AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Girl Child Day: ಮಹಿಳಾ ಸಿಬ್ಬಂದಿ ಭೇಟಿ ಮಾಡಿ ಸಿಹಿ ಹಂಚಿ, ಸೆಲ್ಫೀ ಕ್ಲಿಕ್ಕಿಸಿಕೊಂಡ ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್

ಇದೇ ವೇಳೆ, ರೈಲ್ವೆ ಪೊಲೀಸ್ ಸಿಬ್ಬಂದಿ ಜೊತೆಗೆ ದಸರಾ ಆಚರಣೆ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹಬ್ಬದ ಸಂಭ್ರಮ ಕಂಡುಬಂದಿದೆ. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಿನೂತನ ಪ್ರಯತ್ನ ಮಾಡಲಾಗಿದೆ.

International Girl Child Day: ಮಹಿಳಾ ಸಿಬ್ಬಂದಿ ಭೇಟಿ ಮಾಡಿ ಸಿಹಿ ಹಂಚಿ, ಸೆಲ್ಫೀ ಕ್ಲಿಕ್ಕಿಸಿಕೊಂಡ ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್
ಭಾಸ್ಕರ್ ರಾವ್
TV9 Web
| Edited By: |

Updated on: Oct 11, 2021 | 6:47 PM

Share

ಬೆಂಗಳೂರು: ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ ಹಿನ್ನಲೆಯಲ್ಲಿ ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್ ಮಹಿಳಾ ಸಿಬ್ಬಂದಿ ಭೇಟಿ ಮಾಡಿದ್ದಾರೆ. ಆರ್​ಪಿಎಫ್ ಮಹಿಳಾ ಸಿಬ್ಬಂದಿಗಳನ್ನು ಎಡಿಜಿಪಿ ಭೇಟಿಯಾಗಿದ್ದಾರೆ. ಬಳಿಕ ಸಿಹಿ ಹಂಚಿ ಅವರೊಂದಿಗೆ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಇದೇ ವೇಳೆ, ರೈಲ್ವೆ ಪೊಲೀಸ್ ಸಿಬ್ಬಂದಿ ಜೊತೆಗೆ ದಸರಾ ಆಚರಣೆ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹಬ್ಬದ ಸಂಭ್ರಮ ಕಂಡುಬಂದಿದೆ. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಿನೂತನ ಪ್ರಯತ್ನ ಮಾಡಲಾಗಿದೆ.

ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಸುಂದರ ಬೊಂಬೆಗಳ ಅನಾವರಣ ಮಾಡಲಾಗಿದೆ. ಆನೆ ಹಾಗೂ ಅದರ ರಥದಲ್ಲಿ ದಸರಾ ಬೊಂಬೆಗಳ ಕಿರು ಸನ್ನಿವೇಶ ಅನಾವರಣ ಮಾಡಲಾಗಿದೆ. ಪ್ರಯಾಣಿಕರ ಕಣ್ಮನ ಸೆಳೆಯುವ ಮಾದರಿ ಸೃಷ್ಠಿಯಾಗಿದೆ. ಸಾರ್ವಜನಿಕರಿಗೆ ಬೊಂಬೆಗಳ ಮುಕ್ತ ವೀಕ್ಷೆಣೆಯನ್ನು ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್ ಉದ್ಘಾಟನೆ ಮಾಡಲಿದ್ದಾರೆ. ರೈಲ್ವೆ ಡಿಸಿಪಿ ಸಿರಿಗೌರಿ ಸೇರಿದಂತೆ ಹಲವು ರೈಲ್ವೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ನಾಡ ಹಬ್ಬವನ್ನು ಸಂಭ್ರಮದಿಂದ ರೈಲ್ವೆ ಪೊಲೀಸ್ ಸಿಬ್ಬಂದಿ ಆಚರಿಸುತಿದ್ದೇವೆ. ಕಲಾವಿದ ಅರುಣ್ ಸಾಗರ್ ಯೋಚನೆಯಲ್ಲಿ ಮೂಡಿ ಬಂದ ದಸರಾ ಗೊಂಬೆಗಳು ಇದಾಗಿದೆ. ರೈಲ್ವೆ ಪೊಲೀಸ್ ಇಲಾಖೆಯಿಂದ ಇದೇ ಮೊದಲ ಬಾರಿಗೆ ವಿನೂತನ ಪ್ರಯತ್ನ ಮಾಡಲಾಗಿದೆ. ರಾಷ್ಟ್ರದ ವಿವಿಧ ಕಡೆಗಳಿಂದ ಜನ ರೈಲಿನಲ್ಲಿ ಪ್ರಯಾಣಿಸುತ್ತಾರೆ. ಅದೇ ರೀತಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಸಾರ್ವಜನಿಕರು ಸಂಚರಿಸುತ್ತಾರೆ‌‌. ಈ ಮೂಲಕ ಎಲ್ಲಾ ಜನರಿಗೂ ನಮ್ಮ ನಾಡ ಹಬ್ಬ ಕಣ್ತುಂಬಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: International Girl Child Day 2021: ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಮಹತ್ವ, ಇತಿಹಾಸದ ಜತೆಗೆ ಈ ವರ್ಷದ ಥೀಮ್ ಬಗ್ಗೆ ತಿಳಿಯಲೇಬೇಕು

ಇದನ್ನೂ ಓದಿ: ಫೋನ್ ಕದ್ದಾಲಿಕೆ ಪ್ರಕರಣ: ಐಪಿಎಸ್ ಭಾಸ್ಕರ್ ರಾವ್ ಪ್ರೊಟೆಸ್ಟ್ ಪಿಟಿಷನ್, ಕೋರ್ಟ್​ಗೆ ಬಿ ರಿಪೋರ್ಟ್ ಸಲ್ಲಿಸದೆ ವಾಪಸಾದ ಸಿಬಿಐ

ಇದನ್ನೂ ಓದಿ: Bhaskar Rao ರೈಲ್ವೆ ADGP ಆಗಿ ಭಾಸ್ಕರ್ ರಾವ್ ವರ್ಗಾವಣೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್