AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿ 10.5 ಲಕ್ಷ ನಗದು ಪತ್ತೆ ಪ್ರಕರಣ: ಬಂಧಿತ ಎಇ ಜಗದೀಶ್‌ಗೆ ಜಾಮೀನು

ವಿಧಾನಸೌಧದ ಆವರಣದಲ್ಲಿ 10.5 ಲಕ್ಷ ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಹಾಯಕ ಇಂಜಿನಿಯರ್​ಗೆ ಜಾಮೀನು ದೊರೆತಿದೆ.

ವಿಧಾನಸೌಧದಲ್ಲಿ 10.5 ಲಕ್ಷ ನಗದು ಪತ್ತೆ ಪ್ರಕರಣ: ಬಂಧಿತ ಎಇ ಜಗದೀಶ್‌ಗೆ ಜಾಮೀನು
ಪಿಡಬ್ಲ್ಯೂಡಿ ಎಇ ಜಗದೀಶ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 06, 2023 | 7:29 PM

ಬೆಂಗಳೂರು: ವಿಧಾನಸೌಧ (Vidhana Soudha) ಆವರಣದಲ್ಲಿ 10.5 ಲಕ್ಷ ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಜಗದೀಶ್​ಗೆ (PWD Jr. Engineer Jagadeesh) ಜಾಮೀನು ಸಿಕ್ಕಿದೆ. ಬೆಂಗಳೂರಿನ ಒಂದನೇ ಎಂಎಂಟಿಸಿ ನ್ಯಾಯಾಲಯ ಇಂದು (ಜನವರಿ 06) ಪಿಡಬ್ಲ್ಯುಡಿ ಎಇ ಜಗದೀಶ್ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ವಿಧಾನಸೌಧದಲ್ಲಿ 10 ಲಕ್ಷ ರೂ. ಸಿಕ್ಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಕಾಂಗ್ರೆಸ್, ಸಚಿವರ ಹೆಸರು ಬಹಿರಂಗ

ಬುಧವಾರ ಸಂಜೆ 7 ಗಂಟೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ 10.5 ಲಕ್ಷ ರೂ. ನಗದು ಸಾಗಿಸುತ್ತಿದ್ದಾಗ ಸಹಾಯಕ ಇಂಜಿನಿಯರ್ ಜಗದೀಶ್​ ಸಿಕ್ಕಿಬಿದ್ದಿದ್ದರು. ವಿಧಾನಸೌಧ ಪಡಸಾಲೆಯಲ್ಲಿ ಅನಧಿಕೃತ ಹಣ ಪತ್ತೆ ಪ್ರಕರಣ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗುತ್ತಿದ್ದಂತೆ ಇಂಜಿನಿಯರ್ ಜಗದೀಶ್ ಎಸ್ಕೇಪ್ ಆಗಿದ್ದರು. ಬಳಿಕ ಪೊಲೀಸರು ಜಗದೀಶ್ ಅವರನ್ನು ಬಂಧಿಸಿದ್ದರು.

ಜಗದೀಶ್ ಬಂಧನವಾಗುತ್ತಿದ್ದಂತೆಯೇ ಅವರ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಒಂದನೇ ಎಂಎಂಟಿಸಿ ನ್ಯಾಯಾಲಯ, ಜಾಮೀನು ನೀಡಿದೆ.

ಜಗದೀಶ್ ಪರ ವಕೀಲ ಹೇಳಿದ್ದೇನು?

ವಿಧಾನಸೌಧ ದಲ್ಲಿ 10 ಲಕ್ಷ ಹಣ ಜಪ್ತಿ ಮಾಡಿದ ಪ್ರಕರಣ ಸಂಬಂಧ ಆರೋಪಿ ಪಿಡಬ್ಲ್ಯೂಡಿ ಎಇ ಜಗದೀಶ್ ಪರ ವೀಕಲ ಸ್ಪಷ್ಟನೆ ನೀಡಿದ್ದು, ಜಗದೀಶ್ ಲಂಚ ಕೊಡಬೇಕೆಂದು ತೆಗೆದುಕೊಂಡು ಹೋಗುತ್ತಿದ್ದ ಹಣ ಅಲ್ಲ, ಜಗದೀಶ್ ಮೇಲೆ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು, ಪ್ರಕರಣದ ಇತ್ಯರ್ಥಕ್ಕಾಗಿ ಬೆಂಗಳೂರಿಗೆ ಹಣ ತಂದಿದ್ದರು. ಈ ವೇಳೆ ಅರ್ಜೆಂಟ್ ಆಗಿ ಅಧಿಕಾರಿಯೊಬ್ಬರನ್ನು ಭೇಟಿ ಮಾಡಬೇಕಿತ್ತು. ಹೀಗಾಗಿ ವಿಧಾನಸೌಧಕ್ಕೆ ತೆರಳಿದ್ದರು. ಅಷ್ಟೇ ಹೊರತು ಯಾರಿಗೋ ಹಣ ನೀಡಬೇಕೆಂದು ಹೋಗಿಲ್ಲ ಎಂದರು. ಹಣದ ಬಗ್ಗೆ ಪೊಲೀಸರಿಗೆ ಎಲ್ಲಾ ಮಾಹಿತಿ ನೀಡಲಾಗಿದೆ. ಆದರೂ ಯಾಕೆ ಜಗದೀಶ್​ರನ್ನು ಬಂಧಿಸಿದ್ದಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

10.5 ಲಕ್ಷ ರೂ. ನಗದು ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದಿ ಜಗದೀಶ್

ಜನವರಿ 04ರಂದು ಸಂಜೆ 7 ಗಂಟೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ 10.5 ಲಕ್ಷ ರೂ. ನಗದು ಸಾಗಿಸುತ್ತಿದ್ದಾಗ ಸಹಾಯಕ ಇಂಜಿನಿಯರ್ ಜಗದೀಶ್​ ಸಿಕ್ಕಿಬಿದ್ದಿದ್ದರು. ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿಯನ್ನು ಪೊಲೀಸರು ವಶಕ್ಕೆ ಪಡೆದ್ದರು. ಬಳಿಕ ಜಗದೀಶ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು, ಈ ಹಣ ಎಲ್ಲಿಂದ ಬಂತು? ಎಲ್ಲಿ ತೆಗೆದುಕೊಂಡು ಹೋಗುತ್ತಿದ್ದೀರಾ ಎನ್ನುವ ಪ್ರಶ್ನೆಗಳನ್ನು ಕೇಳಿ ವಿಚಾರಣೆಗೊಳಪಡಿಸಿದ್ದರು. ಆದ್ರೆ, ಯಾವುದೇ ಪ್ರಶ್ನೆಗೆ ಸರಿಯಾಗಿ ಉತ್ತರಿಸಿಲ್ಲ. ಅಲ್ಲದೇ ಹಣದ ಮೂಲದ ಬಗ್ಗೆ ಸರಿಯಾದ ಮಾಹಿತಿ ನೀಡಿರಲಿಲ್ಲ. ಇದರಿಂದ ವಿಧಾನಸೌಧ ಠಾಣೆ ಪೊಲೀಸರು ಸಹಾಯಕ ಇಂಜಿನಿಯರ್ ಜಗದೀಶ್ ಅವರನ್ನು ಬಂಧಿಸಿದ್ದರು.

ಮಂಡ್ಯದ ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಗದೀಶ್ ಕಳೆದ ಐದಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

Published On - 7:27 pm, Fri, 6 January 23

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್