AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ರಸ್ತೆ ಮೇಲ್ಸೇತುವೆ ವಿಸ್ತರಣ ಕಾಮಗಾರಿ: ತಾತ್ಕಾಲಿಕ ಮಾರ್ಗ ಬದಲಾವಣೆ, ಪರ್ಯಾಯ ಮಾರ್ಗಗಳು ಹೀಗಿವೆ

ಜೆ.ಬಿ.ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೈಲ್ವೆ ರಸ್ತೆ ಮೇಲ್ಸೇತುವೆ ವಿಸ್ತರಣೆ ಮತ್ತು ಆರ್​ಸಿಸಿ ಬಾಕ್ಸ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಕೆಆರ್​ಪುರದ ಕಡೆಗೆ ಸಂಚರಿಸುವ ವಾಹನಗಳ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದೆ.

ರೈಲ್ವೆ ರಸ್ತೆ ಮೇಲ್ಸೇತುವೆ ವಿಸ್ತರಣ ಕಾಮಗಾರಿ: ತಾತ್ಕಾಲಿಕ ಮಾರ್ಗ ಬದಲಾವಣೆ, ಪರ್ಯಾಯ ಮಾರ್ಗಗಳು ಹೀಗಿವೆ
ಬೆಂಗಳೂರು ಸಂಚಾರ ಪೊಲೀಸ್
ಗಂಗಾಧರ​ ಬ. ಸಾಬೋಜಿ
|

Updated on:Jul 15, 2023 | 9:15 PM

Share

ಬೆಂಗಳೂರು: ಜೆ.ಬಿ.ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೈಲ್ವೆ ರಸ್ತೆ ಮೇಲ್ಸೇತುವೆ ವಿಸ್ತರಣೆ ಮತ್ತು ಆರ್​ಸಿಸಿ ಬಾಕ್ಸ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಕೆಆರ್​ಪುರದ ಕಡೆಗೆ ಸಂಚರಿಸುವ ವಾಹನಗಳ ತಾತ್ಕಾಲಿಕ ಮಾರ್ಗ ಬದಲಾವಣೆ (route change) ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರ ಪೊಲೀಸ್​ ಪ್ರಕಟಣೆಯಲ್ಲಿ ತಿಳಿಸಿದೆ.

ಹಳೇ ಮದ್ರಾಸ್ ರಸ್ತೆಯ ಬೆನ್ನಿಗಾನಹಳ್ಳಿ ಬಳಿ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣದಿಂದ ಹೊಸೂರು ರೈಲ್ವೇ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೇ ಮಾರ್ಗದ ಮೇಲ್ಸೇತುವೆ ವಿಸ್ತರಣೆ ಮತ್ತು ಆರ್.ಸಿ.ಸಿ ಬಾಕ್ಸ್ ಅಳವಡಿಕೆ ಕಾಮಗಾರಿ ನಡೆಯುತ್ತಿದೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​ನ್ಯೂಸ್: ನಿಮ್ಮ ಸೇವೆಗೆ ಬರಲಿದೆ ‘ಮೆಟ್ರೋಮಿತ್ರಾ’

ಹಾಗಾಗಿ ನಗರದಿಂದ ಕೆ.ಆರ್.ಪುರದ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಲು ಬೆನ್ನಿಗಾನಹಳ್ಳಿ ರೈಲ್ವೆ ಮೇಲ್ವೇತುವೆ ಬಳಿ ಇರುವ 02 ಮಾರ್ಗಗಳಲ್ಲಿ ಬಲ ಭಾಗದ ಮಾರ್ಗದಲ್ಲಿ ಸಂಚಾರವನ್ನು ನಿರ್ಬಂಧಿಸಿ, ಸದರಿ ಸಂಚಾರವು ಎಡ ಭಾಗದ ಮಾರ್ಗದ ಮುಖಾಂತರ ನಗರದ ಕಡೆಯಿಂದ ಕೆ.ಆರ್.ಪುರದ ಕಡೆಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸುಗಮ ಸಂಚಾರದ ಹಿತದೃಷ್ಠಿಯಿಂದ ಈ ಕೆಳಕಂಡ ಬದಲಿ ಮಾರ್ಗದ ವ್ಯವಸ್ಥೆಯನ್ನು ಸಹ ಬಳಸಬಹುದಾಗಿದೆ.

ಇದನ್ನೂ ಓದಿ: Bengaluru Police: ಪೊಲೀಸ್ ಠಾಣೆ, ಪೊಲೀಸರ ಬಗ್ಗೆ ಫೀಡ್​ಬ್ಯಾಕ್ ಕೊಡಲು ಕ್ಯುಆರ್​​ ಕೋಡ್; ಬೆಂಗಳೂರು ಪೊಲೀಸರಿಂದ ‘ಲೋಕಸ್ಪಂದನ’

ಹಳೇ ಮದ್ರಾಸ್ ರಸ್ತೆ ಮೂಲಕ ನಗರದ ಕಡೆಯಿಂದ ಕೆ.ಆರ್.ಪುರದ ಕಡೆಗೆ ಸಂಚರಿಸುವ ವಾಹನಗಳನ್ನು ಹಳೇ ಮದ್ರಾಸ್ ರಸ್ತೆ ಸದಾನಂದ ನಗರ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು, ಸದಾನಂದ ನಗರ ರಸ್ತೆ, ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣ ಜಂಕ್ಷನ್, ಕಸ್ತೂರಿ ನಗರದ ಮುಖಾಂತರ ಹೊರ ವರ್ತುಲ ರಸ್ತೆಯ ಸರ್ವೀಸ್ ರಸ್ತೆ ಮೂಲಕ ಕೆ.ಆರ್.ಪುರದ ಕಡೆಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:13 pm, Sat, 15 July 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!