AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಘವೇಂದ್ರ ಬ್ಯಾಂಕ್ ವಂಚನೆ: ಸರ್ಕಾರವೇ ಶಾಮೀಲಾಗಿರುವ ಅನುಮಾನ ಮೂಡ್ತಿದೆ – ಪರಿಷತ್​​ನಲ್ಲಿ ಯು ಬಿ ವೆಂಕಟೇಶ್

ಗುರು ರಾಘವೇಂದ್ರ ಬ್ಯಾಂಕ್ ಆಡಿಟ್ ವಿಳಂಬ ಮಾಡಲಾಗ್ತಿದೆ. ಸರ್ಕಾರ ಇನ್ನೂ ಯಾಕೆ ಬ್ಯಾಂಕ್ ವಂಚನೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಸರ್ಕಾರವೇ ಇವರೊಂದಿಗೆ ಶಾಮೀಲಾಗಿದ್ದಾರೆ ಎನ್ನೋ ಅನುಮಾನ ಮೂಡ್ತಿದೆ. -ಯು ಬಿ ವೆಂಕಟೇಶ್

ರಾಘವೇಂದ್ರ ಬ್ಯಾಂಕ್ ವಂಚನೆ: ಸರ್ಕಾರವೇ ಶಾಮೀಲಾಗಿರುವ ಅನುಮಾನ ಮೂಡ್ತಿದೆ - ಪರಿಷತ್​​ನಲ್ಲಿ ಯು ಬಿ ವೆಂಕಟೇಶ್
ಗುರು ರಾಘವೇಂದ್ರ ಬ್ಯಾಂಕ್
TV9 Web
| Edited By: |

Updated on:Sep 14, 2021 | 1:46 PM

Share

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ವಂಚನೆ ಪ್ರಕರಣ ವಿಚಾರವನ್ನು ಯು ಬಿ ವೆಂಕಟೇಶ್ ವಿಧಾನ ಪರಿಷತ್ನಲ್ಲಿ ಪ್ರಸ್ತಾಪ ಮಾಡಿದ್ದಾರೆ. ಈ ವೇಳೆ ಅವರು ಈ ಪ್ರಕರಣದಲ್ಲಿ ಸರ್ಕಾರವೇ ಶಾಮೀಲಾಗಿದೆ ಅನ್ನೋ ಅನುಮಾನ ಮೂಡ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಗುರು ರಾಘವೇಂದ್ರ ಬ್ಯಾಂಕ್ ಆಡಿಟ್ ವಿಳಂಬ ಮಾಡಲಾಗ್ತಿದೆ. ಸರ್ಕಾರ ಇನ್ನೂ ಯಾಕೆ ಬ್ಯಾಂಕ್ ವಂಚನೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಸರ್ಕಾರವೇ ಇವರೊಂದಿಗೆ ಶಾಮೀಲಾಗಿದ್ದಾರೆ ಎನ್ನೋ ಅನುಮಾನ ಮೂಡ್ತಿದೆ. ಆರ್ಬಿಐ ಯಾಕೆ ಇದುವರೆಗೆ ಎಕ್ಸಪರ್ಟ್ ಕಮಿಟಿ ಮಾಡಿಲ್ಲ. ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ವಂಚನೆ ಪ್ರಕರಣ ಸಿಬಿಐ ಗೆ ನೀಡಬೇಕು. 1500 ಕೋಟಿ ಹಣ ವಂಚನೆಯಾಗಿದೆ. 46 ಸಾವಿರ ಜನ ಠೇವಣಿದಾರರಿಗೆ ಇದುವರಗೆ ಹಣ ಸಿಕ್ಕಿಲ್ಲ. ಬಡವರಿಗೆ ಅನ್ಯಾಯ ಆಗಿದೆ ಎನ್ನೋದು ಗೊತ್ತಿದ್ದರೂ ಸರ್ಕಾರ ಮೌನವಾಗಿ ಕುಳಿತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಆರ್‌ಬಿಐ ಇದನ್ನು ಹ್ಯಾಂಡಲ್ ಮಾಡುತ್ತಿದೆ ಇನ್ನು ಈ ಬಗ್ಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ ನೀಡಿದ್ದು ಸಹಕಾರ ಇಲಾಖೆಯಿಂದ ಆಡಳಿತಾಧಿಕಾರಿ ಹಾಕಿದ್ದೆವು. ಹೈಕೋರ್ಟ್ ಅದನ್ನು ತೆಗೆದುಹಾಕಿರುವ ಹಿನ್ನೆಲೆ ಈಗ ಆರ್‌ಬಿಐ ಇದನ್ನು ಹ್ಯಾಂಡಲ್ ಮಾಡುತ್ತಿದೆ. 2013-14ರಿಂದ 2020-21ರವರೆಗಿನ ಆಡಿಟ್ ಮಾಡಲು ಹೇಳಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಜೊತೆಯೂ ಮಾತನಾಡಿದ್ದೇನೆ. ಖಾಸಗಿ ಸಿಎಗಳೂ ವಂಚನೆಯಲ್ಲಿ ಭಾಗಿಯಾಗಿದ್ದ ಹಿನ್ನೆಲೆ ಇಂತಹವರನ್ನು ಬ್ಲ್ಯಾಕ್‌ಲಿಸ್ಟ್‌ಗೆ ಸೇರಿಸಿದ್ದೇವೆ.

ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ಗಳು RBIನಡಿ ಇರುತ್ತೆ. 17 ಸಾವಿರ ಠೇವಣಿದಾರರಿಗೆ ಹಣ ವಾಪಸ್ ನೀಡಲಾಗುತ್ತಿದೆ. 1,923 ಕೋಟಿ ರೂ. ನಷ್ಟದ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸಹಕಾರ ಇಲಾಖೆ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಪ್ರತಿಯೊಂದನ್ನು ಹೈ ಕೋರ್ಟ್, ರಿಸರ್ವ್ ಬ್ಯಾಂಕ್ ಗಮನಿಸುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಪರಿಷತ್‌ನಲ್ಲಿ ಯು ಬಿ ವೆಂಕಟೇಶ್ರ ಅನುಮಾನಕ್ಕೆ ಸ್ಪಷ್ಟನೆ ನೀಡಿದ್ರು.

ಇದನ್ನೂ ಓದಿ: ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಗ್ರಾಹಕರಿಗೆ ಶುಭಸುದ್ದಿ; ನವೆಂಬರ್​ ಒಳಗೆ ಠೇವಣಿ ಮೇಲಿನ ವಿಮಾ ಹಣ ಗ್ರಾಹಕರಿಗೆ ಲಭ್ಯ

Published On - 1:40 pm, Tue, 14 September 21

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ