AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್ ಖರ್ಗೆ

ಜೂನ್ 18 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಹಸ್ತಾಂತರಿಸಿದ ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹೈಕಮಾಂಡ್ ಹಾಗೂ ರಾಜ್ಯದ ಪ್ರಮುಖ ನಾಯಕರು ಉಪಸ್ಥಿತರಿದ್ದು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್ ಖರ್ಗೆ
ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್ ಖರ್ಗೆ
ಭಾವನಾ ಹೆಗಡೆ
|

Updated on:Jun 05, 2026 | 2:54 PM

Share

ಬೆಂಗಳೂರು, ಜೂನ್ 05: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಜೂನ್ 18 ರಂದು ಕರ್ನಾಟಕದ 4 ಸ್ಥಾನಗಳು ಸೇರಿದಂತೆ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್​ನ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಇಂದು  ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಮುಖ್ಯಾಂಶಗಳು

  • ಜೂನ್ 18ರ ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ನಾಮಪತ್ರ ಸಲ್ಲಿಕೆ.
  • ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.
  • ರಾಹುಲ್ ಗಾಂಧಿ, ಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರ ಒಗ್ಗಟ್ಟು ಪ್ರದರ್ಶನ.

ಕಾಂಗ್ರೆಸ್ ವರಿಷ್ಠರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ

ವಿಧಾನಸಭೆ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಖರ್ಗೆ ನಾಮಪತ್ರವನ್ನು ಸಲ್ಲಿಸಿದ್ದಾರೆ. ಪಕ್ಷದ ಹೈಕಮಾಂಡ್ ಮತ್ತು ರಾಜ್ಯ ನಾಯಕರ ದಂಡೇ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಿರಿಯ ಸಚಿವರಾದ ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ, ಭೈರತಿ ಸುರೇಶ್ ಮತ್ತು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಮ್ಮ ಎಲ್ಲಾ ಶಾಸಕರು ಮತ್ತು ನಾಯಕರು ನನ್ನನ್ನು ಒಮ್ಮತದಿಂದ ಆಯ್ಕೆ ಮಾಡಿದ್ದಾರೆ. ಜೂನ್ 18 ರ ಚುನಾವಣೆಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Fri, 5 June 26

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ