AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಮ್ಮನಹಳ್ಳಿ ಕ್ಷೇತ್ರಕ್ಕೆ ₹106 ಕೋಟಿ ಕೊಡಬೇಕಿತ್ತು ಆದ್ರೆ ಸಿಎಂ ₹206 ಕೋಟಿ ಕೊಟ್ಟಿದ್ದಾರೆ -ಆರ್ ಅಶೋಕ್

ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ. ಸಿಎಂ ಬೆಂಗಳೂರಿಗೆ ₹6 ಸಾವಿರ ಕೋಟಿ ಅನುದಾನ ಕೊಟ್ಟಿದ್ದಾರೆ. ಬೊಮ್ಮನಹಳ್ಳಿ ಕ್ಷೇತ್ರಕ್ಕೆ ₹106 ಕೋಟಿ ಅನುದಾನ ಕೊಡಬೇಕಿತ್ತು. ಆದರೆ ಸಿಎಂ ಬಸವರಾಜ ಬೊಮ್ಮಾಯಿ‌ ₹206 ಕೋಟಿ ಹಣ ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಕೊಟ್ಟಿದ್ದಾರೆ. -ಆರ್ ಅಶೋಕ್

ಬೊಮ್ಮನಹಳ್ಳಿ ಕ್ಷೇತ್ರಕ್ಕೆ ₹106 ಕೋಟಿ ಕೊಡಬೇಕಿತ್ತು ಆದ್ರೆ ಸಿಎಂ ₹206 ಕೋಟಿ ಕೊಟ್ಟಿದ್ದಾರೆ -ಆರ್ ಅಶೋಕ್
ಸಚಿವ ಆರ್.ಅಶೋಕ್ (ಸಂಗ್ರಹ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on: Mar 01, 2022 | 2:50 PM

Share

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರಿಗೆ(Basavaraj Bommai) ಅಭಿನಂದನೆ ಸಲ್ಲಿಸಿ ಮತ್ತೊಂದು ಕಡೆ  ಕಾಂಗ್ರೆಸ್ ಎರಡನೇ ಹಂತದ ಪಾದಯಾತ್ರೆ(Congress Padyatra) ಬಗ್ಗೆ ಸಚಿವ ಆರ್. ಅಶೋಕ್(R Ashok) ವ್ಯಂಗ್ಯವಾಡಿದ್ದಾರೆ. ಸಿಎಂ ಬೆಂಗಳೂರಿಗೆ ₹6 ಸಾವಿರ ಕೋಟಿ ಕೊಟ್ಟಿದ್ದಾರೆ. ಸಿಎಂ ಬೊಮ್ಮನಹಳ್ಳಿ ಕ್ಷೇತ್ರಕ್ಕೆ ₹106 ಕೋಟಿ ಕೊಡ್ಬೇಕಿತ್ತು. ₹106 ಕೋಟಿ ಬದಲು ₹206 ಕೋಟಿ ಹಣ ಕೊಟ್ಟಿದ್ದಾರೆ. ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದು ಇದೇ ವೇಳೆ ಕಾಂಗ್ರೆಸ್ ಪಾದಯಾತ್ರೆ ಸಂಬಂಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ. ಸಿಎಂ ಬೆಂಗಳೂರಿಗೆ ₹6 ಸಾವಿರ ಕೋಟಿ ಅನುದಾನ ಕೊಟ್ಟಿದ್ದಾರೆ. ಬೊಮ್ಮನಹಳ್ಳಿ ಕ್ಷೇತ್ರಕ್ಕೆ ₹106 ಕೋಟಿ ಅನುದಾನ ಕೊಡಬೇಕಿತ್ತು. ಆದರೆ ಸಿಎಂ ಬಸವರಾಜ ಬೊಮ್ಮಾಯಿ‌ ₹206 ಕೋಟಿ ಹಣ ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಕೊಟ್ಟಿದ್ದಾರೆ. ಇನ್ನಷ್ಟು ಅನುದಾನ ಸಿಎಂ ಕೊಡಬಹುದು ಎಂಬ ಭರವಸೆ ಇದೆ. ಬೆಂಗಳೂರು ಇನ್ನಷ್ಟು ಅಭಿವೃದ್ಧಿ ಆಗಬೇಕು. ಕೋವಿಡ್ನ‌ಲ್ಲಿ ಬಹಳಷ್ಟು ಜನರು ಸಾವನಪ್ಪಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಸಹಾಯ ಸಿಎಂ ಮಾಡಿದ್ದಾರೆ ಎಂದು R.ಅಶೋಕ್ ತಿಳಿಸಿದ್ರು.

ಇನ್ನು ಇದೇ ವೇಳೆ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಮಾತನಾಡಿದ R.ಅಶೋಕ್, ನಾವು ಪಾದಯಾತ್ರೆ ಮಾಡದೇ ಇರಬಹುದು. ಆದ್ರೆ ಜನರ ಪರವಾಗಿ ನಮ್ಮ ಸರ್ಕಾರವಿದೆ. ಅಧಿಕಾರ ಇದ್ದಾಗ ಕಾಂಗ್ರೆಸ್ನವರು ಏನನ್ನೂ ಮಾಡಿಲ್ಲ. ಅಧಿಕಾರ ಕೊಟ್ರೆ ಈಗ ಮಾಡ್ತೀನಿ ಅಂದ್ರೆ ಜನ ನಂಬ್ತಾರಾ? ಜನರಿಗೆ ಗೊತ್ತಾಗಿದೆ. ಅಧಿಕಾರ ಇದ್ದಾಗ ಕೆಲಸ ಮಾಡಿಲ್ಲ. ಈಗ ಕಾಂಗ್ರೆಸ್ಗೆ ಅಧಿಕಾರ ಕೊಟ್ಟರೆ ಏನ್ ಮಾಡ್ತಾರೆ? ಚುನಾವಣೆ ಬಂದಾಗ ಅಣ್ಣಾ, ಅಕ್ಕಾ, ಆಂಟಿ ವೋಟ್ ಕೊಡಿ ಅಂತಾರೆ. ಐದು ವರ್ಷ ಅಧಿಕಾರ ಕೊಟ್ಟರೆ ಯಾವುದೇ ಕೆಲಸ ಮಾಡಲ್ಲ ಎಂದು R.ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ರು.

ನಿನ್ನೆ ಹಣದ ವಿಚಾರಕ್ಕೆ ನನಗೂ, ಸತೀಶ್ ರೆಡ್ಡಿಗೂ ಜಗಳ ನಡೆಯಿತು. ಅಭಿವೃದ್ಧಿ ವಿಚಾರಕ್ಕೆ ಹಣ ಕೊಡಿ ಎಂದು ಸತೀಶ್ ರೆಡ್ಡಿ ಕೂಗಾಡಿದ್ರು. ಆಗ ಸಿಎಂ ಮಧ್ಯ ಪ್ರವೇಶಿಸಿ ನಮ್ಮಿಬ್ಬರ ಜಗಳ ಬಿಡಿಸಿದ್ರು. ಕ್ಷೇತ್ರದ ಜನರು ಹಾಗೂ ಅಭಿವೃದ್ಧಿಗೆ ಅವರು ಜಗಳ ಆಡೋಕು ರೆಡಿ. ಅಂತಹ ಶಾಸಕರು ಪಡೆದವರು ನೀವು ಪುಣ್ಯವಂತರು ಎಂದು ಬೆಂಗಳೂರು ಕಾರ್ಯಕ್ರಮದಲ್ಲಿ ಆರ್.ಅಶೋಕ್ ಸತೀಶ್ ರೆಡ್ಡಿ ಪರವಾಗಿ ಮಾತನಾಡಿದ್ರು.

ಇದನ್ನೂ ಓದಿ: ಅಪರೂಪದ ಅವಕಾಶ ಗಿಟ್ಟಿಸಿಕೊಂಡ ರಶ್ಮಿಕಾ; ಖುಷಿ ಹಂಚಿಕೊಂಡ ಕೊಡಗಿನ ಹುಡುಗಿ

ಕಾಂಗ್ರೆಸ್ ಪಾದಯಾತ್ರೆಯಿಂದ ಬೆಂಗಳೂರಿಗರಿಗೆ ಟ್ರಾಫಿಕ್​ ಸಂಕಷ್ಟ; ಅದು ಬಿಟ್ಟು ಬೇರೆ ಉಪಯೋಗವಿಲ್ಲ: ಬಸವರಾಜ ಬೊಮ್ಮಾಯಿ

Follow Us
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ