AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ ಬೆನ್ನಲ್ಲೇ ಅಲರ್ಟ್ ಆದ ರೈಲ್ವೆ ಪೊಲೀಸ್; ಪ್ರತಿ ಬೋಗಿ, ಬ್ಯಾಗ್, ಲಗೇಜ್ ತಪಾಸಣೆ

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಹಣ, ಮದ್ಯ ಸಾಗಿರುವ ಸಾಧ್ಯತೆ ಹೆಚ್ಚಿದೆ, ಹೀಗಾಗಿ ರೈಲ್ವೆ ಪೊಲೀಸರು ಅಲರ್ಟ್ ಆಗಿದ್ದಾರೆ. ಆರ್​ಪಿಎಫ್ ಮತ್ತು ರೈಲ್ವೆ ಪೊಲೀಸರು ಚುನಾವಣಾ ಚೆಕ್ ಪೋಸ್ಟ್ ನಿರ್ಮಿಸಿದ್ದು ರಾಜ್ಯಾದ್ಯಂತ ಹೊರ ರಾಜ್ಯದಿಂದ ಬರುವ ರೈಲ್ವೆ ಬೋಗಿಗಳ ತಪಾಸಣೆಗೆ ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ.

ಲೋಕಸಭಾ ಚುನಾವಣೆ ಬೆನ್ನಲ್ಲೇ ಅಲರ್ಟ್ ಆದ ರೈಲ್ವೆ ಪೊಲೀಸ್; ಪ್ರತಿ ಬೋಗಿ, ಬ್ಯಾಗ್, ಲಗೇಜ್ ತಪಾಸಣೆ
ಲೋಕಸಭಾ ಚುನಾವಣೆ ಬೆನ್ನಲ್ಲೇ ಅಲರ್ಟ್ ಆದ ರೈಲ್ವೆ ಪೊಲೀಸ್
ರಾಚಪ್ಪಾಜಿ ನಾಯ್ಕ್
| Edited By: |

Updated on: Mar 24, 2024 | 10:54 AM

Share

ಬೆಂಗಳೂರು, ಮಾರ್ಚ್​.24: ಲೋಕಸಭಾ ಚುನಾವಣೆಗೆ (Lok Sabha Election) ದಿನಾಂಕ ಫಿಕ್ಸ್ ಆಗಿದೆ. ಬೆಂಗಳೂರು ನಗರದಲ್ಲಿ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣೆ ಸಂಬಂಧ ದುಡ್ಡು ಸಾಗಾಣೆ, ಅನಧಿಕೃತ ಚಟುವಟಿಕೆಗಳ ಮೇಲೆ ನಿಗಾ ಇಡಲು ಚುನಾವಣಾ ಆಯೋಗ (Election Commission) ಹದ್ದಿನ ಕಣ್ಣಿಡಲು ಚೆಕ್ ಪೋಸ್ಟ್ ನಿರ್ಮಾಣ ಮಾಡಿದೆ. ಹಾಗೂ ಮತ್ತೊಂದೆಡೆ ರೈಲ್ವೇ ಪೊಲೀಸರು ಕೂಡ ಅಲರ್ಟ್ ಆಗಿದ್ದಾರೆ. ರೈಲ್ವೆ ಇಲಾಖೆ ಪೊಲೀಸರಿಗೆ(Railway Police) ಮಾರ್ಗಸೂಚಿ ನೀಡಲಾಗಿದೆ. ಆರ್​ಪಿಎಫ್ ಮತ್ತು ರೈಲ್ವೆ ಪೊಲೀಸರು ಚುನಾವಣಾ ಚೆಕ್ ಪೋಸ್ಟ್ ನಿರ್ಮಿಸಿದ್ದು ರಾಜ್ಯಾದ್ಯಂತ ಹೊರ ರಾಜ್ಯದಿಂದ ಬರುವ ರೈಲ್ವೆ ಬೋಗಿಗಳ ತಪಾಸಣೆಗೆ ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಎಲ್ಲಾ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ ರೈಲ್ವೆ ನಿಲ್ದಾಣಗಳಲ್ಲಿಯೂ ಪ್ರತಿಯೊಬ್ಬರ ಲಗೇಜ್ ಪರಿಶೀಲನೆ ಮಾಡಲಾಗುತ್ತಿದೆ. ರೈಲ್ವೆ ಇಲಾಖೆ ಪೊಲೀಸರು ಮದ್ಯ ಹಾಗು ಹಣ ಸಾಗಾಣೆ ಬಗ್ಗೆ ಕಟ್ಟೆಚ್ಚರ ವಹಿಸಿದ್ದಾರೆ. ಇಪ್ಪತ್ತು ತಂಡಗಳನ್ನಾಗಿ ಮಾಡಿಕೊಂಡಿದ್ದು, ಒಂದೊಂದು ತಂಡದಲ್ಲಿ ಐದು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೇಂದ್ರ ಚುನಾವಣಾ ಆಯೋಗ‌ದ ಸೂಚನೆ ಹಿನ್ನಲೆ ಅಲರ್ಟ್ ಆಗಿದ್ದು ಬೋಗಿಗಳಲ್ಲಿ ಬರುವ ಲಗೇಜ್, ಪ್ಯಾಕಿಂಗ್ ಗಳು ಹಾಗೂ ಅನುಮಾನಿತರ ಮೇಲೆ ನಿಗಾ ಇಡಲಾಗುತ್ತಿದೆ. ಆರ್​ಪಿಎಫ್ ತಂಡದ ಜೊತೆ ಶ್ವಾನದಳವೂ ಕಾರ್ಯ ನಿರ್ವಹಿಸುತ್ತಿದೆ.

ಇದನ್ನೂ ಓದಿ: ತನ್ನನ್ನು ಗೇಲಿ ಮಾಡಿದ್ದಕ್ಕೆ ಮಹಿಳೆಗೆ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದ ವ್ಯಕ್ತಿ

ಲೋಕಸಭಾ ಚುನಾವಣೆ ಹಿನ್ನಲೆ ನೀತಿ‌ ಸಂಹಿತೆ ಜಾರಿಯಾಗಿದ್ದು, ಬೆಂಗಳೂರು ನಗರ ಪ್ರದೇಶದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ದುಡ್ಡು ಸಾಗಾಣೆ, ಅನಧಿಕೃತ ಮಧ್ಯ ಸೇರಿದಂತೆ ದಾಖಲೆ ಇಲ್ಲದೇ ತಗೆದುಕೊಂಡು ಹೋಗುವ ಯಾವುದೇ ವಸ್ತುಗಳ ಮೇಲೆ ಚೆಕ್ ಪೋಸ್ಟ್‌ಗಳ ಮೂಲಕ ಚುನಾವಣಾ ಆಯೋಗದಿಂದ ಬರುವ ಹೋಗುವ ವಾಹನಗಳ ಮೇಲೆ ಹದ್ದಿನ ಕಣ್ಣಿದ್ದು ಒಟ್ಟು 104 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗ್ಗಿದ್ದು ಪ್ರತೊಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಚೆಕ್ಪೋಸ್ಟ್ ತೆರೆದಿದ್ದು, ಅಧಿಕಾರಿಗಳು ಮೂರು ಪಾಳೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

ಇನ್ನೂ ಒಟ್ಟು 104 ಚೆಕ್ ಪೋಸ್ಟ್ ಪೈಕಿ ಬೆಂಗಳೂರು ಕೇಂದ್ರದಲ್ಲಿ 28, ದಕ್ಷಿಣ ಕ್ಷೇತ್ರ ದಲ್ಲಿ 23, ಬೆಂಗಳೂರು ಉತ್ತರದಲ್ಲಿ 21 ಹಾಗೂ ಬೆಂಗಳೂರು ನಗರ 32 ಚೆಕ್ ಪೋಸ್ಟ್ ನಿರ್ಮಾಣವಾಗಿದ್ದು, 629 ಅಧಿಕಾರಿಗಳ ನೇಮಕ, 297 ಫ್ಲೈಯಿಂಗ್ ಸ್ಕಾಡ್ ನೇಮಕ ಮಾಡಲಾಗಿದ್ದು, ಪ್ರತಿಯೊಂದು ಚೆಕ್ ಪೋಸ್ಟ್ ಗಳಲ್ಲಿ ಸಿಸಿಟಿವಿಗಳನ್ನ ಅಳವಡಿಸಲಾಗಿದೆ. ಇನ್ನೂ ಚೆಕ್ ಪೋಸ್ಟ್‌ಗಳಲ್ಲಿ ಅಧಿಕಾರಿಗಳು ಹೇಗೆ ಕಾರ್ಯ ನಿರ್ವಹಿಸುತ್ತಿದ್ದಾರೆ ಅನ್ನೋದರ ಕುರಿತು ಟಿವಿ ನೈನ್ ರಿಯಾಲಿಟಿ ಚೆಕ್ ನಡೆಸಿದ್ದು, ಕೆಲವು ಚೆಕ್ ಪೋಸ್ಟ್ ಗಳಲ್ಲಿ ಬರುವ ಹೋಗುವ ವಾಹನಗಳ ಮೇಲೆ‌ ಅಧಿಕಾರಿಗಳು ನಿಗಾ ವಹಿಸಿದ್ರೆ, ಇನ್ನೂ ಕೆಲವೆಡೆ ಅಧಿಕಾರಿಗಳು ಕಟ್ಟಿ ನಿಟ್ಟಿನ ಕ್ರಮಕ್ಕೆ ಮುಂದಾಗದೇ ಇರುವುದು ಕಂಡು ಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್