ನಿರ್ಮಿಸೋಕೆ ಅವಕಾಶ ಇಲ್ಲ. ಸದ್ಯ ಚಾಮರಾಜಪೇಟೆಯಲ್ಲಿ ಪುತ್ಥಳಿ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಿರುವ ಮಾಹಿತಿಯನ್ನ ಇಂಜಿನಿಯರ್ ನೀಡಿದ್ದಾರೆ. ಒಂದು ವೇಳೆ ಪುನಃ ನಿರ್ಮಾಣ ಕಾರ್ಯ ಮುಂದುವರಿಸಿದ್ರೆ ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಟಿವಿ9ಗೆ ಬಿಬಿಎಂಪಿ ಪಶ್ಚಿಮ ವಲಯದ ಆಯುಕ್ತ ಶ್ರೀನಿವಾಸ್ ತಿಳಿಸಿದ್ದಾರೆ.

Published On - 5:16 pm, Wed, 6 July 22

Follow Us
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ