AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ಬಂದ ಮೇಲೆ ಮೋದಿ ಹುಟ್ಟಿದ್ದು; ನಾನು ಮೋದಿಗಿಂತ ಸೀನಿಯರ್ ಗೊತ್ತಾ? ನಮಗೇ ಪಾಠ ಮಾಡ್ತಾರೆ: ಸಿದ್ದರಾಮಯ್ಯ

Quit India Movement: ಸ್ವಾತಂತ್ರ್ಯ ಬರುವುದಕ್ಕೂ ಮೊದಲೇ ನಾನು ಹುಟ್ಟಿದ್ದೇನೆ. ಸ್ವಾತಂತ್ರ್ಯ ಬಂದಮೇಲೆ ನರೇಂದ್ರ ಮೋದಿ ಹುಟ್ಟಿದ್ದು. ನಾನು ಪ್ರಧಾನಮಂತ್ರಿ ಮೋದಿಗಿಂತ ಸೀನಿಯರ್ ಗೊತ್ತಾ. ಕಾಂಗ್ರೆಸ್ ಪಕ್ಷಕ್ಕೆ 60 ವರ್ಷ ಅಧಿಕಾರ‌ ಕೊಟ್ಟಿದ್ದೀರಾ. ನಮಗೆ 60 ತಿಂಗಳು‌ ಕೊಡಿ ಎಂದು ಮೋದಿ‌ ಹೇಳಿದ್ದರು. 7 ವರ್ಷದಲ್ಲಿ ಏನಾದರೂ ಬದಲಾವಣೆ ಆಗಿದೆಯಾ? -ಸಿದ್ದರಾಮಯ್ಯ

ಸ್ವಾತಂತ್ರ್ಯ ಬಂದ ಮೇಲೆ ಮೋದಿ ಹುಟ್ಟಿದ್ದು; ನಾನು ಮೋದಿಗಿಂತ ಸೀನಿಯರ್ ಗೊತ್ತಾ? ನಮಗೇ ಪಾಠ ಮಾಡ್ತಾರೆ: ಸಿದ್ದರಾಮಯ್ಯ
ಸಿದ್ದರಾಮಯ್ಯ
TV9 Web
| Edited By: |

Updated on:Aug 09, 2021 | 1:42 PM

Share

ಬೆಂಗಳೂರು: ಸ್ವಾತಂತ್ರ್ಯ ಬರುವುದಕ್ಕೂ ಮೊದಲೇ ನಾನು ಹುಟ್ಟಿದ್ದೇನೆ. ಸ್ವಾತಂತ್ರ್ಯ ಬಂದಮೇಲೆ ನರೇಂದ್ರ ಮೋದಿ ಹುಟ್ಟಿದ್ದು. ನಾನು ಪ್ರಧಾನಮಂತ್ರಿ ಮೋದಿಗಿಂತ ಸೀನಿಯರ್ ಗೊತ್ತಾ. ಆದ್ರೆ ಇವಾಗ ಅವರು ನಮಗೇ ಪಾಠ ಮಾಡ್ತಾರೆ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ(Siddaramaiah) ಟೀಕೆ ಮಾಡಿದ್ದಾರೆ.

ಕ್ವಿಟ್ ಇಂಡಿಯಾ ಚಳವಳಿ(Quit India Movement) ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ನೆರವೇರಿತು. ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಸೇರಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಆರ್.ವಿ.ದೇಶಪಾಂಡೆ, ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಭಾಗಿಯಾಗಿದ್ದರು. ಈ ವೇಳೆ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

7 ವರ್ಷದಲ್ಲಿ ಏನಾದರೂ ಬದಲಾವಣೆ ಆಗಿದೆಯಾ? ಸ್ವಾತಂತ್ರ್ಯ ಬರುವುದಕ್ಕೂ ಮೊದಲೇ ನಾನು ಹುಟ್ಟಿದ್ದೇನೆ. ಸ್ವಾತಂತ್ರ್ಯ ಬಂದಮೇಲೆ ನರೇಂದ್ರ ಮೋದಿ ಹುಟ್ಟಿದ್ದು. ನಾನು ಪ್ರಧಾನಮಂತ್ರಿ ಮೋದಿಗಿಂತ ಸೀನಿಯರ್ ಗೊತ್ತಾ. ಕಾಂಗ್ರೆಸ್ ಪಕ್ಷಕ್ಕೆ 60 ವರ್ಷ ಅಧಿಕಾರ‌ ಕೊಟ್ಟಿದ್ದೀರಾ. ನಮಗೆ 60 ತಿಂಗಳು‌ ಕೊಡಿ ಎಂದು ಮೋದಿ‌ ಹೇಳಿದ್ದರು. 7 ವರ್ಷದಲ್ಲಿ ಏನಾದರೂ ಬದಲಾವಣೆ ಆಗಿದೆಯಾ? ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿದೆ, ಜಿಡಿಪಿ ಮೈನಸ್ ಆಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಸಾಧನೆ. ಜನರ ಲಿವಿಂಗ್ ಕಾಸ್ಟ್ ಹೆಚ್ಚಿದೆ, ಉದ್ಯೋಗ ಹೋಗಿದೆ. ಹೀಗಾದ್ರೆ ಸಾಮಾನ್ಯ ಜನರು ಹೇಗೆ ಬದುಕಬೇಕು. ಮೋದಿ, ಬಿಜೆಪಿಯವರಷ್ಟು ಸುಳ್ಳುಗಾರರು ಬೇಱರೂ ಇಲ್ಲ. ವಲಸೆ ಹೋದವರೆಲ್ಲ ನಿಜವಾದ ಕಾಂಗ್ರೆಸ್ಸಿಗರಲ್ಲ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಟಿಪ್ಪುಸುಲ್ತಾನ್ ಮಾಡಿದ ತಪ್ಪು ಏನಂತ ಹೇಳಲ್ಲ ನಾನು ಸಿಎಂ ಆಗಿದ್ದಾಗ ಟಿಪ್ಪು ಜಯಂತಿಯನ್ನು ಮಾಡಿದ್ದೆ. ಟಿಪ್ಪುಸುಲ್ತಾನ್ ದಿವಾನರಾಗಿದ್ದವರು ಕೃಷ್ಣ ಸ್ವಾಮಿ ಬ್ರಿಟಿಷರ ಕಾಲದಲ್ಲಿ ಕೂಡ ಬ್ರಾಹ್ಮಣರ ಆಳ್ವಿಕೆ ಇತ್ತು. ಈಗ ಅವರೇ ನಮಗೆ ಪಾಠ ಮಾಡುತ್ತಾರೆ. ಟಿಪ್ಪು ಜಯಂತಿ ಮಾಡಿದ್ರೆ ಹಿಂದುತ್ವ ವಿರೋಧಿ ಅಂತಾರೆ. ಆದರೆ ಟಿಪ್ಪುಸುಲ್ತಾನ್ ಮಾಡಿದ ತಪ್ಪು ಏನಂತ ಹೇಳಲ್ಲ. ಯಾರೊಬ್ಬರೂ ಹೇಳಲ್ಲ. ಟಿಪ್ಪು ಸುಲ್ತಾನ್ ಬ್ರಿಟಿಷರ ಮೇಲೆ 4 ಯುದ್ಧ ಮಾಡಿದ್ದನು. ಟಿಪ್ಪು ಮೇಲೆ ಮಾತ್ರ ಕೋಪ, ದಿವಾನರ ಮೇಲಿಲ್ಲ. ಎಂಥಾ ನೀಚರು ಬಿಜೆಪಿಗರು ಎಂದು ಸಿದ್ದರಾಮಯ್ಯ ಬಿಜೆಪಿಯನ್ನು ಜರಿದಿದ್ದಾರೆ.

ಬಿಜೆಪಿಯವರ ತ್ಯಾಗ ಬಲಿದಾನ ಏನೇನೂ ಇಲ್ಲ. ಬಿಜೆಪಿಯವರು ಸಾವರ್ಕರ್ ಬಗ್ಗೆ ಬಹಳ‌ ಮಾತನಾಡ್ತಾರೆ. ಇಲ್ಲಿಂದ ಹೋದವರು ನಿಜವಾದ ಕಾಂಗ್ರೆಸ್ಸಿಗರಲ್ಲ. ಕಾಂಗ್ರೆಸ್ ಸಿದ್ಧಾಂತ ಅಂದರೆ ತ್ಯಾಗ ಬಲಿದಾನ. ಆನೇಕ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅವಱರೂ ಸಮಾಜ ಪರಿವರ್ತನೆ ಮಾಡುವವರಲ್ಲ. ಬಿ.ಎಸ್.ಯಡಿಯೂರಪ್ಪ ಒಬ್ಬ ಭ್ರಷ್ಟ ಸಿಎಂ ಆಗಿದ್ದರು. ಈಗ ರಾಜ್ಯದಲ್ಲಿ ಮತ್ತೊಬ್ಬ ಮುಖ್ಯಮಂತ್ರಿ ಬಂದಿದ್ದಾರೆ. ಈಗಿನ ಸಿಎಂ, ಬಿ.ಎಸ್.ಯಡಿಯೂರಪ್ಪ ರಬ್ಬರ್ ಸ್ಟ್ಯಾಂಪ್. ಈಗಿನ ಸಿಎಂರಿಂದ ಏನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಕಾಲ ಕೂಡಿ ಬಂದಿದೆ, ಮತ್ತೆ ಹೋರಾಟ ಮಾಡೋಣ. ಸ್ವತಂತ್ರರಾಗಿ ಮತ್ತೆ ಅಧಿಕಾರಕ್ಕೆ ಬರೋಣ ಎಂದರು.

ಇದನ್ನೂ ಓದಿ: ಆಗ ಬಿಳಿ ಬ್ರಿಟಿಷರು ನಮ್ಮನ್ನ ಆಳಿದ್ರು, ಈಗ ಕಪ್ಪು ಬ್ರಿಟಿಷರು ನಮ್ಮನ್ನ ಆಳುತ್ತಿದ್ದಾರೆ: ಬಿ ಕೆ ಹರಿಪ್ರಸಾದ್ ವ್ಯಾಖ್ಯಾನ

Published On - 1:37 pm, Mon, 9 August 21

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?