AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಕಂಪದ ಆಧಾರದ ಮೇಲೆ 49 ಜನರಿಗೆ ಸಾರಿಗೆ ಸಂಸ್ಥೆಯಲ್ಲಿ ಹುದ್ದೆ: ಸಚಿವ ರಾಮಲಿಂಗಾರೆಡ್ಡಿ

ಸಾರಿಗೆ ಇಲಾಖೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ 49 ಮೃತಾವಲಂಬಿತರಿಗೆ ಕರ್ನಾಟಕ ರಸ್ತೆ ಸಾರಿಗೆ ಪೇದೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಸುವರ್ಣಸೌಧದಲ್ಲಿ ಸಾಂಕೇತಿಕವಾಗಿ 10 ಜನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಣೆ ಮಾಡಿದ್ದಾರೆ.

ಅನುಕಂಪದ ಆಧಾರದ ಮೇಲೆ 49 ಜನರಿಗೆ ಸಾರಿಗೆ ಸಂಸ್ಥೆಯಲ್ಲಿ ಹುದ್ದೆ: ಸಚಿವ ರಾಮಲಿಂಗಾರೆಡ್ಡಿ
ನೇಮಕಾತಿ ಆದೇಶ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ
ಗಂಗಾಧರ​ ಬ. ಸಾಬೋಜಿ
|

Updated on: Dec 14, 2023 | 10:47 PM

Share

ಬೆಂಗಳೂರು, ಡಿಸೆಂಬರ್​​ 14: ಸಾರಿಗೆ ಇಲಾಖೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಯಲ್ಲಿ ಅನುಕಂಪದ ಆಧಾರದ ಮೇಲೆ 49 ಮೃತಾವಲಂಬಿತರಿಗೆ ಕರ್ನಾಟಕ ರಸ್ತೆ ಸಾರಿಗೆ ಪೇದೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಇಂದು ಸುವರ್ಣಸೌಧದಲ್ಲಿ ಸಾಂಕೇತಿಕವಾಗಿ 10 ಜನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಣೆ ಮಾಡಿದ್ದಾರೆ.

ಸದ್ಯ ಈ ಕುರಿತಾಗಿ ಸಚಿವ ರಾಮಲಿಂಗಾರೆಡ್ಡಿ ಟ್ವೀಟ್ ಮಾಡಿದ್ದು, ಮಾಹಿತಿಯೊಂದಿಗೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಟ್ವೀಟ್

ಈ ಸಂದರ್ಭಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್.ಎಸ್, ಭಾಆಸೇ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಬರೆದುಕೊಂಡಿದ್ದಾರೆ.

ಉದ್ಯೋಗಾಂಕ್ಷಿಗಳಿಗೆ ಗುಡ್​ ನ್ಯೂಸ್ ನೀಡಿದ ರಾಮಲಿಂಗಾರೆಡ್ಡಿ

ಶಕ್ತಿ ಯೋಜನೆ ಜಾರಿ ನಂತರ ಪ್ರತಿದಿನ 1.5 ಕೋಟಿ ಮಹಿಳೆಯರು ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಶಕ್ತಿ ಯೋಜನೆಯಿಂದ ನಮ್ಮ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಲ್ಲಿ 15-20 ಲಕ್ಷ ಜನರ ಸಂಖ್ಯೆ ಹೆಚ್ಚಾಗಿದೆ. 4 ವರ್ಷ ಸತತವಾಗಿ ಬಸ್ ಖರೀದಿ ಮಾಡಿಲ್ಲ. 2016ರ ನಂತರ ಸಿಬ್ಬಂದಿ ನೇಮಕಾತಿಯೂ ಆಗಲಿಲ್ಲ. ಈಗ 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ಆ ಮೂಲಕ ಉದ್ಯೋಗಾಂಕ್ಷಿಗಳಿಗೆ ಗುಡ್​ ನ್ಯೂಸ್​ ನೀಡಿದ್ದಾರೆ.

ಶಕ್ತಿ ಯೋಜನೆ ಜಾರಿಯಾದ ನಂತರ ರಸ್ತೆ ಸಾರಿಗೆ ನಿಗಮಗಳಲ್ಲಿ ಆದಾಯ ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!