AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain Havoc: ಕಂದಾಯ ಸಚಿವರ ಕ್ಷೇತ್ರದಲ್ಲಿ ಮಳೆ ಬಂದರೆ ಮನೆಗೆ ನೀರು ಬಂತು ಅಂತಲೇ ಲೆಕ್ಕ

ಕಂದಾಯ ಸಚಿವ ಆರ್​.ಅಶೋಕ ಪ್ರತಿನಿಧಿಸುವ ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ದತ್ತಾತ್ರೇಯ ನಗರದಲ್ಲಿ ಮೇ 17ರ ಸಂಜೆ ಸುರಿದ ಮಳೆಗೆ ಮನೆಗಳಿಗೆ ನೀರು ನುಗಿದ್ದು, ಗೃಹೋಪಯೋಗಿ ವಸ್ತುಗಳು ಹಾಳಾಗಿವೆ.

Bangalore Rain Havoc: ಕಂದಾಯ ಸಚಿವರ ಕ್ಷೇತ್ರದಲ್ಲಿ ಮಳೆ ಬಂದರೆ ಮನೆಗೆ ನೀರು ಬಂತು ಅಂತಲೇ ಲೆಕ್ಕ
ದತ್ತಾತ್ರೇಯ ನಗರದ 4ನೇ ಮುಖ್ಯರಸ್ತೆಯಲ್ಲಿ ಮಳೆ ನೀರು ನಿಂತಿರುವುದು
Srinivas Mata
|

Updated on: May 18, 2022 | 7:30 AM

Share

ಬೆಂಗಳೂರು: ಇಲ್ಲಿನ ಬನಶಂಕರಿ 3ನೇ ಹಂತದ ಹೊಸಕರೆಹಳ್ಳಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಅಕ್ಟೋಬರ್ 24, 2020ರಂದು ಹೊಸಕೆರೆಹಳ್ಳಿ ಹೆಸರು ರಾಷ್ಟ್ರ ಮಟ್ಟದಲ್ಲಿ ಕೇಳಿಬಂತು. ಅಲ್ಲಿನ ದತ್ತಾತ್ರೇಯ ನಗರದಲ್ಲಿ ಸುರಿದ ಸಂಜೆ ಮಳೆಗೆ (Rain havoc) ಮನೆಗಳಿಗೆ ನೀರು ನುಗ್ಗಿ, ಲಕ್ಷಾಂತರ ರೂಪಾಯಿ ಆಸ್ತಿ-ಪಾಸ್ತಿ ನಷ್ಟವಾಯಿತು. ಅದೇ ಮಳೆ ರಾತ್ರಿ ಎಲ್ಲರೂ ಮಲಗಿದ ಮೇಲೆ ಬಂದಿದ್ದರೆ ಹತ್ತಾರು ಮಂದಿ ಸಾವಿಗೆ ಕಾರಣವಾಗುತ್ತಿತ್ತು. ಮರುದಿನವೇ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಸಚಿವರಾದ ಅಶೋಕ್ ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿ ಪರಿಹಾರ ಘೋಷಿಸಿದರು. ಎನ್​ಡಿಆರ್​ಎಫ್​ನಲ್ಲಿ ಇರುವುದೇ 10 ಸಾವಿರ ರೂಪಾಯಿ ಪರಿಹಾರದ ಸಾಧ್ಯತೆ. ಆದರೆ 25 ಸಾವಿರ ರೂಪಾಯಿ ನೀಡಲಾಗುತ್ತಿದೆ ಎಂದಿದ್ದರು.

ಆ ಘಟನೆಯ ವೇಳೆ ಮುಖ್ಯಮಂತ್ರಿ ಆಗಿದ್ದ ಬಿ.ಎಸ್​.ಯಡಿಯೂರಪ್ಪ, ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಕೂಡ ಭೇಟಿ ನೀಡಿದ್ದರು. ಇಡೀ ಪ್ರದೇಶ ಕೆಸರಿನಿಂದ ತುಂಬಿ ಹೋಗಿದ್ದು, ಎರಡು ದಿನದೊಳಗಾಗಿ ಬಿಬಿಎಂಪಿಯವರು ಹಾಗೂ ಸ್ಥಳೀಯರ ಶ್ರಮದಿಂದಾಗಿ ಸಹಜ ಸ್ಥಿತಿಗೆ ಬಂತು. ಆ ವೇಳೆ ಸಚಿವರು ಈ ಪ್ರದೇಶದ ಒಳಚರಂಡಿಗಳನ್ನು ಸರಿ ಮಾಡಿಸುವುದಾಗಿ ಭರವಸೆ ನೀಡಿದ್ದರು. ಸಂಸದರು ಬಿಬಿಎಂಪಿ ಅಧಿಕಾರಿಗಳಿಗೆ ಮೂರು ದಿನದೊಳಗಾಗಿ ಪರಿಹಾರ ಯೋಜನೆಯೊಂದಿಗೆ ಬರುವಂತೆ ರೇಗಿಕೊಂಡಿದ್ದರು. ಆ ಘಟನೆಯ ನಂತರ ರಾಜಕಾಲುವೆಗಳ ಹೂಳೆತ್ತುವ ಕೆಲಸ, ಚರಂಡಿ ವಿಸ್ತರಣೆ ಮಾಡುವುದು ದತ್ತಾತ್ರೇಯ ದೇವಸ್ಥಾನ ಬಳಿ ಮೋರಿಯ ಕಾಂಪೌಂಡ್ ಎತ್ತರ ಮಾಡುವ ಕೆಲಸ ಹೀಗೆ ಎಲ್ಲವೂ ನಡೆದಿದೆ.

ಆದರೆ, ದತ್ತಾತ್ರೇಯ ನಗರ 3, 4 ಹಾಗೂ 5ನೇ ಮುಖ್ಯರಸ್ತೆಗಳಲ್ಲಿ ನೀರು ನಿಲ್ಲುವುದು, ಮನೆಗಳಿಗೆ ನೀರು ನುಗ್ಗುವುದು ಇನ್ನೂ ನಿಂತಿಲ್ಲ. ಅಂದರೆ, 2022ರ ಮೇ ತಿಂಗಳ 17ನೇ ತಾರೀಕಿಗೂ ನಿಂತಿಲ್ಲ. ಮಂಗಳವಾರ ಸಂಜೆ ಸುರಿದ ಮಳೆಗೆ ಅದೇ 3, 4 ಹಾಗೂ 5ನೇ ಮುಖ್ಯರಸ್ತೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮೊಳಕಾಲು ಎತ್ತರದಲ್ಲಿ ರಸ್ತೆಯಲ್ಲಿ ನೀರು ನಿಂತಿದೆ. ಅದರಲ್ಲೂ ಕಾರ್ಮಿಕ ವರ್ಗದವರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಇಲ್ಲಿನ ಬಾಡಿಗೆ ಮನೆಗಳ ಸ್ಥಿತಿ ಬಹಳ ಕಷ್ಟದಲ್ಲಿದೆ.

ಇದನ್ನೂ ಓದಿ: ಮಳೆಗೆ ಮುಳುಗುತ್ತಿದೆ ಬೆಂಗಳೂರು; ಬಿಬಿಎಂಪಿ ಅವೈಜ್ಞಾನಿಕ ಕಾಮಗಾರಿಯಿಂದ ಅಪಾಯದ ಅಂಚಿನಲ್ಲಿದೆ ಈ 10 ಪ್ರದೇಶಗಳು

ಐದಾರು ವರ್ಷದ ಹಿಂದಿನಿಂದ ಈ ಬಡಾವಣೆಯಲ್ಲಿ ಸಮಸ್ಯೆ ತಲೆ ಎತ್ತಿದೆ. ರಾಜಕಾಲುವೆಗಳ ಸರ್ವೇ ಮಾಡಿಸಬೇಕು. ಅನಧಿಕೃತವಾಗಿ ಮನೆ ಕಟ್ಟಿದವರು, ಅತಿಕ್ರಮಣ ಮಾಡಿದವರನ್ನು ತೆರವುಗೊಳಿಸಬೇಕು ಎನ್ನುತ್ತಾರೆ ಸ್ಥಳೀಯರಾದ ಸಂತೋಷ್. ಇನ್ನೂ ಮುಂದುವರಿದು, ಚರಂಡಿಗಳನ್ನು ಸರಿ ಮಾಡಿಸುವುದಕ್ಕೆ ಇಷ್ಟೆಲ್ಲ ಹಣ ಖರ್ಚು ಮಾಡಿದ ನಂತರವೂ ಇದೇ ಪರಿಸ್ಥಿತಿ ಇದೆ ಎಂದ ಮೇಲೆ ಆ ಬಗ್ಗೆಯೂ ಸೂಕ್ತ ತನಿಖೆ ಆಗಬೇಕು ಎಂದು ಆಗ್ರಹಿಸುತ್ತಾರೆ.

ಹೊಸಕೆರೆಹಳ್ಳಿ ವಾರ್ಡ್​ ಬಿಬಿಎಂಪಿ ಸದಸ್ಯರಾಗಿ ಆಯ್ಕೆ ಆಗಿದ್ದವರು, ಪದ್ಮನಾಭನಗರ ವಿಧಾನಸಭೆ ಕ್ಷೇತ್ರ ಹಾಗೂ ಬೆಂಗಳೂರು ಲೋಕಸಭೆ ಕ್ಷೇತ್ರ ಎಲ್ಲದರಲ್ಲೂ ಬಿಜೆಪಿಯಿಂದ ಆಯ್ಕೆ ಆದವರೇ ಇದ್ದಾರೆ. ಹಾಗಿದ್ದ ಮೇಲೆ ಸಂವಹನದ ಕೊರತೆಯಂತೂ ಇಲ್ಲ. ಸಮಸ್ಯೆ ಸರಿಪಡಿಸಬೇಕು ಎಂದು ಇಚ್ಛಾಶಕ್ತಿಯ ಕೊರತೆ ಎದ್ದುಕಾಣುತ್ತದೆ ಎನ್ನುತ್ತಾರೆ ಮತ್ತೊಬ್ಬ ಸ್ಥಳೀಯರಾದ ಕುಮಾರ್.

ಮೇ 17ರ ಮಂಗಳವಾರ ಸುರಿದ ಮಳೆಯ ಪ್ರಮಾಣಕ್ಕೆ ಈ ಪರಿಸ್ಥಿತಿ. ಇನ್ನು ಮಳೆಗಾಲದಲ್ಲಿ ಏನಾಗಬಹುದು. ಬೆಂಗಳೂರಿನ ಪ್ರಮುಖ ಭಾಗವಾಗಿರುವ ಈ ಪ್ರದೇಶದಲ್ಲಿ ಈಗಲೂ ಬಿಬಿಎಂಪಿಯ ಕಾನೂನುಗಳು ಅನ್ವಯ ಆಗುತ್ತಿಲ್ಲ. ರಸ್ತೆಯಲ್ಲಿ ತಮಗೆ ಬೇಕಾದಂತೆ ವಾಹನ ನಿಲುಗಡೆ, ಕಟ್ಟಡ ನಿರ್ಮಾಣ, ಜೋಪಡಿಗಳು, ಅನಧಿಕೃತ ನಿರ್ಮಾಣ ಹೀಗೆ ಸಾಕಷ್ಟು ಸಮಸ್ಯೆಗಳಿವೆ ಎಂದು ನಾಗರಿಕರು ದೂರುತ್ತಾರೆ.

ಇನ್ನಷ್ಟು ಬೆಂಗಳೂರು ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?