ತಪ್ಪು ಮಾಡಿದವರಿಗೆ ನೋಟಿಸ್​​​ ನೀಡುವುದು ಸಹಜ; ಇದು ಇಟಲಿ ಅಲ್ಲ ಭಾರತ: ಕಾಂಗ್ರೆಸ್​ ವಿರುದ್ಧ ಆರ್​ ಅಶೋಕ ವಾಗ್ದಾಳಿ

| Updated By: ವಿವೇಕ ಬಿರಾದಾರ

Updated on: Jun 14, 2022 | 5:04 PM

ರಾಹುಲ್​​ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಇಡಿ ಸಮನ್ಸ ನೀಡಿದನ್ನು  ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ ಇದು ಕಾಂಗ್ರೆಸ್​​​​ನವರಿಗೆ ಸಂಬಂಧಿಸಿದ ಪ್ರಕರಣ ಅಲ್ಲ. ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಪ್ರಕರಣವಾಗಿದೆ. ​​ತಪ್ಪು ಮಾಡಿದವರಿಗೆ ನೋಟಿಸ್​​​ ನೀಡುವುದು ಸಹಜ ಪ್ರಕ್ರಿಯೆ. ಇದು ಇಟಲಿ ಅಲ್ಲ ಭಾರತ, ಇಲ್ಲಿ ರಾಜಕೀಯ ಮಾಡಬೇಡಿ ಎಂದು ವಾಗ್ದಾಳಿ ಮಾಡಿದ್ದಾರೆ.

ತಪ್ಪು ಮಾಡಿದವರಿಗೆ ನೋಟಿಸ್​​​ ನೀಡುವುದು ಸಹಜ;  ಇದು ಇಟಲಿ ಅಲ್ಲ ಭಾರತ: ಕಾಂಗ್ರೆಸ್​ ವಿರುದ್ಧ ಆರ್​ ಅಶೋಕ ವಾಗ್ದಾಳಿ
ಕಂದಾಯ ಸಚಿವ ಆರ್.ಅಶೋಕ್
Follow us on

ಬೆಂಗಳೂರು: ರಾಹುಲ್​​ ಗಾಂಧಿ (Rahul Gandhi) ಮತ್ತು ಸೋನಿಯಾ ಗಾಂಧಿ (Sonia Gandhi) ಅವರಿಗೆ ಇಡಿ ಸಮನ್ಸ ನೀಡಿದನ್ನು  ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ (Congress) ಪ್ರತಿಭಟನೆ ಮಾಡುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ (R Ashok) ಮಾತನಾಡಿ ಸ್ವಾತಂತ್ರ್ಯಕ್ಕೂ ಮುನ್ನ ನ್ಯಾಷನಲ್ ​​​​ಹೆರಾಲ್ಡ್ ಪತ್ರಿಕೆ ಆರಂಭವಾಗಿದೆ. ಸ್ವಾತಂತ್ರ್ಯ ಯೋಧರು ಹಣ ಹಾಕಿ ಪ್ರಾರಂಭವಾದ ಪತ್ರಿಕೆಗೆ ಅಂದಿನ ಸರ್ಕಾರಗಳು ಭೂಮಿ ನೀಡಿದ್ದವು. ಪತ್ರಿಕೆಯ ಭೂ ಕಬಳಿಕೆಗೆ ಸೋನಿಯಾ, ರಾಹುಲ್​ ಮುಂದಾಗಿದ್ದಾರೆ. ಇದು ಕಾಂಗ್ರೆಸ್​​​​ನವರಿಗೆ ಸಂಬಂಧಿಸಿದ ಪ್ರಕರಣ ಅಲ್ಲ. ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಪ್ರಕರಣವಾಗಿದೆ. ​​ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಇಡಿ, ಸಿಬಿಐ ಇದ್ದವು. ತಪ್ಪು ಮಾಡಿದವರಿಗೆ ನೋಟಿಸ್​​​ ನೀಡುವುದು ಸಹಜ ಪ್ರಕ್ರಿಯೆ. ಇದು ಇಟಲಿ ಅಲ್ಲ ಭಾರತ, ಇಲ್ಲಿ ರಾಜಕೀಯ ಮಾಡಬೇಡಿ ಎಂದು ವಾಗ್ದಾಳಿ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಅವರಿಗೆ ಎಮರ್ಜೆನ್ಸಿ ತಪ್ಪು ಎನ್ನೋದು ಈಗಲಾದರೂ ಅರ್ಥ ಅಯ್ತಾ? ನಾಯಕರ ಬಂಧನ ಆಗಿಲ್ಲ ಆಗಲೇ ಇದನ್ನು ಭೀತಿಯಿಂದ ರಾಜಕೀಯಗೊಳಿಸುತ್ತಿದ್ದಾರೆ. ಕಾಂಗ್ರೆಸ್ ತಪ್ಪಿತಸ್ಥರಲ್ಲ ಅಂದರೆ ಯಾಕೆ ಭೀತಿ? ಕಾಂಗ್ರೆಸ್ ಪಾರ್ಟಿ ಮೇಲೆ ಹಾಕಿರುವ ಕೇಸ್ ಅಲ್ಲ ಇದು, ಸರ್ಕಾರ ಹಾಕಿರುವ ಕೇಸ್ ಕೂಡ ಅಲ್ಲ. ವ್ಯಕ್ತಿಯೊಬ್ಬರು ಹಾಕಿದ ಕೇಸ್, ದೂರು ಬಂದಿದೆ ತನಿಖೆ ಮಾಡುತ್ತಿದ್ದಾರೆ. ನಾಳೆ ಯಾವುದೋ ಜನ ಸಾಮಾನ್ಯರ ಮೇಲೂ ಇಡಿ ಕೇಸ್ ಇದೆ. ಹಾಗಂತ ಇ.ಡಿ ಕೇಸ್ ಇರುವವರೆಲ್ಲ ಕೂಡ ಇಡಿ ಮುಂದೆ ಪ್ರೊಟೆಸ್ಟ್ ಮಾಡ್ತಿದ್ದಾರಾ? ಕಾನೂನನ್ನು ದುರುಪಯೋಗ ಪಡಿಸಿಕೊಳ್ಳುವ ಕೆಲಸ ಮಾಡಬೇಡಿ ಎಂದು ಹೇಳಿದರು.

ಇದನ್ನು ಓದಿ: ತಾಳಿ ಕಟ್ಟದೆ ಬಸವ ತತ್ವದ ಅಡಿಯಲ್ಲಿ ಮಠಾಧೀಶರ ಸಮ್ಮುಖದಲ್ಲಿ ನಡೆದ ವಿಶಿಷ್ಟ ಮದುವೆ

ಕಾಂಗ್ರೆಸ್​​ ಪ್ರತಿಭಟನೆಗೆ ಕಾರಣವೇನು ?

ಸೋನಿಯಾ ಗಾಂಧಿ  (Sonia Gandhi), ರಾಹುಲ್ ಗಾಂಧಿಗೆ (Rahul Gandhi) ಇಡಿ ಸಮನ್ಸ್ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು. ಮಕ್ಕಳ ಸಮೇತ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇಡಿ ಕಚೇರಿಗೆ ಮುತ್ತಿಗೆ ಹಾಕುವ ನಿಟ್ಟಿನಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆ ಹಾಕುತ್ತಿದ್ದಾರೆ.

ಇದನ್ನು ಓದಿ: ಮುಸ್ಲಿಂ ಯುವಕನ ಎದೆಯ ಮೇಲೆ ಸಿಎಂ ಯೋಗಿ ಟ್ಯಾಟೂ! ಯೋಗಿ ಬಗ್ಗೆ ಯುವಕ ಹೇಳಿದ್ದೇನು ಗೊತ್ತಾ?

ಲಾಲ್​ಬಾಗ್​ ಗೇಟ್​ನಿಂದ ಕಾಂಗ್ರೆಸ್ ರ್ಯಾಲಿ ನಡೆದಿತ್ತು. ಮೆರವಣಿಗೆಗೂ ಮುನ್ನಾ ಕಾರ್ಯಕರ್ತರು ಬಾರ್​ ಕೋಲ್ ಚಳುವಳಿ ನಡೆಸಿದರು. ಮೋದಿ ವೇಷಧಾರಿಗೆ ಬಾರ್ ಕೋಲ್​ನಿಂದ ಏಟು ಕೊಟ್ಟು ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಧರಣಿಯಲ್ಲಿ ಯಾವುದೇ ಅಹಿಕತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಲಾಲ್​ಬಾಗ್​ ಸುತ್ತಮುತ್ತ ಪೊಲೀಸ್ ಭದ್ರತೆ ಇದೆ. ವಿಲ್ಸನ್​ ಗಾರ್ಡನ್​ ಸ್ಮಶಾನದ ಬಳಿ ರ್ಯಾಲಿ ತಡೆಯಲು ಪೊಲೀಸರು ಬ್ಯಾರಿಕೇಡ್​ ಅಳವಡಿಕೆ ಮಾಡಿದ್ದಾರೆ. ಧರಣಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವು ಹಿರಿಯ ನಾಯಕರು ಭಾಗಿಯಾಗಿದ್ದರು.

ರಾಜ್ಯದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.  ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Tue, 14 June 22