AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿ ಪರೀಕ್ಷಾ ಭವನದ ಮುಂದೆ ಸರತಿ ಸಾಲು; 2 ವಾರಗಳಿಂದ ಅಂಕ ಪಟ್ಟಿಗಾಗಿ ವಿದ್ಯಾರ್ಥಿಗಳ ಅಲೆದಾಟ

ರಾಮನಗರ, ಬಂಗಾರಪೇಟೆ, ಕೋಲಾರ, ಬಿಡದಿ, ಚಿಂತಾಮಣಿ ಭಾಗದಿಂದ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡೆಹಿಡಿದಿರುವುದು ಸೇರಿ ಹಲವು ಸಮಸ್ಯೆಗಳಿಗೆ ಬೆಂಗಳೂರು ವಿವಿಯತ್ತ ವಿದ್ಯಾರ್ಥಿಗಳು ಆಗಮಿಸಿದ್ದಾರೆ.

ಬೆಂಗಳೂರು ವಿವಿ ಪರೀಕ್ಷಾ ಭವನದ ಮುಂದೆ ಸರತಿ ಸಾಲು; 2 ವಾರಗಳಿಂದ ಅಂಕ ಪಟ್ಟಿಗಾಗಿ ವಿದ್ಯಾರ್ಥಿಗಳ ಅಲೆದಾಟ
ಪರೀಕ್ಷಾ ಭವನದ ಮುಂದೆ ಸರತಿ ಸಾಲು
TV9 Web
| Edited By: |

Updated on:Jan 24, 2022 | 7:36 PM

Share

ಬೆಂಗಳೂರು: 2 ವಾರಗಳಿಂದ ಅಂಕ ಪಟ್ಟಿಗಾಗಿ ವಿದ್ಯಾರ್ಥಿಗಳು(Students) ಪರದಾಟ ನಡೆಸುತ್ತಿರುವ ಘಟನೆ ಬೆಂಗಳೂರು ವಿವಿ ಪರೀಕ್ಷಾ ಭವನದಲ್ಲಿ ನಡೆದಿದೆ. ತಾಂತ್ರಿಕ ದೋಷದ ನೆಪವೊಡ್ಡುತ್ತಿರುವ ಬೆಂಗಳೂರು ವಿಶ್ವವಿದ್ಯಾಲಯ, ನಾಳೆ ಬನ್ನಿ ಎಂದು ಹೇಳಿ ವಿದ್ಯಾರ್ಥಿಗಳನ್ನು ಕಳಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಅಂಕಪಟ್ಟಿಗಾಗಿ (Marks card) ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತರು ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸಾಮಾಜಿಕ ಅಂತರವಿಲ್ಲದೆ ಗುಂಪು ಗುಂಪಾಗಿ ವಿದ್ಯಾರ್ಥಿಗಳು ನಿಂತಿದ್ದು, ಶಿಕ್ಷಣ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ, ಬಂಗಾರಪೇಟೆ, ಕೋಲಾರ, ಬಿಡದಿ, ಚಿಂತಾಮಣಿ ಭಾಗದಿಂದ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡೆಹಿಡಿದಿರುವುದು ಸೇರಿ ಹಲವು ಸಮಸ್ಯೆಗಳಿಗೆ ಬೆಂಗಳೂರು ವಿವಿಯತ್ತ(University) ವಿದ್ಯಾರ್ಥಿಗಳು ಆಗಮಿಸಿದ್ದಾರೆ.

ಧಾರವಾಡದ ಶಾಲೆಯೊಂದರಲ್ಲಿ ಕೊವಿಡ್ ಸ್ಪೋಟ

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಅಮೃತೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ 3 ಜನ ಶಿಕ್ಷಕರು ಮತ್ತು 29 ವಿದ್ಯಾರ್ಥಿಗಳಿಗೆ ಕೊವಿಡ್ ದೃಢಪಟ್ಟಿದೆ. ಸದ್ಯ ಕಾಲೇಜನ್ನು ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ. 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿರುವ ಕಾಲೇಜಿನಲ್ಲಿ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇಂದಿನಿಂದ ಜನವರಿ 30 ರವರೆಗೆ ಕಾಲೇಜು ಸೀಲ್ ಡೌನ್ ಮಾಡಲಾಗುತ್ತದೆ ಎಂದು ತಹಶೀಲ್ದಾರ್ ಮಂಜುನಾಥ್ ಅಮಾಸೆ ಹೇಳಿದ್ದಾರೆ.

ಕೋಲಾರ: ವಿವಾದಕ್ಕೆ ಕಾರಣವಾಯ್ತು ಸರ್ಕಾರಿ ಶಾಲಾ ಕೊಠಡಿಯಲ್ಲಿ ಮಾಡಿದ ನಮಾಜ್​

ಸರ್ಕಾರಿ ಶಾಲೆಯ ಕೊಠಡಿಯೊಂದರಲ್ಲಿ ವಿದ್ಯಾರ್ಥಿಗಳು ನಮಾಜ್​ ಮಾಡಿರುವ ಘಟನೆಯೊಂದು ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದ ಬಳೆನಂಜಪ್ಪ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶುಕ್ರವಾರ ಅಂದರೆ ಜನವರಿ 20 ರಂದು ಮಧ್ಯಾಹ್ನ ಬಳೆನಂಜಪ್ಪ ಸರ್ಕಾರಿ ಶಾಲೆಯಲ್ಲಿದ್ದ ಕೆಲವು ಮುಸ್ಲಿಂ ಜನಾಂಗಕ್ಕೆ ಸೇರಿದ ಮಕ್ಕಳು ಶಾಲೆಯ ಕೊಠಡಿಯೊಂದರಲ್ಲಿ ನಮಾಜ್​ ಮಾಡುತ್ತಿದ್ದಾಗ ಅದನ್ನು ಸ್ಥಳೀಯರೊಬ್ಬರು ಮೊಬೈಲ್​ನಲ್ಲಿ ಸೆರೆಹಿಡಿದು, ಈ ವಿಡಿಯೋವನ್ನು​ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಅದೇ ವಿಡಿಯೋ ಮುಳಬಾಗಿಲು ನಗರದಲ್ಲಿ ಸಾಕಷ್ಟು ವಿವಾದಕ್ಕೂ ಕಾರಣವಾಯಿತು. ಶನಿವಾರ ಬೆಳಿಗ್ಗೆ ಹೊತ್ತಿಗೆ ಅದೇ ಬಳೆನಂಜಪ್ಪ ಶಾಲೆಯ ಬಳಿ ಹತ್ತಾರು ಜನ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಸ್ಥಳೀಯರು ಶಾಲೆಯಲ್ಲಿ ನಮಾಜ್​ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ನಮಾಜ್​ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಶನಿವಾರ (ಜನವಿರಿ 21) ಬೆಳಿಗ್ಗೆ ಹತ್ತಾರು ಜನ ಹಿಂದೂ ಸಂಘಟನೆ ಕಾರ್ಯಕರ್ತರು ಬಳೆನಂಜಪ್ಪ ಸರ್ಕಾರಿ ಶಾಲೆಗೆ ಭೇಟಿಕೊಟ್ಟು ಸರ್ವಧರ್ಮ ಸಮನ್ವಯ ಸಾರಬೇಕಿದ್ದ ಸ್ಥಳದಲ್ಲಿ ಈ ರೀತಿ ಪ್ರಾರ್ಥನೆ ಮಾಡಿರುವುದು ತಪ್ಪು ಎಂದು ಪ್ರತಿಭಟನೆ ಮಾಡಿದ್ದಾರೆ. ಅಲ್ಲದೆ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ಉಮಾದೇವಿ ಅವರ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ.

ಮುಖ್ಯ ಶಿಕ್ಷಕಿ ಅವರ ಕಚೇರಿಗೆ ಬಂದ ಹತ್ತಾರು ಕಾರ್ಯಕರ್ತರು ನಮಾಜ್​ ಮಾಡಲು ಅವಕಾಶ ಮಾಡಿಕೊಟ್ಟ ಮುಖ್ಯಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸ್ಥಳಕ್ಕೆ ಬಂದ ಡಿವೈಎಸ್​ಪಿ ಗಿರಿ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿ ನಂತರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿ ಕಳಿಸಿದ್ದಾರೆ.

ಇದನ್ನೂ ಓದಿ:

ಬೆಂಗಳೂರು ವಿಶ್ವವಿದ್ಯಾಲಯದಿಂದ ಮಹಾ ಯಡವಟ್ಟು! 70 ಅಂಕದ ಪರೀಕ್ಷೆಗೆ 73 ಅಂಕ ನೀಡಿದ ವಿವಿ

ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಖಂಡಿಸಿ ಇಂದು ಇಡೀ ದಿನ ಕರ್ನಾಟಕ ರಕ್ಷಣಾ ವೇದಿಕೆಯಿಂದ ಟ್ವಿಟರ್ ಅಭಿಯಾನ!

Published On - 7:25 pm, Mon, 24 January 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ