AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದ ಹಲವೆಡೆ ಮುಂಜಾನೆ 4 ಗಂಟೆಯಿಂದ ಜಿಟಿಜಿಟಿ ಮಳೆ; ಇಂದೂ ನಾಳೆ ಸಿಲಿಕಾನ್ ಸಿಟಿ ಜನಕ್ಕೆ ಮಳೆ ಕಾಟ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.

ನಗರದ ಹಲವೆಡೆ ಮುಂಜಾನೆ 4 ಗಂಟೆಯಿಂದ ಜಿಟಿಜಿಟಿ ಮಳೆ; ಇಂದೂ ನಾಳೆ ಸಿಲಿಕಾನ್ ಸಿಟಿ ಜನಕ್ಕೆ ಮಳೆ ಕಾಟ
ಮಳೆ
TV9 Web
| Edited By: ಆಯೇಷಾ ಬಾನು|

Updated on:Nov 11, 2021 | 9:53 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಮುಂಜಾನೆ 4 ಗಂಟೆಯಿಂದ ಜಿಟಿಜಿಟಿ ಮಳೆ ಸುರಿಯುತ್ತಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಶಾಂತಿನಗರ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯ ಜೊತೆಗೆ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಇನ್ನೆರಡು ದಿನ ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿರಲಿದೆ. ಶಾಲಾ-ಕಾಲೇಜು, ಕೆಲಸಗಳಿಗೆ ತೆರಳೋರಿಗೆ ಮಳೆಯ ಕಿರಿಕಿರಿ ಉಂಟಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ಸಿಕ್ಕಿದೆ. ದಕ್ಷಿಣ ಒಳನಾಡು ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಮನಗರ ಜಿಲ್ಲೆಯಲ್ಲೂ ಮಳೆ ಮುಂದುವರೆದಿದೆ. ಬೆಳಗ್ಗೆಯಿಂದ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು ಮೋಡಕವಿದ ವಾತವರಣ ಕಂಡು ಬಂದಿದೆ.

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಆಗಾಗ ಸುರಿದ ಮಳೆ ನ. 12ರವರೆಗೆ ಮುಂದುವರಿಯಲಿದೆ. ಇಂದು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಆಗುತ್ತಿದೆ. ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ರಾಮನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆಯಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆ ಸಾಧ್ಯತೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ತಮಿಳುನಾಡಿನಲ್ಲೂ ವರುಣನ ಆರ್ಭಟ ಮುಂದುವರೆದಿದೆ. ಚೆನ್ನೈ, ತಿರುವಳ್ಳೂರ್, ಚೆಂಗಲ್‌ಪಟ್ಟು, ಕಾಂಚೀಪುರಂ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಂದೇ ದಿನ 20 ಸೆಂ.ಮಿಗೂ ಹೆಚ್ಚು ಮಳೆಯಾಗುವ ಸಾಧ್ಯತೆಗಳ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.

ಇದನ್ನೂ ಓದಿ: ದುಬಾರಿ ಪೆಟ್ರೋಲ್​ಗೆ ಹಣ ತೆತ್ತು ಸರ್ಕಾರವನ್ನು ಶಪಿಸುತ್ತಿರುವವರ ಚಿತ್ತ ಈಗ ಜಾಸ್ತಿ ಮೈಲೇಜ್ ನೀಡುವ ಇ-ಸ್ಕೂಟರ್​ಗಳತ್ತ!

Karnataka Dams Water Level: ಇನ್ನು 3 ದಿನ ರಾಜ್ಯಾದ್ಯಂತ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Published On - 8:49 am, Thu, 11 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ