AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು; 702 ದಿನಗಳ ಸತತ ಚಿಕಿತ್ಸೆಯ ನಂತರವೂ ಬದುಕುಳಿಯಲಿಲ್ಲ ಜೀವ

ಗಾಯಗೊಂಡಿದ್ದ ಪ್ರಿಷಾಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತಿತ್ತು. ಆದ್ರೆ ಅಂದಿನಿಂದ ಇಂದಿನವರೆಗೂ ಆಸ್ಪತ್ರೆಯಲ್ಲೇ ಸುಮಾರು 702 ದಿನಗಳ ಸತತ ಚಿಕಿತ್ಸೆಯ ನಂತರವೂ ಪ್ರಿಷಾ ಬದುಕುಳಿಯಲಿಲ್ಲ. ಬದುಕಿನ ಯುದ್ಧದಲ್ಲಿ ಹೋರಾಡುತ್ತಲೇ ಪ್ರಾಣ ಬಿಟ್ಟಿದ್ದಾರೆ.

ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು; 702 ದಿನಗಳ ಸತತ ಚಿಕಿತ್ಸೆಯ ನಂತರವೂ ಬದುಕುಳಿಯಲಿಲ್ಲ ಜೀವ
ಬಾಲಕಿ ಪ್ರಿಷಾ
TV9 Web
| Edited By: |

Updated on:Feb 11, 2022 | 11:53 AM

Share

ಬೆಂಗಳೂರು: ಶಾಲೆಗೆ ಹೋಗುವಾಗ ಮರದ ಕೊಂಬೆ ಮುರಿದು ಬಿದ್ದು ಗಾಯಗೊಂಡಿದ್ದ ಬಾಲಕಿ ಪ್ರಿಷಾ(9) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಸುಮಾರು 702 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಪ್ರಿಷಾ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಳೆ. ಮುದ್ದು ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. 702 ದಿನಗಳ ಸತತ ಚಿಕಿತ್ಸೆಯ ನಂತರವೂ ಪ್ರಿಷಾಳನ್ನು ಉಳಿಸಿಕೊಳ್ಳಲಾಗಿಲ್ಲ.

2020ರ ಮಾರ್ಚ್ 11ರಂದು ಪ್ರಿಷಾ ತಂದೆ ಜತೆ ಸ್ಕೂಟಿಯಲ್ಲಿ ಸ್ಕೂಲ್​ಗೆ ಹೊರಟಿದ್ದಳು. ಈ ವೇಳೆ ರಾಮಮೂರ್ತಿನಗರದ ಕೌದೇನಹಳ್ಳಿ ಬಳಿ ಒಣಗಿದ ರೆಂಬೆ ಬಿದ್ದು ಬಾಲಕಿ ಪ್ರಿಷಾ ತೀವ್ರವಾಗಿ ಗಾಯಗೊಂಡಿದ್ದಳು. ಬಾಲಕಿಯ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಕೂಡ್ಲೇ ಆಕೆಯನ್ನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೀಗೆ 702 ದಿನಗಳಿಂದಲೂ ಆಸ್ಪತ್ರೆಯಲ್ಲೇ ಟ್ರೀಟ್‌ಮೆಂಟ್‌ ಪಡೆಯುತ್ತಿದ್ದ ಪ್ರಿಶಾ, ಇವತ್ತು ಚಿಕಿತ್ಸೆ ಫಲಿಸದೇ ಪ್ರಾಣ ಬಿಟ್ಟಿದ್ದಾಳೆ.

ಸ್ಕೂಲ್‌ನಲ್ಲಿ ಎಲ್ಲಾ ವಿದ್ಯಾರ್ಥಿಗಳಿಗಿಂತ ಮುಂದಿದ್ದ ಬಾಲಕಿ, ಹಾಡು ಡ್ಯಾನ್ಸ್‌ ಅಂತಾ ಚೂಟಿಯಾಗಿದ್ಲು. ಒಬ್ಬೇ ಮಗಳು ಆಗಿದ್ರಿಂದ ಹೆತ್ತವರು ಕೂಡಾ ಮುದ್ದಾಗಿ ಬೆಳೆಸಿದ್ರು. ಆದ್ರೆ ವಿಧಿಯಾಟವೇ ಬೇರೆಯಾಗಿತ್ತು. ಇನ್ನು ಈ ಅವಘಡದ ಬಗ್ಗೆ ಗೊತ್ತಾಗ್ತಿದ್ದಂತೆ ನಟ ಸುದೀಪ್‌ ಕೂಡಾ ವಿಡಿಯೋ ಕಾಲ್‌ ಮಾಡಿ ಪುಟಾಣಿಯ ಆರೋಗ್ಯ ವಿಚಾರಿಸಿದ್ರು. ಪ್ರಿಶಾಗೆ ಧೈರ್ಯ ತುಂಬಿದ್ರು. ಅಷ್ಟೇ ಅಲ್ಲ ಒಬ್ಬ ವೈದ್ಯರನ್ನೂ ಪ್ರಿಶಾಳ ಚಿಕಿತ್ಸೆಗೆ ನೇಮಕ ಮಾಡಿದ್ರಂತೆ. ಮಾಜಿ ಸಿಎಂ ಕುಮಾರ ಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ಈ ಆಸ್ಪತ್ರೆಗೆ ಬಂದಾಗ ಆರೋಗ್ಯ ವಿಚಾರಿಸಿದ್ರು. ಇಷ್ಟೆಲ್ಲಾ ಆದ್ರೂ ಪ್ರಿಶಾ ಮಾತ್ರ ಬದುಕುಳಿಯಲೇ ಇಲ್ಲ. ಬರೋಬ್ಬರಿ 700 ದಿನ ಚಿಕಿತ್ಸೆ ನೀಡಿರೋದ್ರಿಂದ ಅಂದಾಜು 80 ಲಕ್ಷ ರೂಪಾಯಿ ಬಿಲ್‌ ಆಗಿದೆ. ಶುಲ್ಕ ಭರಿಸುವ ಭರವಸೆ ನೀಡಿದ್ದ ಪಾಲಿಕೆ ಇದನ್ನ ಬರಿಸೋ ಸಾಧ್ಯತೆ ಇದೆ. ಅದೇನೇ ಇದ್ರೂ ಒಣಗಿ ಹೋಗಿದ್ದ ಮರದ ರೆಂಬೆಗೆ ಬಾಲಕಿ ಬಲಿಯಾಗಿದ್ದು ನಿಜಕ್ಕೂ ದುರಂತ. ಪಾಲಿಕೆ ಇನ್ನಾದ್ರೂ ಇಂಥಾ ರೆಂಬೆ ಕೊಂಬೆಗಳನ್ನ ತೆಗೆಸಿ ಅನಾಹುತಗಳನ್ನ ತಪ್ಪಿಸಬೇಕಿದೆ .

ಇದನ್ನೂ ಓದಿ: ಕಸ ಎಸೆಯಲು ಬಂದ ವ್ಯಕ್ತಿ ಮೇಲೆ ಬಿದ್ದ ಕೊಂಬೆ, ಸ್ಥಳದಲ್ಲೇ ಸಾವು

Published On - 11:45 am, Thu, 10 February 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ