AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆಗೆ ಬೆಳಗಾವಿ, ಉತ್ತರ ಕನ್ನಡ, ಮಲೆನಾಡಲ್ಲಿ ಹೆಚ್ಚು ಅನಾಹುತ; ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ

ಕರಾವಳಿ ಭಾಗಗಳಲ್ಲಿ ಇನ್ನು ಮೂರು ದಿನ ಮಳೆಯಾಗುತ್ತದೆ ಎಂದು ತಿಳಿಸಿದ ಆರ್.ಅಶೋಕ್, 31,360 ಜನರನ್ನ ಸ್ಥಳಾಂತರ ಮಾಡಲಾಗಿದೆ. 153 ಜನರನ್ನ ರಕ್ಷಣೆ ಮಾಡಲಾಗಿದೆ. 9 ಜನರು ಸಾವನ್ನಪ್ಪಿದ್ದಾರೆ.

ಭಾರಿ ಮಳೆಗೆ ಬೆಳಗಾವಿ, ಉತ್ತರ ಕನ್ನಡ, ಮಲೆನಾಡಲ್ಲಿ ಹೆಚ್ಚು ಅನಾಹುತ; ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ
ಆರ್ ಅಶೋಕ್ (ಸಂಗ್ರಹ ಚಿತ್ರ)
TV9 Web
| Updated By: sandhya thejappa|

Updated on: Jul 25, 2021 | 9:10 AM

Share

ಬೆಂಗಳೂರು: ಮಳೆಯ ಆರ್ಭಟಕ್ಕೆ ಬೆಳಗಾವಿ, ಉತ್ತರ ಕನ್ನಡ, ಮಲೆನಾಡಲ್ಲಿ ಹೆಚ್ಚು ಅನಾಹುತವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ (R Ashok) ತಿಳಿಸಿದ್ದಾರೆ. ಪರಿಸ್ಥಿತಿ ನಿಭಾಯಿಸಲು 7 ಎನ್​ಡಿಆರ್​ರಫ್​ (NDRF) ಮತ್ತು 15 ಎಸ್​ಡಿಇಆರ್​ಎಫ್​ (SDRF) ತಂಡವನ್ನು ನಿಯೋಜನೆ ಮಾಡಲಾಗಿದೆ. 16 ಕಡೆ ಭೂಕುಸಿತವಾಗಿದ್ದು, ರಾಷ್ಟ್ರೀಯ ಹೆದ್ದಾರಿ 73 ಕುಸಿದಿದೆ. ಒಂದು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ತಿ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ಕರಾವಳಿ ಭಾಗಗಳಲ್ಲಿ ಇನ್ನು ಮೂರು ದಿನ ಮಳೆಯಾಗುತ್ತದೆ ಎಂದು ತಿಳಿಸಿದ ಆರ್.ಅಶೋಕ್, 31,360 ಜನರನ್ನ ಸ್ಥಳಾಂತರ ಮಾಡಲಾಗಿದೆ. 153 ಜನರನ್ನ ರಕ್ಷಣೆ ಮಾಡಲಾಗಿದೆ. 9 ಜನರು ಸಾವನ್ನಪ್ಪಿದ್ದಾರೆ. 24,417 ಜನರಿಗೆ ಊಟ ವಸತಿ ಸೇರಿದಂತೆ ಆಶ್ರಯ ಕಲ್ಪಿಸಲಾಗಿದೆ. 3 ಜನ ನಾಪತ್ತೆಯಾಗಿದ್ದಾರೆ. 134 ಮನೆಗಳು ಸಂಪೂರ್ಣ ಹಾನಿಯಾಗಿವೆ. ಪ್ರವಾಹಕ್ಕೆ ತುತ್ತಾಗಿ 78 ಜಾನುವಾರು ಮೃತಪಟ್ಟಿವೆ. 45 ತಾಲೂಕುಗಳ 383 ಗ್ರಾಮಗಳ ಜನರಿಗೆ ಸಂಕಷ್ಟ ಎದುರಾಗಿದೆ ಎಂದು ತಿಳಿಸಿದರು.

ಕಾಫಿ ತೋಟ, ಅಡಿಕೆ ತೋಟ ಸೇರಿದಂತೆ ಸಾಕಷ್ಟು ಹಾನಿಯಾಗಿದೆ. ವರದಿ ಬಂದ ತಕ್ಷಣ ಪರಿಹಾರ ನೀಡಲಾಗುತ್ತದೆ. 555 ಕಿ.ಮೀ ರಸ್ತೆ ಹಾಳಾಗಿದೆ. 3,501 ವಿದ್ಯುತ್ ಕಂಬಗಳು ಹಾಳಾಗಿವೆ. ಎಲೆಕ್ಟ್ರಿಸಿಟಿ ವ್ಯವಸ್ಥೆ ಸರಿ ಮಾಡೋದಕ್ಕೆ ತಿಳಿಸಲಾಗಿದೆ. ಕೇಂದ್ರಕ್ಕೆ ನಿಖರವಾದ ಮಾಹಿತಿ ನೀಡಬೇಕಾಗಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ

ಮಳೆ ಅಬ್ಬರ ತಗ್ಗಿದರೂ ಬೆಳಗಾವಿಯಲ್ಲಿ ನಿಲ್ಲದ ಭೀತಿ; ಬೆಳೆ ಹಾನಿಗೆ ಪರಿಹಾರ ನೀಡುವಂತೆ ರೈತರ ಆಗ್ರಹ

ಕಪಿಲಾ ನದಿ ಪಾತ್ರದಲ್ಲಿ ಮುಂದುವರಿದ ಪ್ರವಾಹ ಭೀತಿ; ಎಚ್ಚರಿಕೆಯಿಂದಿರಲು ಸೂಚನೆ

(R Ashok informs about heavy rains in Belgaum Uttara Kannada and Malanad)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ