AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ರೈಲು ನಿಲ್ದಾಣದಲ್ಲಿದೆ ರೈಲ್ವೆ ಕೋಚ್​​​ ಎಸಿ ರೆಸ್ಟೋರೆಂಟ್! ಏನಿದರ ವಿಶೇಷ? ಇಲ್ಲಿದೆ ಮಾಹಿತಿ

Rail coach restaurant: ಕೊನೆಗೂ ಬೆಂಗಳೂರಿನ ‘ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್’ ರೈಲು ನಿಲ್ದಾಣದ ಪ್ರಯಾಣಿಕರ ಬೇಡಿಕೆ ಈಡೇರಿದೆ. ಪ್ರಯಾಣಿಕರ ಹಸಿವು ನೀಗಿಸಲು ಅದ್ಭುತವಾದ ರೆಸ್ಟೋರೆಂಟ್ ಒಂದನ್ನು ರೈಲ್ವೆ ಇಲಾಖೆ ಆರಂಭಿಸಿದೆ. ಆದರೆ, ಈ ರೆಸ್ಟೋರೆಂಟ್ ನಿರ್ಮಾಣವಾಗಿರುವುದು ಹಳೆಯ ರೈಲು ಬೋಗಿಯಲ್ಲಿ! ರೈಲು ಬೋಗಿ ರೆಸ್ಟೋರೆಂಟ್​​ನ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರಿನ ಈ ರೈಲು ನಿಲ್ದಾಣದಲ್ಲಿದೆ ರೈಲ್ವೆ ಕೋಚ್​​​ ಎಸಿ ರೆಸ್ಟೋರೆಂಟ್! ಏನಿದರ ವಿಶೇಷ? ಇಲ್ಲಿದೆ ಮಾಹಿತಿ
ರೈಲ್ವೆ ಕೋಚ್​​​ ಎಸಿ ರೆಸ್ಟೋರೆಂಟ್ ಒಳಭಾಗದ ನೋಟ
ಕಿರಣ್​ ಸೂರ್ಯ
| Edited By: |

Updated on: Apr 17, 2024 | 8:11 AM

Share

ಬೆಂಗಳೂರು, ಏಪ್ರಿಲ್ 17: ಬೆಂಗಳೂರಿನ ‘ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್’ (Sir M Visvesvaraya Terminal) ರೈಲು ನಿಲ್ದಾಣಕ್ಕೆ ಪ್ರತಿದಿನ ಬೇರೆಬೇರೆ ರಾಜ್ಯಗಳಿಂದ ಸಾವಿರಾರು ಪ್ರಯಾಣಿಕರು ಬರುತ್ತಾರೆ. ಆದರೆ, ಅವರಿಗೆ ಕುಳಿತುಕೊಂಡು ಊಟ ಮಾಡಲು ಒಂದೊಳ್ಳೆಯ ರೆಸ್ಟೋರೆಂಟ್ ಇರಲಿಲ್ಲ. ಅದಕ್ಕೆ ವಿಭಿನ್ನವಾಗಿ ಯೋಚನೆ ಮಾಡಿದ ಮಾಡಿದ ರೈಲ್ವೆ ಇಲಾಖೆ (Indian Railways), ರೈಲಿನಲ್ಲೇ ಅದ್ಭುತವಾದ ಎಸಿ ರೆಸ್ಟೋರೆಂಟ್ (Rail coach restaurant) ಓಪನ್ ಮಾಡಿದೆ! ಆ ಮೂಲಕ, ಕಡೆಗೂ ಪ್ರಯಾಣಿಕರ ಹಲವು ದಿನಗಳ ಕನಸು ನನಸಾಗಿದೆ.

ನೈರುತ್ಯ ರೈಲ್ವೆ ವಲಯವು ‘ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್’ ರೈಲು ನಿಲ್ದಾಣಗಳ ಪ್ರವೇಶ ದ್ವಾರದಲ್ಲಿ ರೈಲ್ವೆ ಕೋಚ್​ನಲ್ಲಿ ರೆಸ್ಟೋರೆಂಟ್ ನಿರ್ಮಾಣ ಮಾಡಿದೆ. ಹಳೆಯ ರೈಲ್ವೆ ಕೋಚ್​​ಗಳನ್ನು ನವೀಕರಣ ಮಾಡಿ ಅವುಗಳಿಗೆ ರೆಸ್ಟೋರೆಂಟ್ ರೂಪ ಕೊಡಲಾಗಿದೆ. ಇದು ಹಲವು ದಿನಗಳ ಕನಸಾಗಿದ್ದು, ಕಡೆಗೂ ಇದೀಗ ಆರಂಭಗೊಂಡಿದೆ. ಈ ರೆಸ್ಟೋರೆಂಟ್ ಹಲವು ವಿಶೇಷತೆಗಳನ್ನು ಹೊಂದಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಸಂಪೂರ್ಣ ಹವಾ ನಿಯಂತ್ರಿತ: 40 ಜನ ಕುಳಿತುಕೊಳ್ಳಲು ವ್ಯವಸ್ಥೆ

ರೈಲ್ವೆ ಕೋಚ್ ರೆಸ್ಟೋರೆಂಟ್​​ನಲ್ಲಿ 40 ಜನರು ಕುಳಿತುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ. ಕೋಚ್ ಒಳಗೆ ಮತ್ತು ಹೊರಗೂ ಕುಳಿತುಕೊಳ್ಳಲು ಅವಕಾಶ ಇದೆ. ಹಳೆಯ ಬಳಕೆಗೆ ಬಾರದ ಸ್ಕ್ರ್ಯಾಪ್ ರೈಲ್ವೆ ಕೋಚ್​​ಗಳನ್ನು ಬಳಸಿ, ಅವುಗಳ ಒಳಾಂಗಣವನ್ನು ವಿನ್ಯಾಸಗೊಳಿಸಿ ರೆಸ್ಟೋರೆಂಟ್ ನಿರ್ಮಿಸಲಾಗಿದೆ. ಇದು 24×7 ರೆಸ್ಟೋರೆಂಟ್​ ಆಗಿದ್ದು ಸಂಪೂರ್ಣ ಹವಾ ನಿಯಂತ್ರಿತವಾಗಿರುತ್ತವೆ. ಪ್ರತಿದಿನ ಈ ರೈಲ್ವೆ ನಿಲ್ದಾಣಕ್ಕೆ ಕರ್ನಾಟಕ ಮತ್ತು ಬೇರೆಬೇರೆ ರಾಜ್ಯಕ್ಕೆ ಸಂಚಾರ ಮಾಡಲು 58 ರೈಲುಗಳು ಬರುತ್ತವೆ. 30 ರಿಂದ 35 ಸಾವಿರ ಪ್ರಯಾಣಿಕರು ಈ ರೈಲ್ವೆ ಸ್ಟೇಷನ್ ಮೂಲಕ ಪ್ರಯಾಣ ಮಾಡುತ್ತಾರೆ. ಈ ರೈಲ್ವೆ ಕೋಚ್ ರೆಸ್ಟೋರೆಂಟ್​​​ನಲ್ಲಿ ಟಿವಿ ಮ್ಯೂಸಿಕ್ ಸಿಸ್ಟಮ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.

ಯಾವೆಲ್ಲ ಆಹಾರ ಲಭ್ಯ?

ಸೌತ್ ಇಂಡಿಯನ್, ನಾರ್ಥ್ ಇಂಡಿಯನ್ ಸೇರಿದಂತೆ ಚೈನೀಸ್ ಫುಟ್​ಗಳನ್ನು ಕೂಡ ಈ ರೆಸ್ಟೋರೆಂಟ್​​ನಲ್ಲಿ ಸವಿಯಬಹುದು. ರೈಲ್ವೆ ಇಲಾಖೆ ಈ ರೆಸ್ಟೋರೆಂಟ್ ಅನ್ನು ಖಾಸಗಿ ಹೋಟೆಲ್​​ಗೆ ಟೆಂಡರ್ ನೀಡಿದ್ದು ಇದರಿಂದ ಪ್ರತಿವರ್ಷ ‌37 ಲಕ್ಷ ರೂಪಾಯಿ ಆದಾಯ ಬರಲಿದೆಯಂತೆ.

ಪ್ರಯಾಣಿಕರು ಏನಂತಾರೆ?

ಈ ಬಿಸಿಲಿನಲ್ಲಿ ಹೊರಗೆ ಕುಳಿತುಕೊಂಡು ಊಟ ಮಾಡಲು ತುಂಬಾ ಕಷ್ಟ ಆಗುತ್ತದೆ. ಈ ಧೂಳಿ‌ನಲ್ಲಿ ಊಟ ಮಾಡಲು ಆಗುವುದಿಲ್ಲ. ಯಾವುದೇ ದೊಡ್ಡ ರೆಸ್ಟೋರೆಂಟ್​​ಗೂ ಕಡಿಮೆ ಇಲ್ಲದಂತೆ ರೆಡಿ ಮಾಡಿದ್ದಾರೆ. ನಾನು ನಾರ್ಥ್ ಮೀಲ್ಸ್ ಆರ್ಡರ್ ಮಾಡಿದೆ. ರುಚಿ ತುಂಬಾ ಚೆನ್ನಾಗಿದೆ ಎಂದು ಮಾತಾನಾಡಿದ ಗ್ರಾಹಕ ಪರಮೇಶ್ ಎಂಬವರು ‘ಟಿವಿ9’ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ! ಕಾರಣ ಇಲ್ಲಿದೆ

ಒಟ್ಟಿನಲ್ಲಿ ರೈಲ್ವೆ ಇಲಾಖೆಯ ಈ ಯೋಜನೆ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಯಶವಂತಪುರ, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಸೇರಿದಂತೆ ರಾಜಧಾನಿಯ ಬೇರೆ ಬೇರೆ ರೈಲ್ವೆ ನಿಲ್ದಾಣದಲ್ಲೂ ಇದೇ ರೀತಿ ರೆಸ್ಟೋರೆಂಟ್ ತೆರೆಯುವ ಯೋಜನೆ ಹಾಕಿಕೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ