AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮನೆ ಕಟ್ಟಿಸುವವರು ಗಮನಿಸಿ: ಇನ್ಮುಂದೆ 30*40 ಸೈಟಿನಲ್ಲಿ ಮನೆ ಕಟ್ಟಲು ಮಳೆನೀರು ಕೊಯ್ಲು ಕಡ್ಡಾಯ

30*40 ಸೈಟ್ ಗಳಲ್ಲಿ ಈಗಾಗಲೇ ಮನೆಗಳನ್ನು ಕಟ್ಟಿರುವವರಿಗೆ ಈ ನಿಯಮದಿಂದ ವಿನಾಯಿತಿಯಿದೆ.

ಬೆಂಗಳೂರಿನಲ್ಲಿ ಮನೆ ಕಟ್ಟಿಸುವವರು ಗಮನಿಸಿ: ಇನ್ಮುಂದೆ 30*40 ಸೈಟಿನಲ್ಲಿ ಮನೆ ಕಟ್ಟಲು ಮಳೆನೀರು ಕೊಯ್ಲು ಕಡ್ಡಾಯ
ವಿಧಾನಸೌಧ
TV9 Web
| Edited By: |

Updated on: Sep 16, 2021 | 6:16 PM

Share

ವಿಧಾನಸಭೆ: ಬೆಂಗಳೂರಿನಲ್ಲಿ 30*40 ಸೈಟಿನಲ್ಲಿ ಮನೆ ಕಟ್ಟುವವರಿಗೆ ಇನ್ನು ಮುಂದೆ ಹೊಸ ಷರತ್ತು ಅನ್ವಯಗೊಳ್ಳಲಿದ್ದು, ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರಗೊಡಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ 30*40 ಚದರಡಿ ಮೇಲ್ಪಟ್ಟ ನಿವೇಶನದಲ್ಲಿ ಮನೆ ಕಟ್ಟುವವರಿಗೆ ಮಳೆನೀರು ಕೊಯ್ಲು ಕಡ್ಡಾಯವಾಗಲಿದೆ. 30*40 ಸೈಟ್ ಗಳಲ್ಲಿ ಈಗಾಗಲೇ ಮನೆಗಳನ್ನು ಕಟ್ಟಿರುವವರಿಗೆ ಈ ನಿಯಮದಿಂದ ವಿನಾಯಿತಿಯಿದೆ.

ಈ ವಿಧೇಯಕದ ಜತೆಗೆ  ಗುರುವಾರ (ಸೆಪ್ಟೆಂಬರ್ 16) ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ ತಿದ್ದುಪಡಿ ವಿಧೇಯಕಕ್ಕೆ  ಸಹ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

ಈ ಬಾರಿಯ ಕಲಾಪದಲ್ಲಿ ಮಂಡಿಸಲಾದ ಕೆಲವು ವಿಧೇಯಕಗಳು ವಿಧಾನಸಭೆಯಲ್ಲಿ ಸೆಪ್ಟೆಂಬರ್ 14ರಂದು ಒಟ್ಟು 10 ವಿಧೇಯಕಗಳನ್ನು ಮಂಡಿಸಲಾಗಿದೆ. ಬೆಂಗಳೂರು ನೀರು‌ ಸರಬರಾಜು ಮತ್ತು ಗ್ರಾಮಸಾರ ವ್ಯವಸ್ಥೆ ತಿದ್ದುಪಡಿ ವಿಧೇಯಕ, ಬಂಧಿಗಳ ಗುರುತಿಸುವಿಕೆ ವಿಧೇಯಕ, ದಂಡ ಪ್ರಕ್ರಿಯಾ ಸಂಹಿತೆ ವಿಧೇಯಕ, ಬಂಧೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕ, ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ ತಿದ್ದುಪಡಿ ವಿಧೇಯಕ, ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ, ಖಾದಿ ಮತ್ತು ಗ್ರಾಮೋದ್ಯೋಗಗಳ ತಿದ್ದುಪಡಿ ವಿಧೇಯಕ, ಪೌರಸಭೆಗಳ ಮತ್ತು ಇತರೆ ಕೆಲವು ಕಾನೂನು ತಿದ್ದುಪಡಿ ವಿಧೇಯಕ, ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ ವಿಧೇಯಕ, ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಲಾಗಿದೆ.

ಇದನ್ನೂ ಓದಿ: 

ವಿಧಾನಸಭೆಯಲ್ಲಿ ಜಿಪಂ, ತಾಪಂ ಚುನಾವಣೆ ಮುಂದೂಡಿಕೆ, ಮಳೆನೀರು ಕೊಯ್ಲು ಕಡ್ಡಾಯ ಪ್ರಸ್ತಾಪವಿರುವ ವಿಧೇಯಕಗಳ ಮಂಡನೆ

ಸಿದ್ದರಾಮಯ್ಯ ಮೊಬೈಲ್ ಬಳಸುತ್ತಾರಾ? ಲೋಕಸಭೆಗೆ ಸ್ಪರ್ಧಿಸುತ್ತಾರಾ? ಸಿದ್ದರಾಮಯ್ಯ ವಾಚಿಸಿದ ಭಾಮಿನಿ ಷಟ್ಪದಿ ಯಾವುದು?

(Rain Water Harvesting is Mandatory for the building of 30-40 homes in Bengaluru)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್