AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ ಬೆನ್ನಲ್ಲೇ ಅಲರ್ಟ್ ಆದ ರೈಲ್ವೆ ಪೊಲೀಸ್; ಪ್ರತಿ ಬೋಗಿ, ಬ್ಯಾಗ್, ಲಗೇಜ್ ತಪಾಸಣೆ

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಹಣ, ಮದ್ಯ ಸಾಗಿರುವ ಸಾಧ್ಯತೆ ಹೆಚ್ಚಿದೆ, ಹೀಗಾಗಿ ರೈಲ್ವೆ ಪೊಲೀಸರು ಅಲರ್ಟ್ ಆಗಿದ್ದಾರೆ. ಆರ್​ಪಿಎಫ್ ಮತ್ತು ರೈಲ್ವೆ ಪೊಲೀಸರು ಚುನಾವಣಾ ಚೆಕ್ ಪೋಸ್ಟ್ ನಿರ್ಮಿಸಿದ್ದು ರಾಜ್ಯಾದ್ಯಂತ ಹೊರ ರಾಜ್ಯದಿಂದ ಬರುವ ರೈಲ್ವೆ ಬೋಗಿಗಳ ತಪಾಸಣೆಗೆ ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ.

ಲೋಕಸಭಾ ಚುನಾವಣೆ ಬೆನ್ನಲ್ಲೇ ಅಲರ್ಟ್ ಆದ ರೈಲ್ವೆ ಪೊಲೀಸ್; ಪ್ರತಿ ಬೋಗಿ, ಬ್ಯಾಗ್, ಲಗೇಜ್ ತಪಾಸಣೆ
ಲೋಕಸಭಾ ಚುನಾವಣೆ ಬೆನ್ನಲ್ಲೇ ಅಲರ್ಟ್ ಆದ ರೈಲ್ವೆ ಪೊಲೀಸ್
ರಾಚಪ್ಪಾಜಿ ನಾಯ್ಕ್
| Edited By: |

Updated on: Mar 24, 2024 | 10:54 AM

Share

ಬೆಂಗಳೂರು, ಮಾರ್ಚ್​.24: ಲೋಕಸಭಾ ಚುನಾವಣೆಗೆ (Lok Sabha Election) ದಿನಾಂಕ ಫಿಕ್ಸ್ ಆಗಿದೆ. ಬೆಂಗಳೂರು ನಗರದಲ್ಲಿ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣೆ ಸಂಬಂಧ ದುಡ್ಡು ಸಾಗಾಣೆ, ಅನಧಿಕೃತ ಚಟುವಟಿಕೆಗಳ ಮೇಲೆ ನಿಗಾ ಇಡಲು ಚುನಾವಣಾ ಆಯೋಗ (Election Commission) ಹದ್ದಿನ ಕಣ್ಣಿಡಲು ಚೆಕ್ ಪೋಸ್ಟ್ ನಿರ್ಮಾಣ ಮಾಡಿದೆ. ಹಾಗೂ ಮತ್ತೊಂದೆಡೆ ರೈಲ್ವೇ ಪೊಲೀಸರು ಕೂಡ ಅಲರ್ಟ್ ಆಗಿದ್ದಾರೆ. ರೈಲ್ವೆ ಇಲಾಖೆ ಪೊಲೀಸರಿಗೆ(Railway Police) ಮಾರ್ಗಸೂಚಿ ನೀಡಲಾಗಿದೆ. ಆರ್​ಪಿಎಫ್ ಮತ್ತು ರೈಲ್ವೆ ಪೊಲೀಸರು ಚುನಾವಣಾ ಚೆಕ್ ಪೋಸ್ಟ್ ನಿರ್ಮಿಸಿದ್ದು ರಾಜ್ಯಾದ್ಯಂತ ಹೊರ ರಾಜ್ಯದಿಂದ ಬರುವ ರೈಲ್ವೆ ಬೋಗಿಗಳ ತಪಾಸಣೆಗೆ ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಎಲ್ಲಾ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ ರೈಲ್ವೆ ನಿಲ್ದಾಣಗಳಲ್ಲಿಯೂ ಪ್ರತಿಯೊಬ್ಬರ ಲಗೇಜ್ ಪರಿಶೀಲನೆ ಮಾಡಲಾಗುತ್ತಿದೆ. ರೈಲ್ವೆ ಇಲಾಖೆ ಪೊಲೀಸರು ಮದ್ಯ ಹಾಗು ಹಣ ಸಾಗಾಣೆ ಬಗ್ಗೆ ಕಟ್ಟೆಚ್ಚರ ವಹಿಸಿದ್ದಾರೆ. ಇಪ್ಪತ್ತು ತಂಡಗಳನ್ನಾಗಿ ಮಾಡಿಕೊಂಡಿದ್ದು, ಒಂದೊಂದು ತಂಡದಲ್ಲಿ ಐದು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೇಂದ್ರ ಚುನಾವಣಾ ಆಯೋಗ‌ದ ಸೂಚನೆ ಹಿನ್ನಲೆ ಅಲರ್ಟ್ ಆಗಿದ್ದು ಬೋಗಿಗಳಲ್ಲಿ ಬರುವ ಲಗೇಜ್, ಪ್ಯಾಕಿಂಗ್ ಗಳು ಹಾಗೂ ಅನುಮಾನಿತರ ಮೇಲೆ ನಿಗಾ ಇಡಲಾಗುತ್ತಿದೆ. ಆರ್​ಪಿಎಫ್ ತಂಡದ ಜೊತೆ ಶ್ವಾನದಳವೂ ಕಾರ್ಯ ನಿರ್ವಹಿಸುತ್ತಿದೆ.

ಇದನ್ನೂ ಓದಿ: ತನ್ನನ್ನು ಗೇಲಿ ಮಾಡಿದ್ದಕ್ಕೆ ಮಹಿಳೆಗೆ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದ ವ್ಯಕ್ತಿ

ಲೋಕಸಭಾ ಚುನಾವಣೆ ಹಿನ್ನಲೆ ನೀತಿ‌ ಸಂಹಿತೆ ಜಾರಿಯಾಗಿದ್ದು, ಬೆಂಗಳೂರು ನಗರ ಪ್ರದೇಶದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ದುಡ್ಡು ಸಾಗಾಣೆ, ಅನಧಿಕೃತ ಮಧ್ಯ ಸೇರಿದಂತೆ ದಾಖಲೆ ಇಲ್ಲದೇ ತಗೆದುಕೊಂಡು ಹೋಗುವ ಯಾವುದೇ ವಸ್ತುಗಳ ಮೇಲೆ ಚೆಕ್ ಪೋಸ್ಟ್‌ಗಳ ಮೂಲಕ ಚುನಾವಣಾ ಆಯೋಗದಿಂದ ಬರುವ ಹೋಗುವ ವಾಹನಗಳ ಮೇಲೆ ಹದ್ದಿನ ಕಣ್ಣಿದ್ದು ಒಟ್ಟು 104 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗ್ಗಿದ್ದು ಪ್ರತೊಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಚೆಕ್ಪೋಸ್ಟ್ ತೆರೆದಿದ್ದು, ಅಧಿಕಾರಿಗಳು ಮೂರು ಪಾಳೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

ಇನ್ನೂ ಒಟ್ಟು 104 ಚೆಕ್ ಪೋಸ್ಟ್ ಪೈಕಿ ಬೆಂಗಳೂರು ಕೇಂದ್ರದಲ್ಲಿ 28, ದಕ್ಷಿಣ ಕ್ಷೇತ್ರ ದಲ್ಲಿ 23, ಬೆಂಗಳೂರು ಉತ್ತರದಲ್ಲಿ 21 ಹಾಗೂ ಬೆಂಗಳೂರು ನಗರ 32 ಚೆಕ್ ಪೋಸ್ಟ್ ನಿರ್ಮಾಣವಾಗಿದ್ದು, 629 ಅಧಿಕಾರಿಗಳ ನೇಮಕ, 297 ಫ್ಲೈಯಿಂಗ್ ಸ್ಕಾಡ್ ನೇಮಕ ಮಾಡಲಾಗಿದ್ದು, ಪ್ರತಿಯೊಂದು ಚೆಕ್ ಪೋಸ್ಟ್ ಗಳಲ್ಲಿ ಸಿಸಿಟಿವಿಗಳನ್ನ ಅಳವಡಿಸಲಾಗಿದೆ. ಇನ್ನೂ ಚೆಕ್ ಪೋಸ್ಟ್‌ಗಳಲ್ಲಿ ಅಧಿಕಾರಿಗಳು ಹೇಗೆ ಕಾರ್ಯ ನಿರ್ವಹಿಸುತ್ತಿದ್ದಾರೆ ಅನ್ನೋದರ ಕುರಿತು ಟಿವಿ ನೈನ್ ರಿಯಾಲಿಟಿ ಚೆಕ್ ನಡೆಸಿದ್ದು, ಕೆಲವು ಚೆಕ್ ಪೋಸ್ಟ್ ಗಳಲ್ಲಿ ಬರುವ ಹೋಗುವ ವಾಹನಗಳ ಮೇಲೆ‌ ಅಧಿಕಾರಿಗಳು ನಿಗಾ ವಹಿಸಿದ್ರೆ, ಇನ್ನೂ ಕೆಲವೆಡೆ ಅಧಿಕಾರಿಗಳು ಕಟ್ಟಿ ನಿಟ್ಟಿನ ಕ್ರಮಕ್ಕೆ ಮುಂದಾಗದೇ ಇರುವುದು ಕಂಡು ಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು