AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡ ಇಡಿ

ಫೈಜಲ್, ಫಜಲ್, ಅಬ್ದುಲ್ ಮನಾಫ್, ಮಹಮ್ಮದ್ ಸಾಲಿ ಬಂಧಿಸಲಾಗಿತ್ತು. ಬಂಧಿತ ನಾಲ್ವರಿಂದ ನೂರಾರು ಕೋಟಿ ಅಕ್ರಮ ವ್ಯವಹಾರ ನಡೆದಿತ್ತು. ಬೇರೆ ಬೇರೆ 2886 ಅಕೌಂಟ್ ಗಳಿಗೆ ಹಣ ವರ್ಗಾವಣೆ ಆಗಿತ್ತು ಎಂದು ತಿಳಿದುಬಂದಿತ್ತು.

ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡ ಇಡಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 20, 2022 | 10:16 AM

Share

ಬೆಂಗಳೂರು: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಪ್ರತ್ಯೇಕ‌ ಪ್ರಕರಣ ದಾಖಲಿಸಿಕೊಂಡು ಇಡಿಯಿಂದ ತನಿಖೆ ನಡೆಸಲಾಗುತ್ತಿದೆ. ಪೊಲೀಸರು ಬಂಧಿಸಿದ್ದ ನಾಲ್ವರಿಂದ ಅಕ್ರಮ ವ್ಯವಹಾರ ಪತ್ತೆ ಆಗಿದೆ. ಫೈಜಲ್, ಫಜಲ್, ಅಬ್ದುಲ್ ಮನಾಫ್, ಮೊಹಮ್ಮದ್ ಸಾಲಿ ಈ ನಾಲ್ವರಿಂದ ಕೋಟ್ಯಂತರ ರೂ. ಅಕ್ರಮ ವ್ಯವಹಾರ ನಡೆದಿತ್ತು. 2,886 ಅಕೌಂಟ್‌ಗಳಿಗೆ ಹಣ ವರ್ಗಾವಣೆ ಆಗಿದ್ದು ಬೆಳಕಿಗೆ ಬಂದಿತ್ತು. ಹೀಗಾಗಿ ಪ್ರಕರಣ ದಾಖಲಿಸಿಕೊಂಡ ಇಡಿ ತನಿಖೆಗೆ ಇಳಿದಿದೆ.

ಇಡಿ ಅಂಗಳಕ್ಕೆ ಪುಟ್ಟೇನಹಳ್ಳಿ ಠಾಣೆಯಲ್ಲಿ ನಡೆದಿದ್ದ ಮನಿ ಲಾಂಡರಿಂಗ್ ಕೇಸ್ ಬಂದಿದೆ. ಒಂದು ಲಕ್ಷ ಹಣದ ಜೊತೆ ಎಟಿಎಂ ಮುಂದೆ ನಿಂತಿದ್ದ ಓರ್ವನನ್ನು ಪುಟ್ಟೇನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದರು. ಆತನ ಮಾಹಿತಿ ಆಧಾರದ ಮೇಲೆ ಮನೆಯಲ್ಲಿದ್ದ ಮೂವರನ್ನು ವಶಕ್ಕೆ ಪಡೆಯಲಾಗಿತ್ತು. ಫೈಜಲ್, ಫಜಲ್, ಅಬ್ದುಲ್ ಮನಾಫ್, ಮಹಮ್ಮದ್ ಸಾಲಿ ಬಂಧಿಸಲಾಗಿತ್ತು. ಬಂಧಿತ ನಾಲ್ವರಿಂದ ನೂರಾರು ಕೋಟಿ ಅಕ್ರಮ ವ್ಯವಹಾರ ನಡೆದಿತ್ತು. ಬೇರೆ ಬೇರೆ 2886 ಅಕೌಂಟ್ ಗಳಿಗೆ ಹಣ ವರ್ಗಾವಣೆ ಆಗಿತ್ತು ಎಂದು ತಿಳಿದುಬಂದಿತ್ತು.

ಇದೇ ಜಾಲ ದೇಶಾದ್ಯಂತ ಹರಡಿರುವ ಶಂಕೆ ವ್ಯಕ್ತವಾಗಿದೆ. ಇದೇ ಹವಾಲ ಕೇಸ್ ತನಿಖೆ ಮುಂದುವರೆಸಲಾಗಿದೆ. ಬ್ಯಾಂಕ್ ಅಕೌಂಟ್ ಹೊಂದಿರುವವರ ವಿಚಾರಣೆ ನಡೆಸಲಾಗಿದೆ. ಆದರೆ ಅಕೌಂಟ್ ಹೋಲ್ಡರ್ಸ್ ಕೊವಿಡ್ ನೆಪ ಹೇಳುತ್ತಿದ್ದಾರೆ. ಈಗಾಗಲೇ ಹಲವರಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಕರೆದಿರುವ ಪೊಲೀಸರು, ಹವಾಲಾ ದಂಧೆಯ ಕಿಂಗ್ ಪಿನ್ ರಿಯಾಜ್ ಹಾಗೂ ಮನಸ್ ಸಹೋದರರ ಬಂಧನಕ್ಕೂ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಬಹುಕೋಟಿ ರೂಪಾಯಿ ಅವ್ಯವಹಾರ ಆರೋಪ; ಚೀನಾ ಮೂಲದ ಖಾಸಗಿ ಕಂಪೆನಿ ನಿರ್ದೇಶಕನನ್ನು ಬಂಧಿಸಿದ ಇಡಿ

ಇದನ್ನೂ ಓದಿ: ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಇಡಿ ಸಮನ್ಸ್​; ಪನಾಮಾ ಪೇಪರ್ಸ್​ ಲೀಕ್​ ಪ್ರಕರಣದಲ್ಲಿ ಮತ್ತೆ ಸಂಕಷ್ಟ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ