AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತಕ್ಕೆ ಸರ್ಜರಿ: 11 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ, ರಜನೀಶ್ ಗೋಯೆಲ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ

ಮುಖ್ಯಕಾರ್ಯದರ್ಶಿ ನಿವೃತ್ತಿ ಮತ್ತು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಸ್ಥಾನವೂ ಶೀಘ್ರ ತೆರವಾಗುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಉನ್ನತ ಹುದ್ದೆಗಳಲ್ಲಿ ಮಹತ್ವದ ಬದಲಾವಣೆ ಮಾಡಿದೆ.

ಆಡಳಿತಕ್ಕೆ ಸರ್ಜರಿ: 11 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ, ರಜನೀಶ್ ಗೋಯೆಲ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ
ಐಎಎಸ್ ಅಧಿಕಾರಿಗಳ ವರ್ಗಾವಣೆ
TV9 Web
| Edited By: |

Updated on:May 30, 2022 | 11:05 AM

Share

ಬೆಂಗಳೂರು: ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ (P Ravikumar) ಅವರು ಮೇ 31ಕ್ಕೆ ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ವಂದಿತಾ ಶರ್ಮಾ ಅವರನ್ನು ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಗುರುತಿಸಿದೆ. 1986ನೇ ಬ್ಯಾಚ್ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಪ್ರಸ್ತುತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನವೆಂಬರ್ 2023ಕ್ಕೆ ವಂದಿತಾ ಶರ್ಮಾ ಅವರು ನಿವೃತ್ತರಾಗಲಿದ್ದಾರೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಅವಧಿಯಲ್ಲಿ ಅವರೇ ಮುಖ್ಯಕಾರ್ಯದರ್ಶಿಯಾಗಿರುತ್ತಾರೆ.

ಮುಖ್ಯಕಾರ್ಯದರ್ಶಿ ನಿವೃತ್ತಿ ಮತ್ತು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಸ್ಥಾನವೂ ಶೀಘ್ರ ತೆರವಾಗುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಉನ್ನತ ಹುದ್ದೆಗಳಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಒಟ್ಟ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಆಯಕಟ್ಟಿನ ಜಾಗಗಳಿಗೆ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತಕ್ಕೆ ಚುರುಕು ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ.

ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ. ರಜನೀಶ್ ಗೋಯಲ್ ಅವರರಿಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿಯನ್ನೂ ನೀಡಲಾಗಿದೆ. ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಅವರಿಗೆ ಬೆಂಗಳೂರಿನ ಅಭಿವೃದ್ಧಿ ಆಯುಕ್ತ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ.

ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

Rajaneesh Goel will be additional Chief Secretary Govt Transfers 11 Senior IAS Officers

ಅಧಿಕಾರಿಗಳ ವರ್ಗಾವಣೆ ವಿವರ

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಡಾ.ರಾಮ್ ಪ್ರಸಾದ್ ಮನೋಹರ್ ಅವರನ್ನು ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಕಮೀನಷರ್ (ಪೂರ್ವ) ಹುದ್ದೆಗೆ, ಸಣ್ಣ ಮತ್ತ ಮಧ್ಯಮ ಕೈಗಾರಿಕೆ ನಿರ್ದೇಶಕ ವಿನೋತ್ ಪ್ರಿಯಾ ಅವರನ್ನು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಹುದ್ದೆಗೆ, ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಆಯುಕ್ತ ಡಿಎಸ್.ರಮೇಶ್ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಮಹಾ ನಗರ ಪಾಲಿಕೆ (ಕಲ್ಯಾಣ) ವಿಶೇಷ ಆಯುಕ್ತರಾಗಿದ್ದ ಶರತ್ ಅವರನ್ನು ಕೃಷಿ ಇಲಾಖೆ ಆಯುಕ್ತ ಹುದ್ದೆಗೆ ವರ್ಗಾವಣೆಯಾಗಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ನಿರ್ದಶಕಿ ಸಿ.ಸತ್ಯಭಾಮಾ ಅವರನ್ನು ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಅಧಿಕಾರಿ ಎಸ್​.ಜೆ.ಸೋಮಶೇಖರ್ ಅವರನ್ನು ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:05 am, Mon, 30 May 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ