AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ! ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆ

ಕರ್ತವ್ಯಕ್ಕೆ ಕಚೇರಿಗೆ ತೆರಳಲು ಉದ್ಯೋಗಿಗಳು (Employees) ಪರದಾಡುತ್ತಿದ್ದಾರೆ. ವಿಧಾನಸೌಧ, ಮೆಜೆಸ್ಟಿಕ್, ಮಲ್ಲೇಶ್ವರಂ, ಶೇಷಾದ್ರಿಪುರಂ, ಕೆ.ಆರ್.ಮಾರುಕಟ್ಟೆ, ರಾಜಾಜಿನಗರ, ಬಸವನಗುಡಿ ಸೇರಿದಂತೆ ಹಲವೆಡೆ ಮಳೆ ಮುಂದುವರಿದಿದೆ.

ಬೆಂಗಳೂರಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ! ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:May 12, 2022 | 9:10 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru Rain) ನಿನ್ನೆ (ಮೇ 11) ರಾತ್ರಿಯಿಂದ ಮಳೆ ಸುರಿಯುತ್ತಿದೆ. ತುಂತುರು ಮಳೆಯಿಂದ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕರ್ತವ್ಯಕ್ಕೆ ಕಚೇರಿಗೆ ತೆರಳಲು ಉದ್ಯೋಗಿಗಳು (Employees) ಪರದಾಡುತ್ತಿದ್ದಾರೆ. ವಿಧಾನಸೌಧ, ಮೆಜೆಸ್ಟಿಕ್, ಮಲ್ಲೇಶ್ವರಂ, ಶೇಷಾದ್ರಿಪುರಂ, ಕೆ.ಆರ್.ಮಾರುಕಟ್ಟೆ, ರಾಜಾಜಿನಗರ, ಬಸವನಗುಡಿ ಸೇರಿದಂತೆ ಹಲವೆಡೆ ಮಳೆ ಮುಂದುವರಿದಿದೆ. ಈಗಾಗಲೇ ಅಸಾನಿ ಚಂಡಮಾರುತ ದುರ್ಬಲಗೊಂಡಿದ್ದರೂ ಇಂದಿನಿಂದ 4 ದಿನ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಮುಂದುವರೆಯುವ ನಿರೀಕ್ಷೆಯಿದೆ.

ಮೈಸೂರಿನಲ್ಲೂ ವರುಣನ ಆರ್ಭಟ ಮುಂದುವರಿದಿದೆ. ನಾಗಮಂಗಲ, ಅತ್ತಿಕುಪ್ಪೆ ಗ್ರಾಮದಲ್ಲಿ ತಂಬಾಕು ಸಸಿಗಳು ಜಲಾವೃತವಾಗಿವೆ. ಸಾಲಸೋಲಮಾಡಿ ಬೆಳೆದಿದ್ದ ತಂಬಾಕು ಬೆಳೆ ಸಂಪೂರ್ಣ ಜಲಾವೃತವಾದ ಹಿನ್ನೆಲೆ ಸೂಕ್ತ ಪರಿಹಾರ ನೀಡುವಂತೆ ಬೆಳೆಗಾರರು ಒತ್ತಾಯಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲೂ‌ ನಿರಂತರವಾಗಿ ಮಳೆ ಸುರಿಯುತ್ತಿದೆ. ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನಾಶವಾಗಿದೆ. ನಿರಂತರ ಸುರಿದ ಮಳೆಗೆ ಕೆಲವೆಡೆ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ. ದಾವಣಗೆರೆ ನಗರದ ರೈಲ್ವೆ  ಅಂಡರ್ ಪಾಸ್​ನಲ್ಲಿ‌ ನೀರು ತುಂಬಿಕೊಂಡ ಹಿನ್ನೆಲೆ ವಾಹನ ಸವಾರರು ಪರದಾಡುತ್ತಿದ್ದಾರೆ. ಜಿಲ್ಲೆಯಲ್ಲಿ ನಿನ್ನೆ ಮಧ್ಯಾಹ್ನದಿಂದ ‌ನಿರಂತರವಾಗಿ ಸುರಿಯುತ್ತಿದೆ.

ನೆಲಕ್ಕೆ ಉರುಳಿದ ವಿದ್ಯುತ್ ಕಂಬಗಳು, ಮರಗಳು: ಬಿರುಗಾಳಿ, ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮಾದಾಪುರ ಹೋಬಳಿಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಹಲವು ಮನೆಗಳ ಮೇಲೆ ವಿದ್ಯುತ್ ಕಂಬಗಳು, ಮರಗಳು ಬಿದ್ದಿವೆ. ವಿದ್ಯುತ್ ತಂತಿಗಳು ನೆಲಕ್ಕೆ ತಾಗುತ್ತಿದೆ. ಮೂರು ದಿನಗಳಿಂದ ಗ್ರಾಮದಲ್ಲಿ ವಿದ್ಯುತ್ ಇಲ್ಲದೇ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ಬಗ್ಗೆ ಬೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದರೂ ಕ್ರಮ ಕೈಗೊಂಡಿಲ್ಲ.

ಇಂದು ಗುಡುಗು ಸಹಿತ ಮಳೆ ಸಾಧ್ಯತೆ: ಇಂದು ಕೂಡ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ಇದನ್ನೂ ಓದಿ

ಕೊಪ್ಪಳದಲ್ಲಿ ಕಾಮಗಾರಿಗಾಗಿ ಅಗೆದ ಗುಂಡಿಯಲ್ಲಿ ಬಿದ್ದು ಬಾಲಕಿ ಸಾವು ಪ್ರಕರಣ; ಗುಂಡಿಯಲ್ಲಿ ಬಿಳುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಭಾರತಕ್ಕೆ ಶ್ರೀಲಂಕಾ ವಲಸಿಗರ ಪ್ರವೇಶ ತಡೆಯಲು ಕ್ರಮ: ಎರಡೂ ದೇಶಗಳ ನೌಕಾಪಡೆಗಳಿಂದ ಗಸ್ತು

Published On - 8:42 am, Thu, 12 May 22

ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?