Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವಿಚಾರ: ಅನುಮತಿ ಪಡೆದು ಕಟೌಟ್ ಹಾಕಿದ್ದರೂ FIR ದಾಖಲು

ರಾಜ್ಯದ ಜಿಲ್ಲೆ ಜಿಲ್ಲೆಯಲ್ಲೂ ರಾಮಜಪ ನಡೆಯುತ್ತಿದೆ. ಇದರ ನಡುವೆ ಕೋಲಾರದಲ್ಲಿ ಕಿಡಿಗೇಡಿಗಳು  ಶ್ರೀರಾಮನ ಫ್ಲೆಕ್ಸ್‌ ಹರಿದು ಶಾಂತಿ ಕದಡುವ ಪ್ರಯತ್ನ ಮಾಡಿದ್ದರು. ಇದರ ಮುಂದುವರೆದ ಭಾಗವಾಗಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅನುಮತಿ ಪಡೆದು ಕಟೌಟ್ ಹಾಕಿದ್ದರೂ ಪೊಲೀಸರಿಂದ FIR ದಾಖಲು ಮಾಡಲಾಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವಿಚಾರ: ಅನುಮತಿ ಪಡೆದು ಕಟೌಟ್ ಹಾಕಿದ್ದರೂ FIR ದಾಖಲು
ಕಟೌಟ್
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: Jan 17, 2024 | 7:41 PM

ಬೆಂಗಳೂರು, ಜನವರಿ 17: ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳಲಿದೆ. ಅನುಮತಿ ಪಡೆದು ಕಟೌಟ್ ಹಾಕಿದ್ದರೂ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲು ಮಾಡಲಾಗಿದೆ. ಶಿವನಗರ ಯುವಕರ ಸಂಘದಿಂದ ಬೆಸ್ಕಾಂಗೆ ಹಣ ಪಾವತಿಸಿ, ಅನುಮತಿ ಪಡೆದು ಕಾರ್ಡ್‌ ರಸ್ತೆಯ ವಾರಿಯರ್ ಬೇಕರಿ ಬಳಿ ಬೃಹತ್ ಕಟೌಟ್ ಅಳವಡಿಸಲಾಗಿದೆ. ರಾಜಾಜಿನಗರ ಪೊಲೀಸರ ನಡೆಗೆ ಶಿವನಗರ ಯುವಕರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಜಿಲ್ಲೆ ಜಿಲ್ಲೆಯಲ್ಲೂ ರಾಮಜಪ ನಡೆಯುತ್ತಿದೆ. ಇದರ ನಡುವೆ ಕೋಲಾರದಲ್ಲಿ ಕಿಡಿಗೇಡಿಗಳು  ಶ್ರೀರಾಮನ ಫ್ಲೆಕ್ಸ್‌ ಹರಿದು ಶಾಂತಿ ಕದಡುವ ಪ್ರಯತ್ನ ಮಾಡಿದ್ದರು. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲೂ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಸಂಕ್ರಾಂತಿ ಸಂಬಂಧ ಶುಭ ಕೋರಿ ಫ್ಲೆೇಕ್ಸ್ ಅಳವಡಿಸಲಾಗಿತ್ತು.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಧರ್ಮಸ್ಥಳದಿಂದ ಪೂಜಾ ಪರಿಕರಗಳು ರವಾನೆ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಿಷ್ಟು

ರಾತ್ರಿ 10:40 ರ ಸುಮಾರಿಗೆ ಬಂದ ದುಷ್ಕರ್ಮಿ, ಕೈಯಲ್ಲಿದ್ದ ಚಾಕುವಿನಿಂದ ಫ್ಲೆಕ್ಸ್‌ ಹರಿದಿದ್ದಾನೆ. ಮುಂದೆ ಹೋದವನು ಮತ್ತೆ ವಾಪಸ್ ಆಗಿ ಇನ್ನೊಮ್ಮೆ ಚಾಕು ಹಾಕಿ ಅಲ್ಲಿಂದ ಕಾಲ್ಕಿತ್ತಿದ್ದ. ಇನ್ನೊಂದು ಸ್ಪಾಟ್‌ನಲ್ಲೂ ಇದೇ ರೀತಿ ಪ್ಲೆಕ್ಸ್‌ ಹರಿದು ಹಾಕಲಾಗಿತ್ತು. ವಿಠಲೇಶ್ವರಪಾಳ್ಯ ಮತ್ತು ಗುನುಗುಂಟೆಪಾಳ್ಯದಲ್ಲಿ ಹಾಕಲಾಗಿದ್ದ ಫ್ಲೆಕ್ಸ್​ಗಳನ್ನು ಹರಿದಿದ್ದಾರೆ.

ಬೆಳಗ್ಗೆ ವಿಷ್ಯ ಗೊತ್ತಾಗುತ್ತಿದ್ದಂತೆ ಬಿಜೆಪಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶಗೊಂಡಿದ್ದರು. ಸ್ಥಳಕ್ಕಾಗಿಮಿಸಿದ ಸಂಸದ ಮುನಿಸ್ವಾಮಿ ಪ್ರತಿಭಟನೆ ಆರಂಭಿಸಿದ್ದರು. ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದರು. ಈ ವೇಳೆ ಜೆಡಿಎಸ್‌ ಶಾಸಕ ಸಮೃದ್ಧಿ ಮಂಜುನಾಥ್‌ ಸ್ಪಾಟ್‌ಗೆ ಬರ್ತಿದ್ದಂತೆ ಇಬ್ಬರ ನಡುವೆ ಮಾತಿನಚಕಮಕಿ ಉಂಟಾಗಿತ್ತು.

ಇದನ್ನೂ ಓದಿ: ಕೋಲಾರ: ಶ್ರೀರಾಮನ ಕಟೌಟ್, ಪ್ಲೆಕ್ಸ್​​ನ್ನು ಬ್ಲೇಡ್​​ನಿಂದ ಹರಿದ ದುಷ್ಕರ್ಮಿಗಳು, ಇಬ್ಬರ ಬಂಧನ

ಬಿಜೆಪಿ ಹೋರಾಟ ಜೋರಾಗುತ್ತಿದ್ದಂತೆ ಜಾಹೀರ್‌ ಹಾಗೂ ಮತ್ತೊಬ್ಬ ಆರೋಪಿಯನ್ನ ಅರೆಸ್ಟ್‌ ಮಾಡಲಾಗಿದೆ. ಹರಿದಿದ್ದ ಫ್ಲೆಕ್ಸ್‌ ತೆರವುಗೊಳಿಸಿ ಹೊಸ ಫ್ಲೆಕ್ಸ್ ಅಳವಡಿಸಲಾಗಿದೆ. ಹೊಸ ಫ್ಲೆಕ್ಸ್ ಹಾಕ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಸಂಭ್ರಮದ ಹೊತ್ತಲ್ಲೇ ಕೆಲ ಕಿಡಿಗೇಡಿಗಳು ದುಷ್ಕೃತ್ಯ ಎಸಗಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಸದ್ಯ ಮುಳಬಾಗಿಲು ಬೂದಿಮುಚ್ಚಿದ ಕೆಂಡದಂತಿದ್ದು ಪೊಲೀಸರು ನಿಗಾವಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ