AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಗೆಲವು; ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿಗೆ ಧನ್ಯವಾದ ತಿಳಿಸಿದ ನಿರ್ಮಲಾ ಸೀತಾರಾಮನ್

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಅವರು ಜಯಗಳಿಸಿದ್ದು,  ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದಾರೆ.

ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಗೆಲವು; ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿಗೆ ಧನ್ಯವಾದ ತಿಳಿಸಿದ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮ್​ಗೆ ಸಭಿನಂದನೆ ಸಲ್ಲಿಸುತ್ತಿರುವ ಬಿಜೆಪಿ ನಾಯಕರು
TV9 Web
| Edited By: |

Updated on:Jun 10, 2022 | 10:21 PM

Share

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ (Rajya Sabha) ಬಿಜೆಪಿ (BJP) ಅಭ್ಯರ್ಥಿ ನಿರ್ಮಲಾ (Nirmala Sitharaman) ಸೀತಾರಾಮನ್ ಅವರು ಜಯಗಳಿಸಿದ್ದು,  ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದಾರೆ. ವಿಧಾನಸೌಧದ ಸಿಎಂ ಬೊಮ್ಮಾಯಿ ಕಚೇರಿಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ, ಮುನಿರತ್ನ , ಬೈರತಿ ಬಸವರಾಜ್ ಸೇರಿದಂತೆ ಇನ್ನೂ ಅನೇಕ ಮುಖಂಡರು ನಿರ್ಮಲಾ ಸೀತಾರಾಮನ್ ಅವರಿಗೆ ಶುಭಾಶಯ ಹೇಳಿದ್ದಾರೆ.

ರಾಜ್ಯಸಭೆ ಚುನಾವಣೆ​ಯಲ್ಲಿ ಗೆಲವು ಸಾಧಿಸಿದ ನಿರ್ಮಲಾ ಸೀತಾರಾಮನ್ ಬೆಂಗಳೂರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಳೀನ್ ಕುಮಾರ್ ಕಟೀಲ್ ಅವರಿಗೆ ಧನ್ಯವಾದ ಹೇಳಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರ ಆಶೀರ್ವಾದದಿಂದ 2 ಬಾರಿ ಆಯ್ಕೆ ಸಾಧ್ಯವಾಯಿತು. ರಾಜ್ಯದ ಜನರ ಸೇವೆಗೆ 2ನೇ ಬಾರಿ ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳುತ್ತೇನೆ.

ಇದನ್ನು ಓದಿ: ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್​ ಸಿಂಗ್, ಜೈರಾಮ್ ರಮೇಶ್​ಗೆ ಗೆಲುವು

ರಾಜ್ಯದ ಜನತೆಗೆ ಸೇವೆ ಮಾಡಲು ಎರಡನೇ ಅವಕಾಶ ಸಿಕ್ಕಿದ್ದಕ್ಕೆ ಎಲ್ಲರಿಗೂ ಧನ್ಯವಾದ. ರಾಜ್ಯ ಬಿಜೆಪಿ, ಪ್ರತಿಯೊಬ್ಬ ಕಾರ್ಯಕರ್ಯರಿಗೂ ಧನ್ಯವಾದ ತಿಳಿಸುತ್ತೇನೆ. ಹೊಸ ಸದಸ್ಯರಾದ ಜಗ್ಗೇಶ್, ಲೆಹರ್ ಸಿಂಗ್ ಗೆ ಅಭಿನಂದನೆ ತಿಳಿಸುತ್ತೇನೆ. ಅಬ್ಸರ್ ವರ್ ಗಳಾದ ಕಿಶನ್ ರೆಡ್ಡಿ, ಸಿಟಿ ರವಿಗೆ ಧನ್ಯವಾದ ತಿಳಿಸುತ್ತೇನೆ. ಕಳೆದ ಹತ್ತು ದಿನಗಳಿಂದ ರೂಪಿಸಿದ ತಂತ್ರದಿಂದ ನಾವೂ ಗೆಲುವು ಸಾಧಿಸಿದ್ದೇವೆ ಎಂದರು.

ಇನ್ನು ರಾಜ್ಯಕ್ಕೆ ನಿರ್ಮಲಾ ಸೀತಾರಾಮನ್ ಕೊಡುಗೆ ಶೂನ್ಯ ಎಂಬ ಟೀಕೆ ವಿಚಾರವಾಗಿ ಮಾತನಾಡಿದ ಅವರು ವಿಪಕ್ಷಗಳ ಆರೋಪದಲ್ಲಿ ಸತ್ಯಾಂಶವಿಲ್ಲ. ಸತ್ಯಾಂಶ ಗೊತ್ತಿಲ್ಲದೆ ವಿರೋಧ ಪಕ್ಷದವರು ಆರೋಪ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ಕೊವಿಡ್ ವೇಳೆ ಹಲವು ಕಾರ್ಯಕ್ರಮ ಕೊಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:17 pm, Fri, 10 June 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್