AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕ್ಯಾನಿಂಗ್​​ಗೆ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಆನೇಕಲ್​ನಲ್ಲೊಬ್ಬ ಕಾಮುಕ ರೇಡಿಯಾಲಜಿಸ್ಟ್

ಸ್ಕ್ಯಾನಿಂಗ್ ನೆಪದಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಆನೇಕಲ್​​ನ ರೇಡಿಯಾಲಜಿಸ್ಟ್ ವಿರುದ್ಧ ಕೇಳಿಬಂದಿದೆ. ಸಂತ್ರಸ್ತೆ ದೂರು ದಾಖಲಿಸಿದ್ದರೂ, ಪೊಲೀಸರು ಆರೋಪಿಯನ್ನು ಬಂಧಿಸಿಲ್ಲ. ಮಹಿಳೆಯ ಜೊತೆ ರೇಡಿಯಾಲಜಿಸ್ಟ್ ವಿಕೃತಿ ಮೆರೆದ ದೃಶ್ಯ ಮೊಬೈಲ್​ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಕ್ಯಾನಿಂಗ್​​ಗೆ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಆನೇಕಲ್​ನಲ್ಲೊಬ್ಬ ಕಾಮುಕ ರೇಡಿಯಾಲಜಿಸ್ಟ್
ಸಾಂದರ್ಭಿಕ ಚಿತ್ರ
ರಾಮು, ಆನೇಕಲ್​
| Updated By: ಪ್ರಸನ್ನ ಹೆಗಡೆ|

Updated on:Nov 12, 2025 | 12:20 PM

Share

ಬೆಂಗಳೂರು, ನವೆಂಬರ್​ 12: ಸ್ಕ್ಯಾನಿಂಗ್ ಸೆಂಟರ್​ಗೆ ಬರುವ ಮಹಿಳೆಯರ ಮೇಲೆ ರೇಡಿಯಾಲಜಿಸ್ಟ್ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಆರೋಪ ಆನೇಕಲ್ ಪಟ್ಟಣದಲ್ಲಿ ಕೇಳಿಬಂದಿದೆ. ಖಾಸಗಿ ಸ್ಕ್ಯಾನಿಂಗ್ ಸೆಂಟರ್​​ನಲ್ಲಿ ರೇಡಿಯಾಲಜಿಸ್ಟ್ ಆಗಿರುವ ಜಯಕುಮಾರ್ ವಿರುದ್ಧ ಆರೋಪ ಕೇಳಿಬಂದಿದ್ದು, ಸ್ಕ್ಯಾನಿಂಗ್​ ನೆಪದಲ್ಲಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿರುವ ಬಗ್ಗೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೊಟ್ಟೆ ನೋವಿನ ಕಾರಣ ಪತಿಯೊಂದಿಗೆ ಮಹಿಳೆ ಸ್ಕ್ಯಾನಿಂಗ್​ ಸೆಂಟರ್​​ಗೆ ಹೋಗಿದ್ದಳು. ಈ ವೇಳೆ ಸ್ಕ್ಯಾನಿಂಗ್​ ನೆಪದಲ್ಲಿ ರೇಡಿಯಾಲಜಿಸ್ಟ್​ ಜಯಕುಮಾರ್​ ಮಹಿಳೆ ಖಾಸಗಿ ಅಂಗಗಳಿಗೆ ಕೈ ಹಾಕಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿರುವ ಆರೋಪಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದಾನೆ. ಘಟನೆಯ ದೃಶ್ಯವನ್ನು ಸಂತ್ರಸ್ತ ಮಹಿಳೆ ಮೊಬೈಲ್​ನಲ್ಲಿ ರೆಕಾರ್ಡ್​ ಮಾಡಿಕೊಂಡಿದ್ದು, ಪೊಲೀಸರಿಗೆ ದೂರು ನೀಡಿದ್ದಾಳೆ. ಆದರೆ, ಪೊಲೀಸರು ಆರೋಪಿ ಜಯಕುಮಾರ್​ನನ್ನು ಈವರೆಗೆ ಬಂಧಿಸಿಲ್ಲ. ಬದಲಾಗಿ ಠಾಣೆಗೆ ಕರೆಸಿ ಬಿಟ್ಟುಕಳುಹಿಸಿದ್ದಾರೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು

ಡೇಟಿಂಗ್​ ಆ್ಯಪ್​ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಪಂಗನಾಮ

ಡೇಟಿಂಗ್​ ಆ್ಯಪ್​ನಲ್ಲಿ ಪರಿಚಯವಾಗಿದ್ದ ಯುವತಿ ನಂಬಿ ಯುವಕನೋರ್ವ ಹಣ, ಬಂಗಾರ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 2 ತಿಂಗಳ ಹಿಂದೆ ಡೇಟಿಂಗ್​ ಆ್ಯಪ್​ನಲ್ಲಿ ಪರಿಚಯವಾಗಿದ್ದ ಕವಿಪ್ರಿಯಾ ಎಂಬ ಹೆಸರಿನ ಯುವತಿಯನ್ನ ನವೆಂಬರ್​ 1ರಂದು ಇಂದಿರಾನಗರದ ರೆಸ್ಟೋರೆಂಟ್​ನಲ್ಲಿ ಯುವಕ ಭೇಟಿಯಾಗಿದ್ದ. ಬಳಿಕ ಇಬ್ಬರೂ ಮದ್ಯಪಾನ ಮಾಡಿದ್ದು, ಪಾರ್ಟಿ ಬಳಿಕ ಯುವಕನನ್ನ ಕವಿಪ್ರಿಯಾ ಒಂದು ಲಾಡ್ಜ್​​ಗೆ ಕರೆದೊಯ್ದಿದ್ದಳು. ಮಧ್ಯರಾತ್ರಿ ಆಕೆಯೇ ಊಟ ಆರ್ಡರ್ ಮಾಡಿ ತರಿಸಿಕೊಂಡಿದ್ದಳು. ನಂತರ ಕವಿಪ್ರಿಯಾ ಕೊಟ್ಟ ನೀರು ಕುಡಿದ ಯುವಕ ಪ್ರಜ್ಞೆ ತಪ್ಪಿದ್ದ ಎನ್ನಲಾಗಿದ್ದು, ಬೆಳಿಗ್ಗೆ ಎದ್ದು ನೋಡುವಾಗ ಯುವಕನ ಮೈಮೇಲಿದ್ದ ಚಿನ್ನದ ಸರ, ಚಿನ್ನದ ಕೈಬಳೆ ಮತ್ತು 10 ಸಾವಿರ ನಗದು ಕಳವಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಇಂದಿರಾನಗರ ಠಾಣೆಗೆ ಯುವಕ ದೂರು ನೀಡಿದ್ದು, ಆರೋಪಿ ಯುವತಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:15 pm, Wed, 12 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ