AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಏ 5ರಂದು ಈ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ವಿಜಯನಗರ ಮತ್ತು ಅತ್ತಿಗುಪ್ಪೆ ನಿಲ್ದಾಣದಲ್ಲಿ ಅಗತ್ಯ ನಿರ್ವಹಣೆ ಕಾಮಗಾರಿ ಹಿನ್ನೆಲೆ ಏಪ್ರಿಲ್​ 5ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್​​ಸಿಎಲ್ ತಿಳಿಸಿದೆ. ಆ ಮೂಲಕ ನೇರಳೆ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಶಾಕ್​ ನೀಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರಯಾಣಿಕರ ಗಮನಕ್ಕೆ: ಏ 5ರಂದು ಈ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ನೇರಳೆ ಮಾರ್ಗದ ಮೆಟ್ರೋImage Credit source: thehindu.com
ಕಿರಣ್​ ಸೂರ್ಯ
| Edited By: |

Updated on: Apr 02, 2026 | 6:30 PM

Share

ಬೆಂಗಳೂರು, ಏಪ್ರಿಲ್​ 02: ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್​​) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಏಪ್ರಿಲ್​ 5ರಂದು ಅಂದರೆ ಭಾನುವಾರ ಬೆಳಿಗ್ಗೆ 2 ಗಂಟೆ ನೆರಳೆ ಮಾರ್ಗದಲ್ಲಿ ಮೆಟ್ರೋ ಸೇವೆ (Namma Metro) ತಾತ್ಕಾಲಿಕ ಸ್ಥಗಿತವಾಗಲಿದೆ. ವಿಜಯನಗರ ಮತ್ತು ಅತ್ತಿಗುಪ್ಪೆ ನಿಲ್ದಾಣಗಳಲ್ಲಿ ಅಗತ್ಯ ನಿರ್ವಹಣೆ ಕಾಮಗಾರಿ ಹಿನ್ನೆಲೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಬಿಎಂಆರ್​ಸಿಎಲ್​​ ತಿಳಿಸಿದೆ.

ಭಾನುವಾರದಂದು ಮೆಟ್ರೋ ರೈಲು ಸೇವೆ ತಾತ್ಕಾಲಿಕ ಸ್ಥಗಿತ

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಎಂಆರ್​ಸಿಎಲ್, ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಏಪ್ರಿಲ್ 5ರಂದು (ಭಾನುವಾರ) ಅಗತ್ಯ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಯನ್ನು ನೆರವೇರಿಸಲು ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 07ರಿಂದ 09 ಗಂಟೆಯವರೆಗೆ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ನಮ್ಮ ಮೆಟ್ರೋ ಟ್ವೀಟ್​

ಇತರೆ ಎಲ್ಲಾ ವಿಭಾಗಗಳಲ್ಲಿ ಅಂದರೆ, ಚಲ್ಲಘಟ್ಟ ದಿಂದ ಮೈಸೂರು ರಸ್ತೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್ ನಿಂದ ವೈಟೀಲ್ಡ್ (ಕಾಡುಗೋಡಿ), ಮಾದಾವರದಿಂದ ರೇಷ್ಮೆ ಸಂಸ್ಥೆ ಮತ್ತು ಆ‌ರ್.ವಿ.ರಸ್ತೆಯಿಂದ ಬೊಮ್ಮಸಂದ್ರ ನಡುವಿನ ಮೆಟ್ರೋ ರೈಲು ಸೇವೆಗಳು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07 ಗಂಟೆಯಿಂದ ವೇಳಾಪಟ್ಟಿಯಂತೆ ಸಂಚರಿಸಲಿವೆ.

ಇದನ್ನೂ ಓದಿ: ಐಪಿಎಲ್ ಕ್ರೇಜ್: ಪಂದ್ಯ ಮುಗಿದ 50 ನಿಮಿಷಗಳಲ್ಲಿ ನಮ್ಮ ಮೆಟ್ರೋದಲ್ಲಿ ಬರೋಬ್ಬರಿ 22,000 ಜನ ಪ್ರಯಾಣ!

ಬೆಳಿಗ್ಗೆ 09 ಗಂಟೆಯ ನಂತರ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳು ಎಂದಿನಂತೆ ಸಂಚರಿಸಲಿವೆ. ಹೀಗಾಗಿ ನಮ್ಮ ಮೆಟ್ರೋ ಪ್ರಯಾಣಿಕರು ಬದಲಾವಣೆಗಳನ್ನು ಗಮನಿಸಿ ಪ್ರಯಾಣಿಸುವಂತೆ ಮತ್ತು ಸಹಕರಿಸುವಂತೆ ಬಿಎಂಆರ್​ಸಿಎಲ್​ ವಿನಂತಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​